ಆ್ಯಪ್ನಗರ

ರೈತರ ಧರಣಿ ತಾತ್ಕಾಲಿಕ ಹಿಂದಕ್ಕೆ

ಗ್ರಾಮಸ್ಥರನ್ನೊಳಗೊಂಡಂತೆ ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದ ತಂಡ ಮೂರು ವಾರದೊಳಗೆ ನೀಡುವ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳುವುದಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಸುಧಾಕರ್‌ ನೀಡಿದ ಭರವಸೆ ಮೇರೆಗೆ ಅಳಗಂಚಿ ಸುತ್ತಲಿನ ಗ್ರಾಮಸ್ಥರು ಹಾಗೂ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಶುಕ್ರವಾರ ರಾತ್ರಿ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

Vijaya Karnataka 29 Jun 2019, 5:00 am
ಮದ್ಯಸಾರ ತಯಾರಿಕಾ ಘಟಕ ವಿರುದ್ಧ ಮೂರು ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ
Vijaya Karnataka Web farmers strike temporary withdrawal
ರೈತರ ಧರಣಿ ತಾತ್ಕಾಲಿಕ ಹಿಂದಕ್ಕೆ


ನಂಜನಗೂಡು:
ಗ್ರಾಮಸ್ಥರನ್ನೊಳಗೊಂಡಂತೆ ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದ ತಂಡ ಮೂರು ವಾರದೊಳಗೆ ನೀಡುವ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳುವುದಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಸುಧಾಕರ್‌ ನೀಡಿದ ಭರವಸೆ ಮೇರೆಗೆ ಅಳಗಂಚಿ ಸುತ್ತಲಿನ ಗ್ರಾಮಸ್ಥರು ಹಾಗೂ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಶುಕ್ರವಾರ ರಾತ್ರಿ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

ತಾಲೂಕಿನ ಅಳಗಂಚಿಯಲ್ಲಿರುವ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯಲ್ಲಿ ಕಾರ‍್ಯನಿರ್ವಹಿಸುವ ಮದ್ಯಸಾರ ತಯಾರಿಕಾ ಘಟಕ ಬಂದ್‌ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯ ಗ್ರಾಮಸ್ಥರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಜತೆಗೂಡಿ ಶುಕ್ರವಾರ ಸಂಜೆ ಭೇಟಿ ನೀಡಿದ ಡಾ.ಸುಧಾಕರ್‌ ಪ್ರತಿಭಟನಾ ನಿರತರೊಂದಿಗೆ ಸಮಾಲೋಚನೆ ನಡೆಸಿದ ನಂತರ ಕಾರ್ಖಾನೆಯ ಡಿಸ್ಟಲರಿ ಘಟಕವನ್ನು ಪರಿಶೀಲಿಸಿದರು.

ಈ ಸಂದರ್ಭ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್‌.ವಿದ್ಯಾಸಾಗರ್‌ ಮಾತನಾಡಿ, ''ಬಣ್ಣಾರಿ ಅಮ್ಮನ್‌ ಶುಗರ್ಸ್‌ ಕಾರ್ಖಾನೆಯಲ್ಲಿರುವ ಮದ್ಯಸಾರ ತಯಾರಿಕಾ ಘಟಕದಿಂದ ಸುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಂತರ್ಜಲ ಕಲುಷಿತಗೊಂಡಿದ್ದು , ಕೃಷಿ ಚಟುವಟಿಕೆಗೂ ಹಿನ್ನಡೆಯಾಗಿದೆ. ಆದರೂ 60ಕೆಎಲ್‌ಪಿಡಿ ಘಟಕವನ್ನು 150ಕೆಎಲ್‌ಪಿಡಿ ಸಾಮರ್ಥ್ಯ‌ಕ್ಕೆ ಹೆಚ್ಚಿಸಲು ಹೊರಟಿರುವುದು ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಶಾಸಕ ಡಾ.ಎಸ್‌.ಯತೀಂದ್ರ, '' ಅಳಗಂಚಿ ಸುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಸಂಪೂರ್ಣ ಕಲುಷಿತಗೊಂಡಿದ್ದು , ಕೊಳವೆ ಬಾವಿ ನೀರು ಕೃಷಿಗೂ ಯೋಗ್ಯವಾಗಿಲ್ಲ ಎಂಬುದು ದೃಢವಾಗಿದೆ. ಗ್ರಾಮಸ್ಥರ ಆರೋಗ್ಯದ ಹಿತದೃಷ್ಟಿಯಿಂದ ಮದ್ಯಸಾರ ಘಟಕ ವಿಸ್ತರಣೆಗೆ ಅವಕಾಶ ಕೊಡುವುದಿಲ್ಲ . ಸ್ಥಳೀಯರ ಹೋರಾಟಕ್ಕೆ ಬೆಂಬಲ ನೀಡುವುದಾಗಿ'' ಹೇಳಿದರು.

ಸ್ಥಳೀಯರ ಅಹವಾಲು ಆಲಿಸಿದ ಬಳಿಕ ಕಾರ್ಖಾನೆಯೊಳಗೆ ತೆರಳಿ ಪರಿಶೀಲನೆ ನಡೆಸಿದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಸುಧಾಕರ್‌ ನಂತರ ಸ್ಥಳೀಯ ಗ್ರಾಮಸ್ಥರೊಳಗೊಂಡಂತೆ ತಜ್ಞರ ಸಮಿತಿಯನ್ನು ರಚಿಸಿ ಮೂರು ವಾರದೊಳಗೆ ವರದಿ ಪಡೆಯಲಾಗುವುದು. ಸಮಿತಿ ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲಿವರೆಗೂ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದರು

ನಂತರ ತಮ್ಮಲ್ಲೇ ಸಮಾಲೋಚನೆ ನಡೆಸಿದ ಪ್ರತಿಭಟನಾಕಾರರು ಧರಣಿಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿರುವುದಾಗಿಯೂ ಡಿಸ್ಟಲರಿ ಬಂದ್‌ ಮಾಡದ ಹೊರತಾಗಿ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಪಂ ಸದಸ್ಯ ಬಿ.ಎನ್‌.ಸದಾನಂದ್‌, ಎಸ್ಟಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ.ಬಸವರಾಜು, ರೈತ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಿನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಟಿ.ಪುಟ್ಟಯ್ಯ, ಜಿಲ್ಲಾಧ್ಯಕ್ಷ ಟಿ.ಆರ್‌.ವಿದ್ಯಾಸಾಗರ್‌, ಜಿಲ್ಲಾ ಕಾರ್ಯದರ್ಶಿ ಇಮ್ಮಾವು ರಘು ಮುಂತಾದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ