ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ತಂಬಾಕು ಬೆಳೆಗಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 22 Jul 2018, 5:00 am
ಹುಣಸೂರು :ಸಾಲಬಾಧೆ ತಾಳಲಾರದೆ ತಂಬಾಕು ಬೆಳೆಗಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web debt farmers suicide
ಸಾಲಬಾಧೆ: ರೈತ ಆತ್ಮಹತ್ಯೆ


ತಟ್ಟೆಕೆರೆ ಗ್ರಾಮದ ಲೇ.ಸಿದ್ದೇಗೌಡರ ಪುತ್ರ ಟಿ.ಎಸ್‌.ವಸಂತ(35) ಮೃತರು.

ವಸಂತ ಅವರು ಗ್ರಾಮದಲ್ಲಿ 3.5 ಎಕರೆ ಜಮೀನು ಹೊಂದಿದ್ದು, ತಂಬಾಕು ಸಿಂಗಲ್‌ ಬ್ಯಾರನ್‌ ಲೈಸನ್ಸ್‌ ಹೊಂದಿದ್ದರು. ಹುಣಸೂರಿನ ಬ್ಯಾಂಕಿನಲ್ಲಿ ಮೂರು ವರ್ಷಗಳ ಹಿಂದೆ 3.75 ಲಕ್ಷ ರೂ. ಬೆಳೆ ಸಾಲ ಮಾಡಿದ್ದರು. ಕಳೆದ ಎರಡು ವರ್ಷಗಳಿಂದ ತಂಬಾಕು ಬೆಳೆ ಕೈಕೊಟ್ಟಿದ್ದರಿಂದ ಸಾಲ ತೀರಿಸಲಾಗದೆ ಬೇಸತ್ತಿದ್ದರು. ಸರಕಾರ ಸಾಲ ಮನ್ನಾ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಬ್ಯಾಂಕಿನ ಸಾಲ ಮನ್ನಾ ಆಗಿದ್ದರೆ ಹೊಸ ಸಾಲ ಕೇಳಲು ಬ್ಯಾಂಕಿಗೆ ಬಂದಾಗ ಸಾಲ ಮನ್ನಾವಾಗದಿರುವುದು ತಿಳಿದು ಮನನೊಂದು, ಹನಗೋಡು ರಸ್ತೆಯ ಅಮಗಟಹಳ್ಳಿ ಬಸ್‌ ತಂಗುದಾಣದ ಎದುರು ಬೈಕ್‌ ನಿಲ್ಲಿಸಿ ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾರೆ ಎಂದು ಪತ್ನಿ ಕುಸುಮ ದೂರಿನಲ್ಲಿ ತಿಳಿಸಿದ್ದಾರೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರೈತನ ಮನೆಗೆ ಶಾಸಕ ಎಚ್‌.ವಿಶ್ವನಾಥ್‌ ಭೇಟಿ ನೀಡಿ ಸಾಂತ್ವನ ಹೇಳಿದರು.

ತಾ.ಪಂ.ಸದಸ್ಯ ಶ್ರೀನಿವಾಸ್‌, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್‌, ತಹಸೀಲ್ದಾರ್‌ ಮೋಹನ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ