ಆ್ಯಪ್ನಗರ

ಉಪ್ಪು ತಿಂದಿದ್ದರೆ ನೀರು ಕುಡೀಬೇಕು ಎಂದಿದ್ದೆ: ಗೋವಿಂದ ಕಾರಜೋಳ

ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂಬ ಅರ್ಥದಲ್ಲಿ ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಇದಕ್ಕೆ ಕ್ಷಮೆಯಾಚನೆ ಮಾಡುವ ಅವಶ್ಯಕತೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Vijaya Karnataka Web 3 Sep 2019, 10:32 pm
ಮೈಸೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ರೀತಿಯ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಗೋವಿಂದ ಕಾರಜೋಳ
ಗೋವಿಂದ ಕಾರಜೋಳ


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಾನು ಸಂಕಷ್ಟದಲ್ಲಿರುವ ವ್ಯಕ್ತಿಯನ್ನು ನೋಡಿ ಖುಷಿಪಡುವಷ್ಟು ಕೆಟ್ಟವನಲ್ಲ. ಡಿ.ಕೆ.ಶಿವಕುಮಾರ್‌ ನನಗೂ ಆತ್ಮೀಯರು. ಅವರ ಬಗ್ಗೆ ಅಪಾರ ಗೌರವವಿದೆ. ಉಪ್ಪು ತಿಂದಿದ್ದರೆ ನೀರು ಕುಡಿಯಬೇಕಾಗುತ್ತೆ ಅಂತ ಹೇಳಿದ್ದೇನೆ. ತಪ್ಪು ಮಾಡದಿದ್ದರೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಕ್ಷಮೆ ಕೇಳುವಂತಹ ಹೇಳಿಕೆಯನ್ನು ನಾನು ಯಾವತ್ತೂ ನೀಡುವುದಿಲ್ಲ'' ಎಂದು ಸ್ಪಷ್ಟನೆ ನೀಡಿದರು.

ಮತ್ತೆ ಪ್ರವಾಹ ಭೀತಿ: ಅಗತ್ಯ ಮುನ್ನೆಚ್ಚರಿಕೆ


''ಕೃಷ್ಣ ನದಿ ಪಾತ್ರದಲ್ಲಿ ಮಳೆ ಹೆಚ್ಚಾಗಿದ್ದು, ಇದೀಗ ಉತ್ತರ ಕರ್ನಾಟಕದಲ್ಲಿಮತ್ತೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಶತಮಾನದಲ್ಲಿಕಂಡು ಕೇಳರಿಯದ ಪ್ರವಾಹ ಉಂಟಾಗಿದೆ. ಬರೋಬ್ಬರಿ 6.30 ಲಕ್ಷ ಕ್ಯುಸೆಕ್‌ ನೀರು ಹರಿದಿದೆ. ಈಗ ಮತ್ತೆ ಪ್ರವಾಹದ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳನ್ನು ಹೆಚ್ಚು ದಿನ ಕಾಳಜಿ ಕೇಂದ್ರಗಳಲ್ಲಿ ಸಾಮೂಹಿಕವಾಗಿ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ಹೀಗೆ ಅವರನ್ನು ಶಾಲಾ, ಕಾಲೇಜುಗಳಲ್ಲಿ ಉಳಿಸಿಕೊಂಡರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತದೆ. ಆದ್ದರಿಂದ 50 ಸಾವಿರ ರೂ. ವೆಚ್ಚದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಿಸುವಂತೆ ಸೂಚನೆ ನೀಡಿದ್ದೇವೆ. ಯಾವುದೇ ಹೆಚ್ಚುವರಿ ಹಾನಿಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ'' ಎಂದು ತಿಳಿಸಿದರು.

''ಪರಿಹಾರ ಕಾರ್ಯಗಳು ಆಗಿಲ್ಲಎನ್ನುವುದು ಸುಳ್ಳು ಆರೋಪವಾಗಿದೆ. ಈಗಾಗಲೇ ಶೇ.90ರಷ್ಟು ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗಿದೆ. ಶೇ.10ರಷ್ಟು ಸಂತ್ರಸ್ತರಿಗೆ ಕಾರಣಾಂತರಗಳಿಂದ ಪರಿಹಾರ ನೀಡಿಲ್ಲ. ಬ್ಯಾಂಕ್‌ಗಳಲ್ಲಿಅವರಿಗೆ ಆರ್‌ಟಿಜಿಎಸ್‌ ಮಾಡಲು ಆಧಾರ್‌ ಕಾರ್ಡ್‌ ಕೇಳುತ್ತಿದ್ದಾರೆ. ಆದರೆ, ಸಾಕಷ್ಟು ಮಂದಿ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಇಂತಹವರಿಗೆ ಚೆಕ್‌ ಮೂಲಕ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ