ಆ್ಯಪ್ನಗರ

ಮೈಸೂರು: ಹೊಸ ವರ್ಷದಂದು ಈ ದೇವಸ್ಥಾನದಲ್ಲಿ ಭಕ್ತರಿಗೆ ಸಿಗಲಿದೆ ವಿಶೇಷ ಲಡ್ಡು

ಮೈಸೂರಿನ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಅಂಗವಾಗಿ ಲಡ್ಡು ಹಂಚಲು ತೀರ್ಮಾನಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಲಡ್ಡು ವಿತರಣೆ ಮಾಡುವ ಕಾರ್ಯವನ್ನು ದೇವಸ್ಥಾನದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ.

Vijaya Karnataka Web 27 Dec 2019, 5:10 pm
ಮೈಸೂರು: ಲಡ್ಡು ಅಂದ್ರೆ ಯಾರಿಗೆ ತಾನೇ ಇಷ್ಟವಿರೋಲ್ಲ ಹೇಳಿ? ಅದರಲ್ಲೂ ದೇವರ ಪ್ರಸಾದದ ಲಡ್ಡು ನೆನೆಸಿಕೊಂಡರೆ ಸಾಕು ಅದರ ರುಚಿಗೆ ಬಾಯಿಯಲ್ಲಿ ನೀರು ಬರುತ್ತದೆ. ಅಂತಹ ಲಡ್ಡುವನ್ನು ಪ್ರತಿವರ್ಷದಂತೆ ಈ ವರ್ಷವೂ ಸಹ ಮೈಸೂರಿನ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಅಂಗವಾಗಿ ಹಂಚಲು ಮುಂದಾಗಿದ್ದಾರೆ.
Vijaya Karnataka Web laddu


ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದಂದು ಅಂದರೆ ಜ.1ರಂದು ಬೆಳಿಗ್ಗೆ 4ರಿಂದ ರಾತ್ರಿ 12ರವರೆಗೆ ಬರೋಬ್ಬರಿ 2 ಲಕ್ಷ ತಿರುಪತಿ ಮಾದರಿಯ ಲಡ್ಡುವನ್ನು ಭಕ್ತಾದಿಗಳಿಗೆ ವಿತರಿಸಲು ಸಜ್ಜಾಗುತ್ತಿದ್ದೇವೆ ಎಂದು ಪ್ರೊ. ಭಾಷ್ಯಂ ಸ್ವಾಮೀಜಿ ತಿಳಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಲಡ್ಡು ವಿತರಣೆ ಮಾಡುವ ಕಾರ್ಯವನ್ನು ದೇವಸ್ಥಾನದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಅಂದು ದೇವರಿಗೆ ವಿಶೇಷ ಅಲಂಕಾರ ಮತ್ತು ತಮಿಳುನಾಡಿನ 20 ಕ್ವಿಂಟಾಲ್ ಪುಳಿಯೋಗರೆ ನಿವೇದನೆ ಕಾರ್ಯಕ್ರಮ ಸಹ ಆಯೋಜಿಸಲಾಗಿದೆ.

ನಂಜನಗೂಡಿನಲ್ಲಿಧರ್ಮದರ್ಶನಕ್ಕೆ ನಾಲ್ಕೈದು ಗಂಟೆ ಕಾದ ಭಕ್ತರು

ದೇಗುಲದಲ್ಲಿ 1994ನೇ ಇಸವಿಯಲ್ಲಿ ಅಂದಾಜು 1 ಸಾವಿರ ಲಡ್ಡು ಮಾಡಿ, ಈ ಲಡ್ಡು ವಿತರಣೆಯನ್ನು ಆರಂಭಿಸಲಾಯಿತು. ನಂತರ ಕಳೆದ ಕಳೆದ 5 ವರ್ಷಗಳಿಂದ ಪ್ರತಿ ವರ್ಷ 1 ಲಕ್ಷ ಲಡ್ಡುಗಳನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಈ ವರ್ಷವೂ ಸಹ ಇನ್ನೂ ಹೆಚ್ಚು ಅಂದರೆ ಎರಡು ಲಕ್ಷ ಲಡ್ಡುವನ್ನು ವಿತರಣೆ ಮಾಡಲು ದೇವಸ್ಥಾನದ ವತಿಯಿಂದ ತಯಾರಿ ಭರ್ಜರಿಯಾಗಿಯೇ ನಡೆಯುತ್ತಿದೆ.

ಸಾಲಿಗ್ರಾಮವನ್ನು ಪೂಜಿಸುವುದರಿಂದ ಸಿಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?

ಈ ವರ್ಷ ಲಾಡುವನ್ನು ವಿಶೇಷವಾಗಿ 50 ಮಂದಿ ನುರಿತ ಬಾಣಸಿಗರು ತಯಾರಿಸುತ್ತಿದ್ದಾರೆ. ಇದೇ ಡಿ.20 ರಿಂದ ಲಡ್ಡು ತಯಾರಿ ಕಾರ್ಯ ನಡೆಯುತ್ತಿದೆ. ಇದರ ತಯಾರಿಕೆಗೆ 50 ಕ್ವಿಂಟಾಲ್ ಕಡ್ಲೆಹಿಟ್ಟು, 100 ಕಿಂಟಾಲ್ ಸಕ್ಕರೆ, 4000 ಲೀಟರ್ ಖಾದ್ಯ ತೈಲ, 200 ಕೆ.ಜಿ. ಗೋಡಂಬಿ, 200 ಕೆ.ಜಿ. ಒಣದ್ರಾಕ್ಷಿ, 100 ಕೆ.ಜಿ. ಬಾದಾಮಿ, 200 ಕೆ.ಜಿ ಡೈಮಂಡ್ ಸಕ್ಕರೆ, 500 ಕೆ.ಜಿ. ಬೂರಾ ಸಕ್ಕರೆ, 10 ಕೆ.ಜಿ. ಪಿಸ್ತಾ, 20 ಕೆ.ಜಿ, ಏಲಕ್ಕಿ, 20 ಕೆ.ಜೆ. ಜಾಕಾಯಿ ಮತ್ತು ಜಾಪತ್ರೆ, 5 ಕೆ ಜಿ. ಪಚ್ಚೆ ಕರ್ಪೂರ, 100 ಕೆ.ಜಿ, ಲವಂಗಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ