ಆ್ಯಪ್ನಗರ

ನಾಗರಹೊಳೆ ಉದ್ಯಾನ ನಿರ್ದೇಶಕರ ಹುಣಸೂರು ಕಚೇರಿ ಸೀಲ್‌ಡೌನ್‌

ಡಿ.ಆರ್‌.ಎಫ್‌.ಒ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ನಿರ್ದೇಶಕರ ಹುಣಸೂರು ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

Vijaya Karnataka Web 24 Jul 2020, 10:51 am
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ನಿರ್ದೇಶಕರ ಹುಣಸೂರು ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಎಚ್‌.ಡಿ.ಕೋಟೆ ತಾಲೂಕಿನ ಕಾರಾಪುರದಲ್ಲಿ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಡಿ.ಬಿ.ಕುಪ್ಪೆ ರೇಂಜ್‌ನ ಡಿ.ಆರ್‌.ಎಫ್‌.ಒ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ದಿನದಂದು ಕಾರ್ಯಾಚರಣೆ ವೇಳೆ ಹಾಜರಿದ್ದ ನಿರ್ದೇಶಕ ಮಹೇಶ್‌ ಕುಮಾರ್‌, ಎ.ಸಿ.ಎಫ್‌.ಗಳಾದ ಸತೀಶ್‌, ಆಂಟೋಣಿ ಫೌಲ್‌ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು, ಸಿಬ್ಬಂದಿ ಹುಣಸೂರು ಕಚೇರಿಯಲ್ಲಿಅಡ್ಡಾಡಿರುವುದರಿಂದ ಮುನ್ನೆಚ್ಚರಿಕೆಯಾಗಿ ಕಚೇರಿಯನ್ನು ಜು.23 ಮತ್ತು 24ರಂದು ಎರಡು ದಿನಕಾಲ ಸೀಲ್‌ಡೌನ್‌ ಮಾಡಲಾಗಿದೆ.
Vijaya Karnataka Web Seal Down


ಶನಿವಾರ, ಭಾನುವಾರ ರಜಾ ಇರುವುದರಿಂದ ಕಚೇರಿಯನ್ನು ಸ್ಯಾನಿಟೈಸ್‌ಗೆ ಒಳಪಡಿಸಿ ಸೋಮವಾರ ತೆರೆಯಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ದೇಶಕ ಮಹೇಶ್‌ಕುಮಾರ್‌ ಸೇರಿದಂತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಒಂದೇ ಪ್ರಕರಣ ಪತ್ತೆ: ಹುಣಸೂರಿನಲ್ಲಿ ಗುರುವಾರ ಒಂದು ಕೊರೊನಾ ಪಾಸಿಟಿವ್‌ ಪ್ರಕರಣ ದೃಢಪಟ್ಟಿದ್ದು, ಜನರು ನಿಟ್ಟಿಸಿರು ಬಿಡುವಂತಾಗಿದೆ. ನಗರದ ನರಸಿಂಹಸ್ವಾಮಿ ತಿಟ್ಟಿನ ಸೋಂಕಿತ ಕುಟುಂಬದ 11 ವರ್ಷದ ಬಾಲಕನಿಗೆ ಸೋಂಕು ತಗುಲಿದ್ದು, ಈತನನ್ನು ಹುಣಸೂರು ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲಾಗಿದೆ. ಗುರುವಾರ ಕಟ್ಟೆಮಳಲವಾಡಿಯ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ. ತಾಲೂಕಿನಲ್ಲಿ ಒಟ್ಟು 60 ಸೋಂಕಿತರ ಪೈಕಿ ಒಂದು ಸಾವು, 15 ಮಂದಿ ಗುಣಮುಖ, 44 ಮಂದಿಯಲ್ಲಿ ಸಕ್ರಿಯ ಪ್ರಕರಣಗಳಿವೆ ಎಂದು ಟಿ.ಎಚ್‌.ಒ ಡಾ.ಕೀರ್ತಿಕುಮಾರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ