ಆ್ಯಪ್ನಗರ

ಹುಣಸೂರು: 30 ಸಾವಿರ ಸೀರೆ ಸಹಿತ ಯೋಗೇಶ್ವರ್ ಗೆ ಮತ ಹಾಕಿ ಎಂಬ ಕರ ಪತ್ರ ವಶಕ್ಕೆ!

ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಮತದಾರರಿಗೆ ಆಮಿಷವೊಡ್ಡಲು ತಂದಿದ್ದ ಬಂಡಲ್ ಗಟ್ಟಲೇ ಸೀರೆ ವಶಕ್ಕೆ ಪಡೆಯಲಾಗಿದೆ. ಕ್ಷೇತ್ರದಲ್ಲಿ ಬಿಜೆಪಿಯಿಂದ ಸಿ ಪಿ ಯೋಗೇಶ್ವರ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಈ ಹಿಂದೆ ಹಬ್ಬಿದ್ದ ಕಾರಣ ಈ ತಯಾರಿ ನಡೆದಿತ್ತು ಎಂದು ತಿಳಿದುಬಂದಿದೆ.

Vijaya Karnataka Web 16 Nov 2019, 1:16 pm
ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿದ್ದ ಸಾವಿರಾರು ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Vijaya Karnataka Web cp yogeshwar


ಮೂವರಿಗೂ ಹುಣಸೂರು ಗೆಲ್ಲುವ ವಿಶ್ವಾಸ

ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ಬರೋಬ್ಬರಿ 30 ಸಾವಿರ ಸೀರೆಗಳನ್ನು ಇಡಲಾಗಿತ್ತು. ಇದರ ಖಚಿತ ಮಾಹಿತಿ ಪಡೆದ ಚುನಾವಣಾ ಅಯೋಗದ ಅಧಿಕಾರಿಗಳು ಪೊಲೀಸರ ಸಹಿತ ದಾಳಿ ಮಾಡಿ ತಕ್ಷಣವೇ ಸೀರೆಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಈ ಸೀರೆಯ ಜೊತೆಗೆ ಬಿಜೆಪಿಯಿಂದ ಸ್ಫರ್ಧಿಸಲಿದ್ದಾರೆ ಎಂಬ ಹಿನ್ನೆಲೆ ಸಿ.ಪಿ ಯೋಗೇಶ್ವರ್ ಗೆ ಮತ ಹಾಕಿ ಎಂದು ಮುದ್ರಿಸಿದ್ದ ಕರಪತ್ರಗಳಿದ್ದವು.

ವಿಶ್ವನಾಥ್ ‘ಹಳ್ಳಿಹಕ್ಕಿ’ಯಲ್ಲ.. ಪಕ್ಷದಿಂದ ಪಕ್ಷಕ್ಕೆ ‘ಹಾರುವ ಹಕ್ಕಿ’..! ಧ್ರುವನಾರಾಯಣ್ ಟಾಂಗ್

ಬಿಳಿಯ ಚೀಲಗಳಲ್ಲಿ ಕಂತೆಗಟ್ಟಲೆ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಸಾವಿರಾರು ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಉಪಚುನಾವಣೆ: ತೆನೆ ಹೊರಲು ಕಣಕ್ಕಿಳಿದ ಜೆಡಿಎಸ್ ಅಭ್ಯರ್ಥಿಗಳು ಇವರು

ಸುಪ್ರೀಂ ಕೋರ್ಟ್ ತೀರ್ಪಿಗೂ ಮುನ್ನವೇ ಬಿಜೆಪಿಯಿಂದ ಸಿ ಪಿ ಯೋಗೇಶ್ವರ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಗಾಢವಾಗಿ ಹಬ್ಬಿತ್ತು. ಹೀಗಾಗಿ ಯೋಗೇಶ್ವರ್ ಅವರೇ ಚುನಾವಣೆಗಾಗಿ ಈ ಎಲ್ಲ ಸಿದ್ಧತೆ ಕೈಗೊಂಡಿದ್ದರು, ಆದರೆ ಸದ್ಯ ಬಿಜೆಪಿಗೆ ಸೇರ್ಪಡೆಗೊಂಡಿರುವ ಅನರ್ಹ ಶಾಸಕ ಹೆಚ್ ವಿಶ್ವನಾಥ್ ಅವರೇ ಸ್ಪರ್ಧಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ