ಆ್ಯಪ್ನಗರ

ಕಾರು ಅಪಘಾತ: ವ್ಯಕ್ತಿ ಸಾವು

ಕಾರಿಗೆ ಅಡ್ಡಬಂದ ಕಾಡುಹಂದಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೋರಿಗೆ ಡಿಕ್ಕಿ ಹೊಡೆದು ಆರೋಗ್ಯ ಇಲಾಖೆ ನೇತ್ರ ಪರೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ತಾಲೂಕಿನ ನಾಗಮಂಗಲದ ಬಳಿ ಮಂಗಳವಾರ ರಾತ್ರಿ ಜರುಗಿದೆ.

Vijaya Karnataka 31 Jan 2019, 5:00 am
ಹುಣಸೂರು: ಕಾರಿಗೆ ಅಡ್ಡಬಂದ ಕಾಡುಹಂದಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೋರಿಗೆ ಡಿಕ್ಕಿ ಹೊಡೆದು ಆರೋಗ್ಯ ಇಲಾಖೆ ನೇತ್ರ ಪರೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ತಾಲೂಕಿನ ನಾಗಮಂಗಲದ ಬಳಿ ಮಂಗಳವಾರ ರಾತ್ರಿ ಜರುಗಿದೆ.
Vijaya Karnataka Web hunasuru car accident person dies
ಕಾರು ಅಪಘಾತ: ವ್ಯಕ್ತಿ ಸಾವು


ಹುಣಸೂರು ನಗರದ ವಿ.ಪಿ.ಬೋರೆ ನಿವಾಸಿ, ಪಿರಿಯಾಪಟ್ಟಣ ತಾಲೂಕು ರಾವಂದೂರು ಪಿ.ಎಚ್‌.ಸಿ.ಯ ನೇತ್ರ ಪರೀಕ್ಷಕ ರಮೇಶ್‌ಕುಮಾರ್‌ (46) ಮೃತರು. ಪತ್ನಿ, ಮೂವರು ಪುತ್ರಿಯರಿದ್ದಾರೆ.

ಮಂಗಳವಾರ ಆಸ್ಪತ್ರೆಯಲ್ಲಿ ರಾತ್ರಿವರೆಗೆ ಕರ್ತವ್ಯ ಮುಗಿಸಿ ಹುಣಸೂರಿಗೆ ತಮ್ಮ ಕಾರಿನಲ್ಲಿ ಬರುತ್ತಿದ್ದ ವೇಳೆ ನಾಗಮಂಗಲದ ಕೆರೆ ಬಳಿ ಕಾಡುಹಂದಿ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ತಲೆಗೆ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು.

ಅಪಘಾತದಿಂದಾಗಿ ಹೆದ್ದಾರಿ ಬಂದ್‌ ಆಗಿತ್ತು. ದಾರಿಹೋಕರ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ