ಆ್ಯಪ್ನಗರ

ಕೊಡಗಿನ ಸಂತ್ರಸ್ತರಿಗೆ ರೈತ ಸಂಘ ನೆರವು

ಮಳೆಯಿಂದ ತತ್ತರಿಸಿರುವ ಕೊಡಗಿನ ಜನರಿಗೆ ನೆರವಿನ ಹಸ್ತ ನೀಡುವ ಉದ್ದೇಶದಿಂದ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಆ. 22ರಂದು ಕೊಡಗು ಜಿಲ್ಲೆಗೆ ತೆರಳುತ್ತಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಆಹಾರ ಸೇರಿದಂತೆ ಇನ್ನಿತರ ಮೂಲ ವಸ್ತುಗಳನ್ನು ಕಲ್ಪಿಸಲಾಗುವುದು ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಹೇಳಿದರು.

Vijaya Karnataka 22 Aug 2018, 5:00 am
ಮೈಸೂರು : ಮಳೆಯಿಂದ ತತ್ತರಿಸಿರುವ ಕೊಡಗಿನ ಜನರಿಗೆ ನೆರವಿನ ಹಸ್ತ ನೀಡುವ ಉದ್ದೇಶದಿಂದ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಆ. 22ರಂದು ಕೊಡಗು ಜಿಲ್ಲೆಗೆ ತೆರಳುತ್ತಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಆಹಾರ ಸೇರಿದಂತೆ ಇನ್ನಿತರ ಮೂಲ ವಸ್ತುಗಳನ್ನು ಕಲ್ಪಿಸಲಾಗುವುದು ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಹೇಳಿದರು.
Vijaya Karnataka Web farmers sangh assistance to the victims of kodagu
ಕೊಡಗಿನ ಸಂತ್ರಸ್ತರಿಗೆ ರೈತ ಸಂಘ ನೆರವು


''ಸಂಘದ ಪದಾಧಿಕಾರಿಗಳ ಜತೆ ಬೆಳಗ್ಗೆ 9 ಕ್ಕೆ ನಗರದ ಕಲಾಮಂದಿರದ ಬಳಿಯಿಂದ ಕೊಡಗಿಗೆ ತೆರಳಿ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಲಾಗುವುದು. ಈಗಾಗಲೇ ಕೊಡಗಿನ ರೈತ ಸಂಘಕ್ಕೆ ಸೂಚಿಸಲಾಗಿದ್ದು, ಮೊದಲಿಗೆ ಎಲ್ಲಾ ಸದಸ್ಯರು ವೈಯಕ್ತಿಕವಾಗಿ ನೆರೆ ಸಂತ್ರಸ್ತರಿಗೆ ನೆರವು ನೀಡಲಿದ್ದಾರೆ. ನಂತರದ ದಿನಗಳಲ್ಲಿ ಅಲ್ಲಿನ ಪರಿಸ್ಥಿತಿ ಅನುಗುಣವಾಗಿ ರೈತ ಸಂಘ ಹಾಗೂ ಸ್ವರಾಜ್‌ ಇಂಡಿಯಾ ಪಕ್ಷದಿಂದ ಅಗತ್ಯ ನೆರವು ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಅಗತ್ಯವಿದ್ದರೆ ರಾಜ್ಯದ ಎಲ್ಲಾ ಹಳ್ಳಿಗಳಿಂದ ಧವಸ, ಧಾನ್ಯಗಳನ್ನು ಸಂಗ್ರಹಿಸಿ ನೀಡಲಾಗುವುದು. ಅಲ್ಲದೆ, ಮಳೆ ಕಡಿಮೆಯಾದ ನಂತರ ಅಲ್ಲಿನ ನಿವಾಸಿಗಳಿಗೆ ಮನೆಗಳನ್ನು ಕಟ್ಟಿಕೊಳ್ಳಲು ರೈತರು ಶ್ರಮದಾನ ಮಾಡಲು ತಯಾರಿದ್ದಾರೆ,'' ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

''ಮಾನವ ಸ್ವಾರ್ಥಕ್ಕಾಗಿ ಪ್ರಕೃತಿ ನಾಶ ಮಾಡಿರುವುದರ ಪರಿಣಾಮ ಕೊಡಗಿನಲ್ಲಿ ಈ ಪರಿಸ್ಥಿತಿಗೆ ಉಂಟಾಗಲು ಮುಖ್ಯ ಕಾರಣವಾಗಿದೆ. ಪ್ರಕೃತಿಯ ವಿರುದ್ಧವಾಗಿ ಈ ರೀತಿಯ ಅಭಿವೃದ್ಧಿ ಕೆಲಸಗಳು ನಡೆಸುವುದು ಸರಿಯಲ್ಲ, ಇದನ್ನು ಕೂಡಲೇ ನಿಲ್ಲಿಸಬೇಕಿದೆ. ಕೊಡಗು ಮಾತ್ರವಲ್ಲದೇ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಇಂತಹ ಅವೈಜ್ಞಾನಿಕ ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಪರಿಸರವನ್ನು ನಾಶಗೊಳಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೂಡಲೇ ಇದನ್ನು ರದ್ದುಗೊಳಿಸಿ, ತಜ್ಞರಿಂದ ತಾಂತ್ರಿಕ ಸಲಹೆಯನ್ನು ಪಡೆದು ಅಭಿವೃದ್ಧಿ ಮಾಡಬೇಕಾದ ಅಗತ್ಯವಿದೆ,'' ಎಂದರು.

ಈ ಸಂದರ್ಭದಲ್ಲಿ ಸ್ವರಾಜ್‌ ಇಂಡಿಯಾ ಪಕ್ಷದ ಪ್ರಮುಖರಾದ ಪ್ರೊ. ಶಬ್ಬೀರ್‌ ಮುಸ್ತಫಾ, ದರ್ಶನ್‌ ಪುಟ್ಟಣ್ಣಯ್ಯ, ಕರುಣಾಕರ್‌, ಹೊಸಕೋಟೆ ಬಸವರಾಜು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ