ಮೈಸೂರು: ಉತ್ತರ ಕರ್ನಾಟಕದಪ್ರವಾಹ ಪೀಡಿತರಿಗೆ ನಾಲ್ಕು ತಿಂಗಳಾದರೂ ಸರ್ಕಾರ ಪರಿಹಾರ ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಹಾರ ನೀಡದೇ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಸಿದ್ದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ಕೊರೊನಾ ನೆಪದಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ ಲೂಟಿಯಲ್ಲಿ ನಿರತವಾಗಿದೆ. ಇದರ ಬಗ್ಗೆ ತಿಳಿಸಿದರೂ ದಪ್ಪ ಚರ್ಮದ ಈ ಕಿವುಡು ಸರ್ಕಾರ ಸತ್ತಂತಿದೆ. ಅಧಿವೇಶನ ಕರೆಯುವ ಬಗ್ಗೆ ಸಾಕಷ್ಟು ಬಾರಿ ಪತ್ರ ಬರೆದರೂ, ಬಹಿರಂಗ ಹೇಳಿಕೆ ನೀಡಿದರೂ, ಸರ್ಕಾರ ಉತ್ತರಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಳೆದ ವರ್ಷ ಅತಿವೃಷ್ಟಿಯಿಂದ ಲಕ್ಷಾಂತರ ಕುಟುಂಬಗಳು ಸೂರು ಕಳೆದುಕೊಂಡಿವೆ. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಬಹುತೇಕರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಈ ವರ್ಷವೂ ಸಹ ಅದೇ ಪರಿಸ್ಥಿತಿ ಇದ್ದರೂ, ಸರ್ಕಾರ ಪರಿಹಾರ ನೀಡುವ ಗೋಜಿಗೇ ಹೋಗಿಲ್ಲ. ಅಲ್ಲದೆ ಕೇಂದ್ರ ಸರ್ಕಾರವೂ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದಿಂದ 6 ರಾಜ್ಯಗಳಿಗೆ ಪ್ರವಾಹ ಪರಿಹಾರ: ಕರ್ನಾಟಕಕ್ಕೆ ₹577 ಕೋಟಿ ನೆರವು
ಜನರಿಗೆ ಸಹಾಯ ಮಾಡುವ ಬದಲು ಸರ್ಕಾರ ಅವ್ಯವಹಾರದಲ್ಲಿ ಮುಳುಗಿದೆ ಎಂದು ಕಿಡಿಕಾರಿದ ಸಿದ್ದು, ಹಣದ ಆಮಿಷವೊಡ್ಡಿ ಆಪರೇಷನ್ ಕಮಲ ನಡೆಸಿ ಚುನಾವಣೆ ಗೆಲ್ಲುವುದರಲ್ಲಿ ಬಿಜೆಪಿಯವರು ಸಿದ್ಧ ಹಸ್ತರಾಗಿದ್ದಾರೆ ಎಂದರು.
ಗದಗ: ಡಿಕೆಶಿ, ಸಿದ್ದರಾಮಯ್ಯ ಸುಳ್ಳಿನ ರಾಜಕಾರಣಿಗಳು ಎಂದ ಸಚಿವ ಈಶ್ವರಪ್ಪ
ಬಿಜೆಪಿಯವರಿಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸಿಲ್ಲ. ನನ್ನ ಅವಧಿಯ ಇಂದಿರಾ ಕ್ಯಾಂಟೀನ್ ಮುಚ್ಚಲು ಈ ಸರ್ಕಾರ ಹವಣಿಸುತ್ತಿದೆ. ವಿದ್ಯಾಸಿರಿ, ಶಾದಿಭಾಗ್ಯ ಮತ್ತಿತರ ಯೋಜನೆಗಳನ್ನು ಸ್ಥಗಿತಗೊಳಿಸಿರುವುದು ಸರಿಯಲ್ಲ ಎಂದು ಸಿದ್ದು ಬೇಸರ ವ್ಯಕ್ತಪಡಿಸಿದರು.
ಸಿದ್ದು-ಡಿಕೆಶಿ ಪರಸ್ಪರ ಸಂಚು ರೂಪಿಸಿದ್ದೇ ಕಾಂಗ್ರೆಸ್ ಸೋಲೋಕೆ ಕಾರಣ ; ನಳಿನ್ ಕುಮಾರ್ ಕಟೀಲ್
ರಾಜ್ಯದಲ್ಲಿ ಕಳೆದ ವರ್ಷ ಅತಿವೃಷ್ಟಿಯಿಂದ ಲಕ್ಷಾಂತರ ಕುಟುಂಬಗಳು ಸೂರು ಕಳೆದುಕೊಂಡಿವೆ. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಬಹುತೇಕರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಈ ವರ್ಷವೂ ಸಹ ಅದೇ ಪರಿಸ್ಥಿತಿ ಇದ್ದರೂ, ಸರ್ಕಾರ ಪರಿಹಾರ ನೀಡುವ ಗೋಜಿಗೇ ಹೋಗಿಲ್ಲ. ಅಲ್ಲದೆ ಕೇಂದ್ರ ಸರ್ಕಾರವೂ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದಿಂದ 6 ರಾಜ್ಯಗಳಿಗೆ ಪ್ರವಾಹ ಪರಿಹಾರ: ಕರ್ನಾಟಕಕ್ಕೆ ₹577 ಕೋಟಿ ನೆರವು
ಜನರಿಗೆ ಸಹಾಯ ಮಾಡುವ ಬದಲು ಸರ್ಕಾರ ಅವ್ಯವಹಾರದಲ್ಲಿ ಮುಳುಗಿದೆ ಎಂದು ಕಿಡಿಕಾರಿದ ಸಿದ್ದು, ಹಣದ ಆಮಿಷವೊಡ್ಡಿ ಆಪರೇಷನ್ ಕಮಲ ನಡೆಸಿ ಚುನಾವಣೆ ಗೆಲ್ಲುವುದರಲ್ಲಿ ಬಿಜೆಪಿಯವರು ಸಿದ್ಧ ಹಸ್ತರಾಗಿದ್ದಾರೆ ಎಂದರು.
ಗದಗ: ಡಿಕೆಶಿ, ಸಿದ್ದರಾಮಯ್ಯ ಸುಳ್ಳಿನ ರಾಜಕಾರಣಿಗಳು ಎಂದ ಸಚಿವ ಈಶ್ವರಪ್ಪ
ಬಿಜೆಪಿಯವರಿಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸಿಲ್ಲ. ನನ್ನ ಅವಧಿಯ ಇಂದಿರಾ ಕ್ಯಾಂಟೀನ್ ಮುಚ್ಚಲು ಈ ಸರ್ಕಾರ ಹವಣಿಸುತ್ತಿದೆ. ವಿದ್ಯಾಸಿರಿ, ಶಾದಿಭಾಗ್ಯ ಮತ್ತಿತರ ಯೋಜನೆಗಳನ್ನು ಸ್ಥಗಿತಗೊಳಿಸಿರುವುದು ಸರಿಯಲ್ಲ ಎಂದು ಸಿದ್ದು ಬೇಸರ ವ್ಯಕ್ತಪಡಿಸಿದರು.
ಸಿದ್ದು-ಡಿಕೆಶಿ ಪರಸ್ಪರ ಸಂಚು ರೂಪಿಸಿದ್ದೇ ಕಾಂಗ್ರೆಸ್ ಸೋಲೋಕೆ ಕಾರಣ ; ನಳಿನ್ ಕುಮಾರ್ ಕಟೀಲ್