ಆ್ಯಪ್ನಗರ

ಇನ್ನೂ ನಾಲ್ಕು ಕಡೆ ಮೋದಿ ಭಾಷಣ: ಅಶೋಕ್‌

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ರಾಜ್ಯದ ಐದು ಕಡೆ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕ ಆರ್.ಅಶೋಕ್ ತಿಳಿಸಿದರು.

Vijaya Karnataka 16 Feb 2018, 5:00 am

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ರಾಜ್ಯದ ಐದು ಕಡೆ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕ ಆರ್.ಅಶೋಕ್ ತಿಳಿಸಿದರು.

Vijaya Karnataka Web four place modi speech r ashoke
ಇನ್ನೂ ನಾಲ್ಕು ಕಡೆ ಮೋದಿ ಭಾಷಣ: ಅಶೋಕ್‌


‘‘ಬೆಂಗಳೂರಿನಲ್ಲಿ ಈಗಾಗಲೇ ಮೋದಿ ಅವರ ಬಹಿರಂಗ ಸಭೆ ನಡೆದಿದೆ. Feb. 19ರಂದು ಮೈಸೂರಿನಲ್ಲಿ ಕಾರ್ಯಕ್ರಮವಿದೆ. ಕಲಬುರ್ಗಿ, ರಾಯಚೂರು, ದಾವಣಗೆರೆಗಳಲ್ಲಿ ಮೋದಿ ಅವರು ಬಹಿರಂಗ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡುವರು. ಚುನಾವಣೆ ದಿನಾಂಕ ಘೋಷಣೆಯಾದ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೋದಿ ಅವರ ಸಾರ್ವಜನಿಕ ಸಭೆಗಳು ನಡೆಯಲಿವೆ,’’ ಎಂದು ಅಶೋಕ್ ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘‘ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜನರನ್ನು ಒಡೆದಾಳುತ್ತಿದ್ದಾರೆ. ಕೋಮು ಸೌಹಾರ್ದತೆಯ ರಾಜ್ಯವಾಗಿದ್ದ ಕರ್ನಾಟಕವನ್ನು ಕೋಮು ದಳ್ಳುರಿಯ ರಾಜ್ಯವನ್ನಾಗಿ ಮಾಡಲು ಹೊರಟಿದ್ದಾರೆ. ‘ಕಾಂಗ್ರೆಸ್ ನಡೆ ಕೋಮುವಾದದ ಕಡೆಗೆ’ ಎಂಬಂತಾಗಿದೆ. ಹಂಪಿಯ ಮೇಲೆ ದಾಳಿ ಮಾಡಿ ಅಲ್ಲಿನ ವಿಗ್ರಹಗಳನ್ನು ನಾಶ ಮಾಡಿದ ಬಹಮನಿ ಸುಲ್ತಾನರ ಉತ್ಸವ ಆಚರಿಸಲು ಸಿದ್ದರಾಮಯ್ಯ ಸರಕಾರ ಮುಂದಾಗಿರುವುದು ಖಂಡನೀಯ. ದೇವಸ್ಥಾನಗಳನ್ನು ಲೂಟಿ ಮಾಡಿದ ಬಹಮನಿ ಸುಲ್ತಾನರ ಉತ್ಸವ ಮಾಡುವುದು ಸರಿಯೇ?,’’ ಎಂದು ಅಶೋಕ್ ಪ್ರಶ್ನಿಸಿದರು.

‘‘ಸಿದ್ದರಾಮಯ್ಯ ಅವರದು 10 ಪರ್ಸೆಂಟ್ ಸರಕಾರ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ಅಶೋಕ್ ಪುನರುಚ್ಚರಿಸಿದರು. ಈ ಆರೋಪಕ್ಕೆ ಗೋವಿಂದರಾಜು ಅವರ ಡೈರಿಯೇ ಸಾಕ್ಷಿಯಾಗಿದೆ. ಗೋವಿಂದರಾಜು ಅಸವರ ಡೈರಿಯಲ್ಲಿ ಯಾರಿಗೆ ಎಷ್ಟು ಹಣ ಸಂದಾಯವಾಗಿದೆ ಎಂಬ ದಾಖಲೆ ಇದೆ. ಹೀಗಿರುವಾಗ ಅಂಗೈ ಹುಣ್ಣಿಗೆ ಕನ್ನಡಿ ಏಕೆ?,’’ಎಂದು ಗಾದೆ ಮಾತು ಉಲ್ಲೇಖಿಸಿದರು.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದರೂ ಕಾಂಗ್ರೆಸ್ ಪಕ್ಷವನ್ನೇ ಪ್ರಮುಖ ಟಾರ್ಗೆಟ್ ಮಾಡಿಕೊಂಡಿರುವುದನ್ನು ಅಶೋಕ್ ಸಮರ್ಥಿಸಿಕೊಂಡರು. ‘‘ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದೆ. ಸಿಎಂ ಸಿದ್ದರಾಮಯ್ಯ ಮೈಸೂರು ಭಾಗದವರು. ಹೀಗಾಗಿ, ಇಲ್ಲಿ ನಮಗೆ ಕಾಂಗ್ರೆಸ್ ಪಕ್ಷವೇ ಪ್ರಮುಖ ಎದುರಾಳಿ. ಯಾರ ಜೊತೆಗೂ ನಮ್ಮ ಪಕ್ಷ ಒಳಒಪ್ಪಂದ ಮಾಡಿಕೊಂಡಿಲ್ಲ,’’ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ