ಹುಣಸೂರು: ತಾಲೂಕಿನ ನಾನಾ ಕಡೆ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ, 14 ಸಾವಿರ ಬೆಲೆಯ ಮದ್ಯದ ಸ್ಯಾಚೆಟ್ ಹಾಗೂ ನಾಲ್ಕು ಟ್ರ್ಯಾಕ್ಟರ್ ಮರಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಹೆಬ್ಬಳ ಗಿರಿಜನ ಪುನರ್ವಸತಿ ಕೇಂದ್ರದ ಬಳಿಯಲ್ಲಿ ಅಕ್ರಮವಾಗಿ ಮನೆಗಳಲ್ಲಿ ಮದ್ಯಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಸಣ್ಣ ಜವರಯ್ಯ, ಸ್ವಾಮಿಗೌಡ ಹಾಗೂ ಬಿಂದು ಲೇ. ಮಹದೇವನ್ ಎಂಬುವವರ ಮನೆ ಮೇಲೆ ದಾಳಿ ಮಾಡಿ, ಮನೆಯ ಒಳಗೆ ಬಿಂದಿಗೆಗಳಲ್ಲಿ ಮದ್ಯದ ಸ್ಯಾಚೆಟ್ಟನ್ನು ಭೂಮಿಯಲ್ಲಿ ಹುದುಗಿಸಿಟ್ಟಿದ್ದ 144 ನಾನಾ ಬ್ರಾಂಡಿನ ಮದ್ಯದ ಸ್ಯಾಚೆಟ್ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಮರಳು ಅಡ್ಡೆ ಮೇಲೆ ದಾಳಿ: ತಾಲೂಕಿನ ವಡ್ಡರಗುಡಿ ಸಮೀಪದ ಕೆರೆಯೊಂದರಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಗ್ರಾಮಾಂತರ ಠಾಣೆ ಪೊಲೀಸರು ಎರಡು ಟ್ರ್ಯಾಕ್ಟರ್ನಷ್ಟು ಮರಳನ್ನು ವಶಕ್ಕೆ ಪಡೆದು ದಿನೇಶ ಹಾಗೂ ಹೇಮಂತ್ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನ ಕ್ಕೊಪ್ಪಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಕೆಂಚನಕೆರೆ ಯಲ್ಲಿ ಮರಳು ಸಂಗ್ರಹಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಪೊಲೀಸರು ನಾಲ್ಕು ಟ್ರ್ಯಾಕ್ಟರ್ ಲೋಡ್ ಮರಳು ವಶಕ್ಕೆ ಪಡೆದಿದ್ದಾರೆ. ಮರಳು ಸಂಗ್ರಹಣೆಯಲ್ಲಿ ತೊಡಗಿದ್ದ 8 ಮಂದಿ ಆರೋಪಿಗಳು ಪರಾರಿಯಾಗಿದ್ದಾರೆಂದು ಎಸ್.ಐ. ಪುಟ್ಟಸ್ವಾಮಿ ತಿಳಿಸಿದ್ದಾರೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಹೆಬ್ಬಳ ಗಿರಿಜನ ಪುನರ್ವಸತಿ ಕೇಂದ್ರದ ಬಳಿಯಲ್ಲಿ ಅಕ್ರಮವಾಗಿ ಮನೆಗಳಲ್ಲಿ ಮದ್ಯಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಸಣ್ಣ ಜವರಯ್ಯ, ಸ್ವಾಮಿಗೌಡ ಹಾಗೂ ಬಿಂದು ಲೇ. ಮಹದೇವನ್ ಎಂಬುವವರ ಮನೆ ಮೇಲೆ ದಾಳಿ ಮಾಡಿ, ಮನೆಯ ಒಳಗೆ ಬಿಂದಿಗೆಗಳಲ್ಲಿ ಮದ್ಯದ ಸ್ಯಾಚೆಟ್ಟನ್ನು ಭೂಮಿಯಲ್ಲಿ ಹುದುಗಿಸಿಟ್ಟಿದ್ದ 144 ನಾನಾ ಬ್ರಾಂಡಿನ ಮದ್ಯದ ಸ್ಯಾಚೆಟ್ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಮರಳು ಅಡ್ಡೆ ಮೇಲೆ ದಾಳಿ: ತಾಲೂಕಿನ ವಡ್ಡರಗುಡಿ ಸಮೀಪದ ಕೆರೆಯೊಂದರಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಗ್ರಾಮಾಂತರ ಠಾಣೆ ಪೊಲೀಸರು ಎರಡು ಟ್ರ್ಯಾಕ್ಟರ್ನಷ್ಟು ಮರಳನ್ನು ವಶಕ್ಕೆ ಪಡೆದು ದಿನೇಶ ಹಾಗೂ ಹೇಮಂತ್ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನ ಕ್ಕೊಪ್ಪಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಕೆಂಚನಕೆರೆ ಯಲ್ಲಿ ಮರಳು ಸಂಗ್ರಹಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಪೊಲೀಸರು ನಾಲ್ಕು ಟ್ರ್ಯಾಕ್ಟರ್ ಲೋಡ್ ಮರಳು ವಶಕ್ಕೆ ಪಡೆದಿದ್ದಾರೆ. ಮರಳು ಸಂಗ್ರಹಣೆಯಲ್ಲಿ ತೊಡಗಿದ್ದ 8 ಮಂದಿ ಆರೋಪಿಗಳು ಪರಾರಿಯಾಗಿದ್ದಾರೆಂದು ಎಸ್.ಐ. ಪುಟ್ಟಸ್ವಾಮಿ ತಿಳಿಸಿದ್ದಾರೆ.