ಆ್ಯಪ್ನಗರ

ಮೈಸೂರಿನಲ್ಲಿ ನೆರೆ ಸಂತ್ರಸ್ತರಿಗೆ ಸಾಮಗ್ರಿ ಸ್ವೀಕಾರ ಕೇಂದ್ರ

ಕೊಡಗು ಸಹಿತ ವಿವಿಧ ಭಾಗಗಳಲ್ಲಿ ಉಂಟಾಗಿರುವ ನೆರೆಹಾವಳಿಗೆ ಸಿಲುಕಿರುವ ಸಂತ್ರಸ್ತರಿಗೆ ಸಾರ್ವಜನಿಕರು ತುರ್ತು ಅವಶ್ಯಕ ಸಾಮಗ್ರಿಗಳನ್ನು ನೀಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಪುರಭವನದಲ್ಲಿ ಅವಶ್ಯಕ ಸಾಮಗ್ರಿಗಳ ಸ್ವೀಕಾರ ಕೇಂದ್ರವನ್ನು ಸ್ಥಾಪಿಸಲಾಗಿದೆ.

Vijaya Karnataka Web 17 Aug 2018, 3:26 pm
ಮೈಸೂರು: ಕೊಡಗು ಸಹಿತ ವಿವಿಧ ಭಾಗಗಳಲ್ಲಿ ಉಂಟಾಗಿರುವ ನೆರೆಹಾವಳಿಗೆ ಸಿಲುಕಿರುವ ಸಂತ್ರಸ್ತರಿಗೆ ಸಾರ್ವಜನಿಕರು ತುರ್ತು ಅವಶ್ಯಕ ಸಾಮಗ್ರಿಗಳನ್ನು ನೀಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಪುರಭವನದಲ್ಲಿ ಅವಶ್ಯಕ ಸಾಮಗ್ರಿಗಳ ಸ್ವೀಕಾರ ಕೇಂದ್ರವನ್ನು ಸ್ಥಾಪಿಸಲಾಗಿದೆ.
Vijaya Karnataka Web Coorg Floods


ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯ ಹಾಗೂ ಪರಿಸರ ಅಧಿಕಾರಿಗಳನ್ನು ನಿಯೋಜಿಸಿ ಪಾಲಿಕೆ ಆಯುಕ್ತರಾದ ಕೆ.ಎಚ್. ಜಗದೀಶ್ ಆದೇಶ ಹೊರಡಿಸಿದ್ದಾರೆ.

ದಾನಿಗಳು ಹಾಗೂ ಸಂಘ ಸಂಸ್ಥೆಗಳು ನೀಡುವ ತುರ್ತು ಅವಶ್ಯಕ ಸಾಮಗ್ರಿಗಳನ್ನು ಈ ಕೇಂದ್ರದಲ್ಲಿ ಅಧಿಕೃತವಾಗಿ ಸ್ವೀಕರಿಸಲಾಗುವುದು. ದಾನಿಗಳು ನೀಡಿದ‌ ಸಾಮಗ್ರಿಗಳನ್ನು ನಿಗದಿತ ವಹಿಯಲ್ಲಿ ದಾಖಲಿಸಿ, ಅಧಿಕೃತವಾಗಿ ಜಿಲ್ಲಾಡಳಿತದ ಮೂಲಕ ಕೊಡಗು ಹಾಗೂ ಇತರೆ ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ತಿಳಿಸಿದ್ದಾರೆ.

ದಾನಿಗಳು ಸಂಘಸಂಸ್ಥೆಗಳು ಹೆಚ್ಚಿನ ಮಾಹಿತಿಗಾಗಿ ನಗರ ಪಾಲಿಕೆ ಕಂಟ್ರೋಲ್ ರೂಂ ಸಂಖ್ಯೆ: 9449841195/96, 0821-2418800 ಅನ್ನು ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ