ಆ್ಯಪ್ನಗರ

ಕೊರೊನಾತಂಕದ ನಡುವೆ ದಸರಾ ನಿಭಾಯಿಸೋದು ಸವಾಲಿನ ಕೆಲಸ: ರೋಹಿಣಿ ಸಿಂಧೂರಿ

'ಕೋವಿಡ್ ಸಂದರ್ಭದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ದಸರಾ ಆಚರಿಸಲಾಗುತ್ತದೆ. ಹಾಸನದ ಶ್ರವಣಬೆಳಗೊಳದಲ್ಲಿ ಮಹಾ ಮಸ್ತಕಾಭಿಷೇಕ ನಡೆಸಿದ ಅನುಭವವಿದೆ.' - ಮೈಸೂರು ಜಿಲ್ಲೆಯ ನೂತನ ಡಿಸಿ ರೋಹಿಣಿ ಸಿಂಧೂರಿ ವಿಶ್ವಾಸದ ಮಾತು

Vijaya Karnataka Web 29 Sep 2020, 7:56 pm
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮತ್ತು ಮುಂಬರುವ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಿಭಾಯಿಸೋದೇ ನನ್ನ ಮುಂದಿನ ಸವಾಲಿನ ಕೆಲಸ ಎಂದು ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
Vijaya Karnataka Web rohini
ಕೊರೊನಾತಂಕದ ನಡುವೆ ದಸರಾ ನಿಭಾಯಿಸೋದು ಸವಾಲಿನ ಕೆಲಸ: ರೋಹಿಣಿ ಸಿಂಧೂರಿ


ಜಿಲ್ಲಾಧಿಕಾರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಿಸಿ ರೋಹಿಣಿ ಸಿಂಧೂರಿ, ರಾಜ್ಯದಲ್ಲಿಯೇ ಬೆಂಗಳೂರಿನ ನಂತರ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಅಧಿಕಾರ ಸ್ವೀಕರಿಸಿದ ಬಳಿಕ ಕೊರೊನಾ ನಿಯಂತ್ರಣ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಸದ್ಯ ಅಧಿಕಾರಿಗಳ ಸಭೆ ಕರೆದು ಕೊರೊನಾ ನಿಯಂತ್ರಣ ಸಂಬಂಧ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ರೋಹಿಣಿ ಸಿಂಧೂರಿ ಹೇಳಿದರು.

ದಸರೆಗೆ ಇನ್ನು ಕೆಲವೇ ದಿನ ಬಾಕಿ ಇದೆ. ಸದ್ಯ ದಸರಾ ಮಹೋತ್ಸವ ಆಚರಣೆ ನನಗೆ ಸವಾಲಿನ ಕೆಲಸವಾಗಿದೆ. ಕೋವಿಡ್ ಸಂದರ್ಭದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ದಸರಾ ಆಚರಿಸಲಾಗುತ್ತದೆ. ಹಾಸನದ ಶ್ರವಣಬೆಳಗೊಳದಲ್ಲಿ ಮಹಾ ಮಸ್ತಕಾಭಿಷೇಕ ನಡೆಸಿದ ಅನುಭವವಿದೆ. ಅಲ್ಲಿ 10 ದಿನಗಳಲ್ಲಿ ಐದು ಲಕ್ಷ ಜನ ಸೇರಿದ್ದರು. ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಅದರ ಅನುಭವದ ಆಧಾರದ ಮೇಲೆ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಶ್ವಾಸವಿದೆ ಎಂದರು.

ಆಂಧ್ರದ ಹೆಣ್ಣು ಮಗಳಿಗೋಸ್ಕರ, ಕನ್ನಡಿಗ ದಲಿತ ಜಿಲ್ಲಾಧಿಕಾರಿಗೆ ಅನ್ಯಾಯ: ಸಾರಾ ಮಹೇಶ್

ನನಗೆ ಮೈಸೂರು ಹೊಸದಲ್ಲ ಎಂದ ಡಿಸಿ ರೋಹಿಣಿ ಸಿಂಧೂರಿ, ನಾನು ಮೈಸೂರಿನಲ್ಲೇ ತರಬೇತಿ ಪಡೆದಿದ್ದೇನೆ. ಮೈಸೂರು ಜಿಲ್ಲೆಯ ಬಗ್ಗೆ ಸಾಕಷ್ಟು ಪರಿಚಯವಿದೆ ಎಂದು ತಿಳಿಸಿದರು.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಸಭೆ: ಡಿಸಿಯಾಗಿ ಅಧಿಕಾರ‌ ವಹಿಸಿಕೊಂಡ ರೋಹಿಣಿ ಸಿಂಧೂರಿ ಅವರು‌ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ದಸರಾ ಸಿದ್ಧತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೋವಿಡ್ ಪರೀಕ್ಷೆಗೆ ಈಗಿರುವ 30 ಸಂಚಾರಿ ತಂಡಗಳ ಜೊತೆಗೆ ಇನ್ನೂ 25 ತಂಡಗಳಿಗೆ ಬೇಕಾದ ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನಿಯೋಜಿಸಿಕೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ

ಮಾದರಿ ಸಂಗ್ರಹಕ್ಕೆ ಬೇಕಾದ ವಿಟಿಎಂ ಉಪಕರಣಗಳು ಆರೋಗ್ಯ ಇಲಾಖೆಯಿಂದ ಬರುವುದು ತಡವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅನುದಾನದಲ್ಲೇ 20 ಸಾವಿರ ವಿಟಿಎಂ ಉಪಕರಣಗಳನ್ನು ಖರೀದಿಸಿ ಆರೋಗ್ಯ ಇಲಾಖೆಗೆ ನೀಡಬೇಕು. ಕೋವಿಡ್‌ನಿಂದಾಗುವ ಸಾವಿನ ಪ್ರಮಾಣ ಕಡಿಮೆ ಮಾಡಲು ಎಲ್ಲಾ ರೀತಿಯ ಮುಂಜಾಗ್ರತೆ ಕಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಮೈಸೂರಿಗೆ ತಿಂಗಳೊಳಗೆ ಇಬ್ಬರು ಡಿಸಿ..! ಶರತ್ ನಿರ್ಗಮನ, ರೋಹಿಣಿ ಸಿಂಧೂರಿ ಆಗಮನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ