ಮೈಸೂರು: ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪ ಮಾಡಿರುವ ಪ್ರಶಾಂತ್ ಸಂಬರಗಿಯನ್ನು ತನಿಖೆಗೊಳಪಡಿಸುವಂತೆ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಡ್ರಗ್ಸ್ ಮಾಫಿಯಾ ಸಂಬಂಧ ಹಲವು ವಿಚಾರಗಳನ್ನು ಹೊರಹಾಕಿರುವ ಪ್ರಶಾಂತ್ ಸಂಬರಗಿ ಅವರ ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಸಂಗ್ರಹಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಲಿ ಎಂದು ಸಿಂಹ ಅಭಿಪ್ರಾಯಪಟ್ಟಿದ್ದಾರೆ.
ಪ್ರಶಾಂತ್ ಸಂಬರಗಿ ಅವರೇ ಹಲವರ ಹೆಸರು ತಮಗೆ ಗೊತ್ತಿದೆ ಎಂದಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಹೆಸರು ಸಹ ಇದೆ ಎನ್ನಲಾಗಿದೆ. ಆದರೆ ಇದುವರಿಗೂ ಜಮೀರ್ ಅಹ್ಮದ್ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಇದರ ಹಿಂದಿನ ಉದ್ದೇಶವೇನು ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ರಾಜಕೀಯ ಇರುವುದು ನಿಜ ಎಂದರು. ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ ಎಂದರು.
ಶಾಸಕ ಜಮೀರ್ಗೂ ಸುತ್ತಿಕೊಳ್ಳುತ್ತಾ ಡ್ರಗ್ಸ್ ಉರುಳು? ಗುರುವಾರ ಸಿಸಿಬಿಯಿಂದ ನೋಟಿಸ್?
ಮೈಸೂರಿನ ಶಾಲಾ, ಕಾಲೇಜುಗಳಲ್ಲಿ ಡ್ರಗ್ ದಂಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಮಾರಾಟ ಆಗುತ್ತಿದ್ದು, ಯಾವ ಕಾಲೇಜು ಎಂದು ಹೇಳುವುದಿಲ್ಲ. ಆದರೆ ಬಹುತೇಕ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಳಸುತ್ತಿದ್ದಾರೆ. ಮದ್ಯಪಾನ, ಧೂಮಪಾನ ಮಾಡಿದರೆ ಪೋಷಕರಿಗೆ ಗೊತ್ತಾಗುತ್ತದೆ. ಆದರೆ ಡ್ರಗ್ಸ್ ಸೇವನೆ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ. ಇದು ರಾಜ್ಯಾದ್ಯಂತ ಕಂಡು ಬರುತ್ತಿದ್ದು, ಇದಕ್ಕೆ ತಾರ್ಕಿಕ ಅಂತ್ಯ ತರಬೇಕಿದೆ ಎಂದರು.
ದೇಶದಲ್ಲಿ ಲವ್ ಜಿಹಾದ್ ಮಾದರಿಯಲ್ಲೇ ಡ್ರಗ್ಸ್ ಜಿಹಾದ್ ನಡೆಯುತ್ತಿದೆ: ಪ್ರಮೋದ್ ಮುತಾಲಿಕ್
ದಸರಾ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಉದ್ಘಾಟನೆಗಾಗಿ ವೈದ್ಯರು, ಆಶಾ ಕಾರ್ಯಕರ್ತರು, ಪೌರಕಾರ್ಮಿಕರ ಹೆಸರುಗಳು ಕೇಳಿ ಬಂದಿದ್ದು, ಪೊಲೀಸ್ ಇಲಾಖೆಗೂ ಅವಕಾಶ ಕೊಡುವಂತೆ ಸಭೆಯಲ್ಲಿ ಕೇಳಿದ್ದೆ. ಅದರಂತೆ ಉದ್ಘಾಟನೆಯಲ್ಲಿ 5 ಇಲಾಖೆ ವಾರಿಯರ್ಗಳನ್ನು ಕರೆಸಿ ಸನ್ಮಾನಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ದಸರಾ ಉದ್ಘಾಟನಾ ಭಾಷಣಕ್ಕೆ ಒಬ್ಬರಿಗೆ ಅವಕಾಶ ಇರುವುದರಿಂದ ಆ ಆವಕಾಶವನ್ನು ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ಮಂಜುನಾಥ್ ನೀಡುವಂತೆ ಕೋರುತ್ತೇನೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಮತ್ತೊಂದು ಸಭೆಯಲ್ಲಿ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.
ಬೆಲ್ಜಿಯಂನಿಂದ ಬೆಂಗಳೂರಿಗೆ ಬರುತ್ತಿದ್ದ ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಹೇಗೆ ಅಡಗಿಸಿಟ್ಟಿದ್ದರು ಗೊತ್ತಾ?
ಪ್ರಶಾಂತ್ ಸಂಬರಗಿ ಅವರೇ ಹಲವರ ಹೆಸರು ತಮಗೆ ಗೊತ್ತಿದೆ ಎಂದಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಹೆಸರು ಸಹ ಇದೆ ಎನ್ನಲಾಗಿದೆ. ಆದರೆ ಇದುವರಿಗೂ ಜಮೀರ್ ಅಹ್ಮದ್ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಇದರ ಹಿಂದಿನ ಉದ್ದೇಶವೇನು ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ರಾಜಕೀಯ ಇರುವುದು ನಿಜ ಎಂದರು. ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ ಎಂದರು.
ಶಾಸಕ ಜಮೀರ್ಗೂ ಸುತ್ತಿಕೊಳ್ಳುತ್ತಾ ಡ್ರಗ್ಸ್ ಉರುಳು? ಗುರುವಾರ ಸಿಸಿಬಿಯಿಂದ ನೋಟಿಸ್?
ಮೈಸೂರಿನ ಶಾಲಾ, ಕಾಲೇಜುಗಳಲ್ಲಿ ಡ್ರಗ್ ದಂಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಮಾರಾಟ ಆಗುತ್ತಿದ್ದು, ಯಾವ ಕಾಲೇಜು ಎಂದು ಹೇಳುವುದಿಲ್ಲ. ಆದರೆ ಬಹುತೇಕ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಳಸುತ್ತಿದ್ದಾರೆ. ಮದ್ಯಪಾನ, ಧೂಮಪಾನ ಮಾಡಿದರೆ ಪೋಷಕರಿಗೆ ಗೊತ್ತಾಗುತ್ತದೆ. ಆದರೆ ಡ್ರಗ್ಸ್ ಸೇವನೆ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ. ಇದು ರಾಜ್ಯಾದ್ಯಂತ ಕಂಡು ಬರುತ್ತಿದ್ದು, ಇದಕ್ಕೆ ತಾರ್ಕಿಕ ಅಂತ್ಯ ತರಬೇಕಿದೆ ಎಂದರು.
ದೇಶದಲ್ಲಿ ಲವ್ ಜಿಹಾದ್ ಮಾದರಿಯಲ್ಲೇ ಡ್ರಗ್ಸ್ ಜಿಹಾದ್ ನಡೆಯುತ್ತಿದೆ: ಪ್ರಮೋದ್ ಮುತಾಲಿಕ್
ದಸರಾ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಉದ್ಘಾಟನೆಗಾಗಿ ವೈದ್ಯರು, ಆಶಾ ಕಾರ್ಯಕರ್ತರು, ಪೌರಕಾರ್ಮಿಕರ ಹೆಸರುಗಳು ಕೇಳಿ ಬಂದಿದ್ದು, ಪೊಲೀಸ್ ಇಲಾಖೆಗೂ ಅವಕಾಶ ಕೊಡುವಂತೆ ಸಭೆಯಲ್ಲಿ ಕೇಳಿದ್ದೆ. ಅದರಂತೆ ಉದ್ಘಾಟನೆಯಲ್ಲಿ 5 ಇಲಾಖೆ ವಾರಿಯರ್ಗಳನ್ನು ಕರೆಸಿ ಸನ್ಮಾನಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ದಸರಾ ಉದ್ಘಾಟನಾ ಭಾಷಣಕ್ಕೆ ಒಬ್ಬರಿಗೆ ಅವಕಾಶ ಇರುವುದರಿಂದ ಆ ಆವಕಾಶವನ್ನು ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ಮಂಜುನಾಥ್ ನೀಡುವಂತೆ ಕೋರುತ್ತೇನೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಮತ್ತೊಂದು ಸಭೆಯಲ್ಲಿ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.
ಬೆಲ್ಜಿಯಂನಿಂದ ಬೆಂಗಳೂರಿಗೆ ಬರುತ್ತಿದ್ದ ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಹೇಗೆ ಅಡಗಿಸಿಟ್ಟಿದ್ದರು ಗೊತ್ತಾ?