ಆ್ಯಪ್ನಗರ

ತಿರುಪತಿಗೆ ಹೋಗುತ್ತಿದ್ದೇನೆ: ಜಿಟಿಡಿ

11 ಶಾಸಕರು ರಾಜೀನಾಮೆ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವಿಚಾರ ತಿಳಿಯದೇ ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

Vijaya Karnataka 7 Jul 2019, 5:00 am
ಮೈಸೂರು: 11 ಶಾಸಕರು ರಾಜೀನಾಮೆ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವಿಚಾರ ತಿಳಿಯದೇ ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
Vijaya Karnataka Web going to thirupati gtd
ತಿರುಪತಿಗೆ ಹೋಗುತ್ತಿದ್ದೇನೆ: ಜಿಟಿಡಿ


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಶಾಸಕರ ರಾಜೀನಾಮೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಪರಿಶೀಲಿಸದೆ ಏನನ್ನೂ ಹೇಳಲು ಆಗುವುದಿಲ್ಲ. ಒಂದು ಗಂಟೆ ಸಮಯ ಕೊಟ್ಟರೆ ಆ ಬಗ್ಗೆ ತಿಳಿದುಕೊಂಡು ಮಾತನಾಡುವೆ. ನಾನು ಬೆಂಗಳೂರಿಗೆ ಹೋಗುತ್ತಿಲ್ಲ. ತಿರುಪತಿಗೆ ತೆರಳುತ್ತಿದ್ದೇನೆ,''ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ದ್ರೋಹ ಮಾಡುವ ಶಾಸಕರಿದ್ದರೆ ಸರಕಾರ ನಡೆಸಲು ಸಾಧ್ಯವೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ''ಒಳ್ಳೆಯ ಕೆಲಸ ಮಾಡಿದರೆ ಮೆಚ್ಚುಗೆ ವ್ಯಕ್ತಪಡಿಸಿದರೆ ತಪ್ಪೇನು? ಮೋದಿ ಅವರ ಒಳ್ಳೆಯ ಕೆಲಸಕ್ಕೆ ಹರ್ಷ ವ್ಯಕ್ತಪಡಿಸಿದ್ದೇನೆ. ಹಾಗೆಂದ ಮಾತ್ರಕ್ಕೆ ಬಿಜೆಪಿಗೆ ಹೋಗುತ್ತಾರೆ ಎಂದಲ್ಲ. ಉತ್ತಮ ಕೆಲಸಕ್ಕೆ ಟೀಕೆ ಸಲ್ಲದು. ಶಾಸಕರ ರಾಜೀನಾಮೆ ನಿಮ್ಮಿಂದ ಕೇಳಿ ಆಶ್ಚರ್ಯವಾಗುತ್ತಿದೆ. ಈ ಬಗ್ಗೆ ನನಗೇನು ಗೊತ್ತಿಲ್ಲ,''ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ