ಆ್ಯಪ್ನಗರ

ಬಿಜೆಪಿಯಲ್ಲಿ ಯಾವುದೇ ಕಿತ್ತಾಟ ಇಲ್ಲ, ಸರ್ಕಾರ ಸುಭದ್ರ ಎಂದ ಅಶ್ವತ್ಥ್ ನಾರಾಯಣ

ಬಿಜೆಪಿ ಪಕ್ಷದಲ್ಲಿ ಯಾವುದೇ ಆಂತರಿಕ ಕಚ್ಚಾಟವಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದಿಷ್ಟು.

Vijaya Karnataka Web 31 May 2020, 3:06 pm
ಮೈಸೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಕಿತ್ತಾಟವಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಡಿದ ಭವಿಷ್ಯಕ್ಕೆ ತಿರುಗೇಟು ನೀಡಿದರು.
Vijaya Karnataka Web ashwavth narayan


ಶಾಸಕರ ಬಂಡಾಯ ಹಾಗೂ ಪ್ರತ್ಯೇಕ ಸಭೆಯ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಕೆಲವರಿಗೆ ಸಣ್ಣ ಪುಟ್ಟ ಆಕ್ಷೇಪ ಇರುತ್ತದೆ. ಹೀಗಿದ್ದರೂ ಶಾಸಕರು ಸಭೆ ಮಾಡಿದ್ದು ತಪ್ಪು, ಅದನ್ನು ಕೇಳುವ ರೀತಿಯ ಸರಿಯಾಗಿರಬೇಕು. ನೇರವಾಗಿ ಸಿಎಂ ಜೊತೆಗೆ ಚರ್ಚೆ ನಡೆಸಬೇಕಿತ್ತು ಎಂದರು.

ಗ್ರಾಪಂ ಎಲೆಕ್ಷನ್‌ ಮುಂದೂಡಿಕೆ: ಆಯೋಗದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ನಿರ್ಧಾರ: ಎಚ್‌.ಕೆ.ಪಾಟೀಲ್‌

ಇದೇ ವೇಳೆ ಸಿದ್ದರಾಮಯ್ಯ ಮಾತಿಗೆ ತಿರುಗೇಟು ನೀಡಿದ ಅವರು ಆಂತರಿಕ ಕಚ್ಚಾಟ ಏನು ಎಂಬುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಆಂತರಿಕ ಕಚ್ಚಾಟದಿಂದ ಯಾವ ಸರ್ಕಾರಕ್ಕೆ ತೊಂದರೆಯಾಗಿದೆ ಎನ್ನುವುದು ಗೊತ್ತಿದೆ ಎಂದರು.

ಪಕ್ಷದ ನಾಯಕತ್ವದ ವಿರುದ್ಧ ಬಿಜೆಪಿ ಕೆಲವು ಶಾಸಕರು ತಿರುಗಿ ಬಿದ್ದಿದ್ದು ಪ್ರತ್ಯೇಕ ಸಭೆ ನಡೆಸಿದ್ದಾರೆ. ಶಾಸಕ ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಕ್ಷದಲ್ಲಿ ಭಿನ್ನಮತ ಮುಂದುವರಿದಿದೆ. ಪಕ್ಷದಲ್ಲಿ ತಲೆಧೋರಿರುವ ಭಿನ್ನಮತವನ್ನು ಶಮನ ಮಾಡುವ ಪ್ರಯತ್ನ ಕೂಡಾ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ