- ನಾಗರಾಜ್ ನವೀಮನೆ
ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಇದಕ್ಕಾಗಿ ಯೋಜನೆ ಕೂಡ ಸಿದ್ಧಪಡಿಸಿದ್ದರು. ಆದರೆ, ಟೇಕಾಫ್ ಆಗಲಿಲ್ಲ. ನಂತರ ಬಜೆಟ್ ಸಂದರ್ಭ ಮಾತ್ರ ಈ ವಿಷಯ ಚರ್ಚೆಗೆ ಬರುತ್ತಿತ್ತು. ಇದೀಗ ಸಂಸದ ಪ್ರತಾಪಸಿಂಹ 15 ವರ್ಷದ ಈ ಕನಸಿಗೆ ರೆಕ್ಕೆ ಕಟ್ಟಲು ಮುಂದಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶಾಸಕರು, ಸಂಸದರ ಸಭೆ ನಡೆಸಿ, ಗ್ರೇಟರ್ ಮೈಸೂರು ಕುರಿತು ಅಭಿಪ್ರಾಯ ಪಡೆಯಲಾಗಿದ್ದು, ಎಲ್ಲರೂ ಗ್ರೇಟರ್ ಮೈಸೂರು ಕುರಿತು ಒಲವು ವ್ಯಕ್ತಪಡಿಸಿದ್ದಾರೆ.
ಯಾವುದೆಲ್ಲ ಸೇರ್ಪಡೆ?:
ಗ್ರೇಟರ್ ಮೈಸೂರು ರಚನೆಯಾದರೆ ಹೂಟಗಳ್ಳಿ ನಗರಸಭೆ, ಬೋಗಾದಿ, ಕಡಕೊಳ, ಶ್ರೀರಾಂಪುರ ಮತ್ತು ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಹಾಲನಹಳ್ಳಿ, ಚಾಮುಂಡಿಬೆಟ್ಟ, ಇಲವಾಲ ಮತ್ತು ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಗಳು ಪಾಲಿಕೆ ವ್ಯಾಪ್ತಿಗೆ ಒಳಪಡಲಿವೆ.
1.51 ಲಕ್ಷ ಜನಸಂಖ್ಯೆ ಸೇರ್ಪಡೆ:
ಗ್ರೇಟರ್ ಮೈಸೂರು ಕಾರ್ಯರೂಪಕ್ಕೆ ಬಂದರೆ ನಗರ ಪಾಲಿಕೆಗೆ ಹೆಚ್ಚುವರಿಯಾಗಿ 1.51 ಲಕ್ಷ ಜನಸಂಖ್ಯೆ ಸೇರ್ಪಡೆಯಾಗಲಿದ್ದು, 25.81 ಕೋಟಿ ರೂ. ಆದಾಯ ಹರಿದು ಬರಲಿದೆ. ನಗರದ ಹೊರ ವಲಯದಲ್ಲಿರುವ ಪಟ್ಟಣ ಪಂಚಾಯಿತಿ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿತೆರಿಗೆ ದರ ಕಡಿಮೆ ಇದ್ದು, ನಗರ ಪಾಲಿಕೆ ವ್ಯಾಪ್ತಿಗೆ ಬಂದರೆ ತೆರಿಗೆ ಪ್ರಮಾಣ ಹೆಚ್ಚಾಗುತ್ತದೆ. ಜನಸಂಖ್ಯೆಗೆ ಪೂರಕವಾಗಿ ಸರಕಾರದಿಂದ ಅನುದಾನ ಬಿಡುಗಡೆಯಾಗಲಿದೆ. ಅದರ ಜತೆಗೆ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿ, ಪೌರ ಕಾರ್ಮಿಕರ ನೇಮಕ ಪ್ರಕ್ರಿಯೆ ಕೈಗೊಳ್ಳಬೇಕಿದೆ.
ಗ್ರೇಟರ್ ಮೈಸೂರಿನಿಂದ ಲಾಭವೇನು?
1. ನಗರಪಾಲಿಕೆ ಆದಾಯದಲ್ಲಿ ಏರಿಕೆ ನಿರೀಕ್ಷೆ
2. ಪಾಲಿಕೆಗೆ ಹೆಚ್ಚುವರಿಯಾಗಿ 1.51 ಲಕ್ಷ ಜನಸಂಖ್ಯೆ ಸೇರ್ಪಡೆ
3. ನಗರದ ಅಭಿವೃದ್ಧಿಗೆ ಹೊಸ ವೇಗ ದೊರೆಯುವುದು ನಿಶ್ಚಿತ
4. ಹೊಸ ಬಡಾವಣೆ ನಿರ್ಮಾಣ, ಮೂಲಸೌಲಭ್ಯ ವೃದ್ಧಿ ಸಾಧ್ಯತೆ
5. ರಾಜ್ಯ ಸರಕಾರದಿಂದ ಹೆಚ್ಚಿನ ಅನುದಾನ ನಿರೀಕ್ಷೆ
ಜನಪ್ರತಿನಿಧಿಗಳ ಅಭಿಪ್ರಾಯವೇನು?
ನಾಲ್ಕು ಪಟ್ಟಣ ಪಂಚಾಯಿತಿ, ಒಂದು ನಗರಸಭೆ ಸೇರಿಸಿಕೊಂಡು ಬೃಹತ್ ಮೈಸೂರು ರೂಪಿಸಲು ಉದ್ದೇಶಿಸಲಾಗಿದೆ. ಶೀಘ್ರದಲ್ಲಿಯೇ ಸ್ಥಳೀಯ ಸಂಸ್ಥೆಗಳಲ್ಲಿನಿರ್ಣಯ ಕೈಗೊಂಡು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು.
- ಪ್ರತಾಪಸಿಂಹ, ಸಂಸದ
------------------------------
ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಬೃಹತ್ ನಗರ ಪಾಲಿಕೆ ಆಗಬೇಕು. ಗ್ರೇಟರ್ ಮೈಸೂರು ಸಂಬಂಧ ರೂಪುರೇಷೆ ಸಿದ್ಧಪಡಿಸಲಾಗಿದೆ. ಮುಂದಿನ ಕೌನ್ಸಿಲ್ ಸಭೆಯಲ್ಲಿಸದಸ್ಯರ ಗಮನಕ್ಕೆ ತಂದು ಚರ್ಚಿಸಲಾಗುವುದು.
- ಶಿವಕುಮಾರ್, ಮೇಯರ್, ನಗರಪಾಲಿಕೆ.
----------------------------------
ನಗರಪಾಲಿಕೆಗೆ ಒಳಪಡುವ ಎಲ್ಲಗ್ರಾಮಗಳು, ಪ್ರದೇಶ, ಬಡಾವಣೆಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದು, ನಕ್ಷೆ ತಯಾರಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ನಿಗದಿತ ನಗರಸಭೆ, ಪಪಂ, ಗ್ರಾಪಂಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವಾಗ ಕಾನೂನಾತ್ಮಕ, ಆಡಳಿತಾತ್ಮಕ ಪ್ರಕ್ರಿಯೆ ಅನುಸರಿಸಬೇಕಾಗಿದೆ.
- ಲಕ್ಷ್ಮಿಕಾಂತರೆಡ್ಡಿ, ಆಯುಕ್ತ, ನಗರಪಾಲಿಕೆ