ಆ್ಯಪ್ನಗರ

ಬಿಜೆಪಿಯ ಭಾವನಾತ್ಮಕ ರಾಜಕಾರಣ ಅಪಾಯಕಾರಿ: ಮೈಸೂರಲ್ಲಿ ಮಾಜಿ ಸಭಾಪತಿ ಶಂಕರ್‌ ಆತಂಕ

ಬಿಜೆಪಿ ವಿರುದ್ಧ ಮಾಜಿ ಸ್ಪೀಕರ್‌ ಬಿಎಲ್‌ ಶಂಕರ್‌ ಕಿಡಿಕಾರಿದ್ದು, ಬಿಜೆಪಿಯ ಭಾವನಾತ್ಮಕ ರಾಜಕಾರಣ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ದೇಶದಲ್ಲಿ ಬದುಕನ್ನು ಕಟ್ಟುವ ರಾಜಕಾರಣಕ್ಕಿಂತ ಭಾವನಾತ್ಮಕ ರಾಜಕಾರಣ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

Vijaya Karnataka Web 21 Jan 2021, 10:37 pm
ಮೈಸೂರು: ಪ್ರಸ್ತುತ ದೇಶದಲ್ಲಿ ಬದುಕನ್ನು ಕಟ್ಟುವ ರಾಜಕಾರಣಕ್ಕಿಂತ ಭಾವನಾತ್ಮಕ ರಾಜಕಾರಣ ಹೆಚ್ಚಾಗಿದೆ ಎಂದು ಮಾಜಿ ಸಭಾಪತಿ ಬಿ.ಎಲ್‌.ಶಂಕರ್‌ ಆತಂಕ ವ್ಯಕ್ತಪಡಿಸಿದರು.
Vijaya Karnataka Web BL SHANKAR
ಬಿಎಲ್‌ ಶಂಕರ್‌, ಮಾಜಿ ಸಭಾಪತಿ (ಸಂಗ್ರಹ ಚಿತ್ರ)


ಮೈಸೂರು ನಗರದ ಕಾಂಗ್ರೆಸ್‌ ಭವನದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ ಸಮರ್ಪಣೋತ್ಸವದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ ರಾಜ್ಯ ಸೇರಿ ಇಡೀ ದೇಶದಲ್ಲಿ ಜನರ ಬದುಕನ್ನು ಕಟ್ಟುವ ರಾಜಕಾರಣ ನಡೆಸಿತು ಎಂದರು.

ಆದರೆ, ಬಿಜೆಪಿ ಸೇರಿ ಇತರೇ ಪಕ್ಷಗಳು ಭಾವನಾತ್ಮಕ ರಾಜಕಾರಣ ನಡೆಸುವ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿವೆ. ಈ ಮೂಲಕ ಜನರಲ್ಲಿ ದ್ವೇಷ, ಅಸೂಯೆ ಮೂಡಿಸುವಂತಹ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್‌ ಎಂದಿಗೂ ಭಾವನಾತ್ಮಕ ರಾಜಕಾರಣ ಮಾಡಿಲ್ಲ ಎಂದು ತಿಳಿಸಿದರು.

ಜನರಿಂದ ದೂರ
ಪ್ರಸ್ತುತ ದೇಶದಲ್ಲಿ ಕಾಂಗ್ರೆಸ್‌ ಪಕ್ಷ ದೊಡ್ಡ ಸವಾಲನ್ನು ಎದುರಿಸುತ್ತಿದೆ. ನಾಯಕರ ನಿರೀಕ್ಷೆಗಳು ಹುಸಿಯಾಗಿ ಆಘಾತ ನೀಡಿದೆ. ಎರಡು ಲೋಕಸಭೆ ಮತ್ತು ರಾಜ್ಯದ ವಿಧಾನಸಭಾ ಚುನಾವಣೆಯ ಸೋಲಿನ ಬಗ್ಗೆ ಅತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜನರು ನಮ್ಮಿಂದ ದೂರವಾಗುತ್ತಿರುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಸಲಹೆ ನೀಡಿದರು.
ಜ.26ಕ್ಕೆ ದಿಲ್ಲಿಯಂತೆ ಬೆಂಗಳೂರಿನಲ್ಲಿ ಸಾವಿರಾರು ರೈತರ ಪರೇಡ್‌: ಕೋಡಿಹಳ್ಳಿ ಚಂದ್ರಶೇಖರ್‌ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ್‌ ಮಾತನಾಡಿ, ಕಾಂಗ್ರೆಸ್‌ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುವುದು ಎಂದು ಭರವಸೆ ನೀಡಿದರು. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 16 ಮಂದಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.
ಮೈಸೂರು: ಹುಣಸೂರಲ್ಲಿ 3.53 ಲಕ್ಷ ರೂ. ಮೌಲ್ಯದ ಮದ್ಯ ನಾಶ..!ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅನಿಲ್‌ ಚಿಕ್ಕಮಾದು, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ ಕುಮಾರ್‌, ನಗರಾಧ್ಯಕ್ಷ ಆರ್‌. ಮೂರ್ತಿ, ಮಾಜಿ ಶಾಸಕ ವಾಸು, ಮೈಲ್ಯಾಕ್‌ ಮಾಜಿ ಅಧ್ಯಕ್ಷ ಎಚ್‌.ಎ. ವೆಂಕಟೇಶ್‌, ಹರೀಶ್‌ ಗೌಡ, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ