ಆ್ಯಪ್ನಗರ

ಎಚ್‌ಡಿಡಿ ಹೇಳಿಕೆ ಸಮರ್ಥಿಸಿಕೊಂಡ ಎಚ್ವಿ

ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಕುರಿತು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಹೇಳಿಕೆಯನ್ನು ರಾಜ್ಯ ಜೆಡಿಎಸ್‌ ಅಧ್ಯಕ್ಷ, ಶಾಸಕ ಎಚ್‌.ವಿಶ್ವನಾಥ್‌ ಸಮರ್ಥಿಸಿಕೊಂಡಿದ್ದಾರೆ.

Vijaya Karnataka 22 Jun 2019, 5:00 am
ಮೈಸೂರು: ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಕುರಿತು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಹೇಳಿಕೆಯನ್ನು ರಾಜ್ಯ ಜೆಡಿಎಸ್‌ ಅಧ್ಯಕ್ಷ, ಶಾಸಕ ಎಚ್‌.ವಿಶ್ವನಾಥ್‌ ಸಮರ್ಥಿಸಿಕೊಂಡಿದ್ದಾರೆ.
Vijaya Karnataka Web hv defends hdd statement
ಎಚ್‌ಡಿಡಿ ಹೇಳಿಕೆ ಸಮರ್ಥಿಸಿಕೊಂಡ ಎಚ್ವಿ


''ಎಚ್‌.ಡಿ.ದೇವೇಗೌಡರು ದೇಶದ ಹಿರಿಯ ರಾಜಕೀಯ ಮುತ್ಸದ್ದಿಗಳು. ಅವರು ರಾಜಕಾರಣದ ಒಳ ಹೊರವುಗಳನ್ನು ಅಪಾರವಾಗಿ ಬಲ್ಲವರು. ಅವರು ಹೇಳಿರುವುದರಲ್ಲಿ ಕೆಲವು ಸತ್ಯ ಇರುತ್ತದೆ. ದೇಶದಲ್ಲಿ ಬಿಜೆಪಿ ಸರಕಾರ ನಡೆಸುತ್ತಿದೆ. ಬಿಜೆಪಿ ಬಗ್ಗೆ ಜನರು ಒಲವು ತೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಬಗ್ಗೆ ಯಾವ ರೀತಿ ಯೋಚನೆ ಮಾಡುತ್ತಾರೆ, ಕರ್ನಾಟಕದ ಬಗ್ಗೆ ಅವರು ಹೇಗೆ ಯೋಜನೆಗಳನ್ನು ಹಾಕಿಕೊಳ್ಳುತ್ತಾರೆ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ,'' ಎಂದು ವಿಶ್ವನಾಥ್‌ ಶುಕ್ರವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

''ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬಗ್ಗೆ ಸುಲಭವಾಗಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ, ಇಂದಿರಾ ಗಾಂಧಿ ಕಾಲದಲ್ಲಿ ಸರಕಾರ ವಿಸರ್ಜನೆ ಮಾಡುತ್ತಿದ್ದರು. ಈಗ ಕಾನೂನಿನಲ್ಲಿ ಅವಕಾಶವಿಲ್ಲ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಸಮ್ಮಿಶ್ರ ಸರಕಾರ ಚೆನ್ನಾಗಿ ನಡೆಯುತ್ತಿದೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ