ಆ್ಯಪ್ನಗರ

ಡಿ.ಕೆ. ಶಿವಕುಮಾರ್‌ ಗೂಂಡಾ ರಾಜಕಾರಣ ನಡೆಸುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನಡೆಸುವುದು ಗೂಂಡಾ ರಾಜಕಾರಣ. ಅವರು ಆರ್.ಆರ್. ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

Vijaya Karnataka Web 24 Oct 2020, 3:47 pm
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನಡೆಸುವುದು ಗೂಂಡಾ ರಾಜಕಾರಣ. ಅವರು ಆರ್.ಆರ್. ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
Vijaya Karnataka Web Shobha Karandlaje


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಡೆಯುವ ಆರ್.ಆರ್. ನಗರ ಚುನಾವಣೆಯ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ತಮ್ಮ ಡಿ.ಕೆ. ಸುರೇಶ್ ಅವರೇ ಸಂಸದರು. ಆದ್ದರಿಂದ ಅವರು ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುತ್ತಿದ್ದಾರೆ. ಈ‌ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಹ ಸಲ್ಲಿಸಿದೆ. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅಕ್ರಮಕ್ಕೆ ಅವಕಾಶ ಕೊಡಬಾರದು ಎಂಬುದು ನಮ್ಮ ನಿಲುವು ಎಂದರು.

ಚುನಾವಣೆ ಮಾತ್ರವಲ್ಲ ಕಾಂಗ್ರೆಸ್‌ನವರು ಎಲ್ಲಾ ಸಂದರ್ಭದಲ್ಲೂ ಗುದ್ದಾಟ ಮಾಡುವುದು ಸಾಮಾನ್ಯ. ಸದ್ಯ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ಗುದ್ದಾಟವನ್ನು ಪಕ್ಷದ ಪ್ರಮುಖರು ನಡೆಸುತ್ತಿದ್ದಾರೆ.. ಅಧಿಕಾರದಲ್ಲಿ ಇದ್ದಾಗಲೂ, ಇಲ್ಲದಿರುವಾಗಲೂ ಕಾಂಗ್ರೆಸ್ ನಾಯಕರು ಗುದ್ದಾಟ ನಡೆಸುತ್ತಾರೆ. ಇದು ಕಾಂಗ್ರೆಸ್ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ. ಹಾಗಾಗಿ ಅವರ ಗುದ್ದಾಟ ಬಿಜೆಪಿಗೆ ಏನು ಎಫೆಕ್ಟ್ ಆಗಲ್ಲ ಎಂದು ತಿಳಿಸಿದರು.

ಕುಸುಮಾ ಬೆಂಬಲಕ್ಕೆ ಕಾಂಗ್ರೆಸ್‌ ಮಹಿಳಾ ಘಟಕ, ಶೋಭಾ ಕರಂದ್ಲಾಜೆಗೆ ತಿರುಗೇಟು

ಇದೇ ವೇಳೆ ಉಚಿತ ಕೊರೊನಾ ಲಸಿಕೆ ನೀಡುವ ಬಿಜೆಪಿ‌ ಚುನಾವಣಾ ಪ್ರಣಾಳಿಕೆಯ ಹೇಳಿಕೆ‌ಯನ್ನು ಶೋಭಾ ಕರಂದ್ಲಾಜೆ ಅವರು ಸಮರ್ಥಿಸಿಕೊಂಡರು. ನಮ್ಮದೇ ಸರಕಾರ ಇದೆ, ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡುವುದು ನಮ್ಮ ಗುರಿ. ಇದಕ್ಕಾಗಿ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಹೀಗಾಗಿಯೇ ಉಚಿತವಾಗಿ ಕೊಡುತ್ತೇವೆ ಎನ್ನುವುದರಲ್ಲಿ ತಪ್ಪಿಲ್ಲ. ಆದಷ್ಟು ಬೇಗ ರಾಜ್ಯದ ಜನರಿಗೆ ಕೊರೊನಾ ಲಸಿಕೆ ಸಿಗುತ್ತದೆ ಎಂದರು.

ನನ್ನ ಬಗ್ಗೆ ಮಾತನಾಡಿದರೆ ಪ್ರಮೋಷನ್ ಸಿಗುತ್ತೆ! ಬಿಜೆಪಿ ಮುಖಂಡರಿಗೆ ಡಿಕೆಶಿ ಟಾಂಗ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ