ಮೈಸೂರು: ಜನಪ್ರತಿನಿಧಿಗಳಿಗೆ ಮೊದಲು ಗೌರವ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಲಿ. ಇಲ್ಲವಾದರೆ ಸಂಘರ್ಷಕ್ಕಿಳಿಯುವುದಾದರೆ ಬನ್ನಿ ಎಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಹುಣಸೂರು ಶಾಸಕ ಮಂಜುನಾಥ್ ಸವಾಲೆಸಿದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಕೆಲವು ಶಾಸಕರ ನಡುವೆ ಉಂಟಾಗಿರುವ ವೈಮನಸ್ಸಿನ ವಿಚಾರ ಮತ್ತು ಜನಸ್ಪಂದನ ಕಾರ್ಯಕ್ರಮಕ್ಕೆ ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಸ್ವಂತ ವಾಹನದಲ್ಲಿ ತಾಲೂಕಿಗೆ ಬಂದು ಸಭೆ ಮಾಡುತ್ತಿದ್ದಾರಾ? ಇಲ್ಲವಾದರೇ ಸರ್ಕಾರ ನೀಡಿರುವ ಕಾರಿನಿಂದ ಬರುತ್ತಾರೆಯೋ? ಎಂದು ಪ್ರಶ್ನಿಸಿದರು.
ಅದು ಸರ್ಕಾರದ ಕೆಲಸವೆಂದಾಗ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಜನರು ಕೂಡ ನಮ್ಮ ಬಳಿ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಾರೆ. ಆಗ ಯಾರೊಬ್ಬರ ಬಳಿ ಹೋದರೆ ಕೆಲಸವಾಗುವುದಿಲ್ಲ. ಎಲ್ಲರನ್ನು ಗಮನಕ್ಕೆ ತೆಗೆದುಕೊಳ್ಳಲೇ ಬೇಕು ಎಂದರು.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಬ್ಯಾಟ್ ಬೀಸಿದ ಸಂಸದ ಪ್ರತಾಪ್ ಸಿಂಹ
ಹಾಗೆಯೇ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿ, ಸಂಸದರಾಗಿ ಹುಣಸೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು.? ತಂಬಾಕು ಬೆಳೆಗಾರರ ಸಮಸ್ಯೆ ಬಗೆಹರಿಸಿ, ಆಗ ನಾನೇ ಕರೆದು ಸನ್ಮಾನ ಮಾಡುತ್ತೇನೆ. ಇಲ್ಲ ಸಂಘರ್ಷಕ್ಕಿಳಿದರೆ ನಾನು ಸಂಘರ್ಷಕ್ಕಿಳಿಯುತ್ತೀನೆ ಎಂದು ಎಚ್ಚರಿಸಿದರು.
ಡಿಸಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ಗುದ್ದಾಟ: ಜನಸ್ಪಂದನ ಕಾರ್ಯಕ್ರಮಕ್ಕೆ ಬ್ರೇಕ್
ಜಿಲ್ಲಾಧಿಕಾರಿ ಹಾಗೂ ಕೆಲವು ಶಾಸಕರ ನಡುವೆ ಉಂಟಾಗಿರುವ ವೈಮನಸ್ಸಿನ ವಿಚಾರ ಮತ್ತು ಜನಸ್ಪಂದನ ಕಾರ್ಯಕ್ರಮಕ್ಕೆ ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಸ್ವಂತ ವಾಹನದಲ್ಲಿ ತಾಲೂಕಿಗೆ ಬಂದು ಸಭೆ ಮಾಡುತ್ತಿದ್ದಾರಾ? ಇಲ್ಲವಾದರೇ ಸರ್ಕಾರ ನೀಡಿರುವ ಕಾರಿನಿಂದ ಬರುತ್ತಾರೆಯೋ? ಎಂದು ಪ್ರಶ್ನಿಸಿದರು.
ಅದು ಸರ್ಕಾರದ ಕೆಲಸವೆಂದಾಗ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಜನರು ಕೂಡ ನಮ್ಮ ಬಳಿ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಾರೆ. ಆಗ ಯಾರೊಬ್ಬರ ಬಳಿ ಹೋದರೆ ಕೆಲಸವಾಗುವುದಿಲ್ಲ. ಎಲ್ಲರನ್ನು ಗಮನಕ್ಕೆ ತೆಗೆದುಕೊಳ್ಳಲೇ ಬೇಕು ಎಂದರು.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಬ್ಯಾಟ್ ಬೀಸಿದ ಸಂಸದ ಪ್ರತಾಪ್ ಸಿಂಹ
ಹಾಗೆಯೇ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿ, ಸಂಸದರಾಗಿ ಹುಣಸೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು.? ತಂಬಾಕು ಬೆಳೆಗಾರರ ಸಮಸ್ಯೆ ಬಗೆಹರಿಸಿ, ಆಗ ನಾನೇ ಕರೆದು ಸನ್ಮಾನ ಮಾಡುತ್ತೇನೆ. ಇಲ್ಲ ಸಂಘರ್ಷಕ್ಕಿಳಿದರೆ ನಾನು ಸಂಘರ್ಷಕ್ಕಿಳಿಯುತ್ತೀನೆ ಎಂದು ಎಚ್ಚರಿಸಿದರು.
ಡಿಸಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ಗುದ್ದಾಟ: ಜನಸ್ಪಂದನ ಕಾರ್ಯಕ್ರಮಕ್ಕೆ ಬ್ರೇಕ್