ಆ್ಯಪ್ನಗರ

ಪಾಲಿಕೆ ಆಯುಕ್ತರಾಗಿ ಗುರುದತ್ತ ಹೆಗ್ಡೆ ಅಧಿಕಾರ ಸ್ವೀಕಾರ

ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಗುರುದತ್ತ ಹೆಗ್ಡೆ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು ಆ...

Vijaya Karnataka 18 Aug 2019, 5:00 am
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಗುರುದತ್ತ ಹೆಗ್ಡೆ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
Vijaya Karnataka Web gurudatta hegde sworn in as mcc commissioner
ಪಾಲಿಕೆ ಆಯುಕ್ತರಾಗಿ ಗುರುದತ್ತ ಹೆಗ್ಡೆ ಅಧಿಕಾರ ಸ್ವೀಕಾರ


ಆ.16ರ ಸರಕಾರದ ಆದೇಶದಂತೆ ಗುರುದತ್ತ ಹೆಗ್ಡೆ ಶನಿವಾರ ಬೆಳಗ್ಗೆ ಮೈಸೂರಿನ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ, ಪ್ರಭಾರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂತರಾಜು ಅವರಿಂದ ಅಧಿಕಾರ ವಹಿಸಿಕೊಂಡರು. ಈ ಸಂಬಂಧ ಪಾಲಿಕೆ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸ್ವತಃ ಗುರುದತ್ತ ಹೆಗ್ಡೆ ಅವರು ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್‌ 28ರಿಂದ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಅದಕ್ಕಾಗಿ ಸಾಕಷ್ಟು ಸಿದ್ಧತೆ ಕಾರ್ಯಗಳನ್ನು ಮಾಡಬೇಕಿದೆ. ನಗರದ ಆಧುನೀಕರಣ ಕಾಮಗಾರಿಗಳನ್ನು ಕೈಗೊಳ್ಳಬೇಕಿರುವ ಕಾರಣ ಸರಕಾರ ಆಡಳಿತಾತ್ಮಕ ಹಿತದೃಷ್ಟಿಯಿಂದ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿದೆ ಎನ್ನಲಾಗಿದೆ.

ಹಿಂದಿನ ಪಾಲಿಕೆ ಆಯುಕ್ತೆ ಶಿಲ್ಪನಾಗ್‌ ಅವರು ರಜೆಯಲ್ಲಿರುವುದರಿಂದ ಪಾಲಿಕೆಯಲ್ಲಿ ಪ್ರಭಾರ ಆಯುಕ್ತರಾಗಿ ಕಾಂತರಾಜ್‌ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಗುರುದತ್ತ ಹೆಗ್ಡೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ