ಎಚ್ಡಿಡಿ, ಎಚ್ಡಿಕೆ ಬಿಟ್ಟು ಬೇರೆಯವರ ಮಾತಿಗೆ ತಲೆಕೆಡಿಸಿಕೊಳ್ಳಲ್ಲ ಎಂದು ಮಾಜಿ ಸಿಎಂ
ಮೈಸೂರು: ನಾವು ಪರಸ್ಪರ ನಂಬಿಕೆಯಿಂದಲೇ ಮೈತ್ರಿ ಮಾಡಿ ಮಾಡಿಕೊಂಡಿದ್ದೇವೆ. ಎಲ್ಲದಕ್ಕೂ ನಂಬಿಕೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ಗೆ ಬೆಂಬಲಿಸದಿದ್ದರೆ, ಮೈಸೂರಿನಲ್ಲಿ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲಿಸುವುದಿಲ್ಲ ಎಂಬ ಸಚಿವ ಸಾ.ರಾ.ಮಹೇಶ್ ಹೇಳಿಕೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ''ಸಚಿವ ಸಾ.ರಾ.ಮಹೇಶ್ ಅವರು ತಪ್ಪು ಹೇಳಿಕೆ ನೀಡಿದ್ದಾರೆ. ಈ ರೀತಿಯ ಹೇಳಿಕೆಗಳಿಂದಲೇ ನಂಬಿಕೆ ದೂರವಾಗುತ್ತದೆ. ಅಷ್ಟಕ್ಕೂ ನಾವು ಎಲ್ಲಿಯೂ ಒಟ್ಟಾಗಿ ಕೆಲಸ ಮಾಡೋಲ್ಲ ಎಂದು ಹೇಳಿಲ್ಲ. ಹೀಗಾಗಿ ಈ ರೀತಿ ಊಹೆ ಮಾಡಿಕೊಳ್ಳುವುದೇ ತಪ್ಪು,''ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೇರೆಯವರ ಮಾತಿಗೆ ಕಿವಿಕೊಡುವುದಿಲ್ಲ: ''ಜೆಡಿಎಸ್-ಕಾಂಗ್ರೆಸ್ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ನಂಬಿಕೆ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಾಗಲಿ, ಮುಖ್ಯಮಂತ್ರಿ ಕುಮಾರಸ್ವಾಮಿಯಾಗಲಿ ಎಲ್ಲಿಯೂ ಮಾತನಾಡಿಲ್ಲ. ಹಾಗಾಗಿ ಅವರಿಗೆ ಆ ರೀತಿಯ ಅನುಮಾನಗಳಿಲ್ಲ. ಹೀಗಿರುವಾಗ ಬೇರೆಯವರ ಮಾತಿಗೆಲ್ಲ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಷ್ಟಕ್ಕೂ ನಾವಿನ್ನೂ ಪ್ರಚಾರವನ್ನೇ ಆರಂಭಿಸಿಲ್ಲ. ಹೀಗಿರುವಾಗ ಕೂಸು ಹುಟ್ಟೋಕು ಮುಂಚೆ ಕುಲಾವಿ ಬಗ್ಗೆ ಯಾಕೆ ಮಾತು?,'' ಎಂದರು.
ದೇವೇಗೌಡರ ಮಾತು ನಂಬುತ್ತೇನೆ: ದೇವೇಗೌಡರು ಮುಂದಿನ ಪ್ರಧಾನಿ ಅಭ್ಯರ್ಥಿ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ''ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಅಂತ ಮಾಜಿ ಪ್ರಧಾನಿ ದೇವೇಗೌಡರೇ ಹೇಳಿದ್ದಾರೆ. ಹಾಗಾಗಿ ನಾನು ದೇವೇಗೌಡರ ಮಾತನ್ನು ನಂಬುತ್ತೇನೆ. ಬೇರೆ ಯಾರೋ ನಾಯಕರು ಹೇಳಿದ್ದನ್ನು ನಾನು ನಂಬುವುದಿಲ್ಲ. ಹಾಗಾಗಿ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರೇ,'' ಎಂದು ಹೇಳಿದರು.
ರಾಹುಲ್ ಕರ್ನಾಟಕದಿಂದಲೇ ಸ್ಪರ್ಧಿಸಲಿ
ರಾಹುಲ್ಗಾಂಧಿ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ''ಮೋದಿ ಬೇರೆ ರಾಜ್ಯದಲ್ಲಿ ಚುನಾವಣೆಗೆ ನಿಲ್ಲಬಹುದಾರೆ, ರಾಹುಲ್ ಗಾಂಧಿ ಏಕೆ ನಿಲ್ಲಬಾರದು ? ಹಾಗಾಗಿ ನಾವು ರಾಹುಲ್ ಗಾಂಧಿಯವರನ್ನು ನಮ್ಮ ರಾಜ್ಯದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದೇವೆ. ಆದರೆ ಅವರು ಇನ್ನೂ ತೀರ್ಮಾನ ಮಾಡಿಲ್ಲ. ರಾಹುಲ್ ಅವರ ಅಜ್ಜಿ, ಅಮ್ಮ ಎಲ್ಲ ಕರ್ನಾಟಕದಿಂದ ಸ್ಪರ್ಧಿಸಿದ್ದಾರೆ. ಹಾಗಾಗಿ ರಾಹುಲ್ಗಾಂಧಿ ಅವರು ನಿಲ್ಲಲಿ ಎಂಬುದು ನಮ್ಮ ಆಸೆಯಾಗಿದೆ,''ಎಂದರು.
-------------
ಮೋದಿ ಮುಖವೇ ಬಿಜೆಪಿಗೆ ಬಂಡವಾಳ: ಟೀಕೆ
ಬಿಜೆಪಿ ನಾಯಕರಿಗೆ ಮೋದಿ ಮುಖವೇ ಬಂಡವಾಳವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ ಬಿಟ್ಟು ಬೇರೆ ನಾಯಕರೆ ಕಾಣುವುದಿಲ್ಲ. ಹಾಗಾದರೆ ಇಲ್ಲಿಯ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ವರ್ಚಸ್ಸು ಇಲ್ಲವೇ,''ಎಂದು ಪ್ರಶ್ನಿಸಿದರು.
''ಸ್ಥಳೀಯ ನಾಯಕರು ಮೋದಿ ಜಪ ಮಾಡುತ್ತಿದ್ದಾರೆ. ಆದರೆ ಮೋದಿ ಏನು ಅಭಿವೃದ್ಧಿ ಮಾಡಿದ್ದಾರೆ? 10 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಯುವ ಸಮೂಹವನ್ನು ವಂಚಿಸಿದ್ದಾರೆ. ನರೇಂದ್ರ ಮೋದಿ ಅವರಿಗೂ ಯಾವುದೇ ವರ್ಚಸ್ಸು ಇರಲಿಲ್ಲ. ಸರ್ಜಿಕಲ್ ಸ್ಟ್ರೈಕ್ ಮಾಡಿರೋದನ್ನು ಮುಂದಿಟ್ಟುಕೊಂಡು ತಮ್ಮ ವರ್ಚಸ್ಸು ಸೃಷ್ಟಿಸಿಕೊಂಡಿದ್ದಾರೆ. ಹಾಗೆ ನೋಡಿದರೆ ಕಾಂಗ್ರೆಸ್ ಕಾಲದಲ್ಲೂ 10-12 ಸರ್ಜಿಕಲ್ ಸ್ಟ್ರೈಕ್ ನಡೆದಿದೆ. ಆದರೆ ನಾವು ಅದನ್ನು ಹೇಳಿಕೊಂಡಿಲ್ಲ,'' ಎಂದರು.
-------------
ಮಾ.23ರ ನಂತರ ಕೈ ಅಭ್ಯರ್ಥಿಗಳ ಪಟ್ಟಿ?
ಕಾಂಗ್ರೆಸ್ನ ರಾಷ್ಟ್ರಮಟ್ಟದ ಸಮಿತಿ ಸಭೆ ನಡೆದ ಬಳಿಕ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿ, ''ಕಾಂಗ್ರೆಸ್ನ ರಾಷ್ಟ್ರಮಟ್ಟ ಸಮಿತಿ ಸಭೆ ಮಾ. 19ಕ್ಕೆ ನಡೆಯಬೇಕಿತ್ತು. ಆದರೆ ನನಗೆ ಬಂದಿರುವ ಮಾಹಿತಿ ಪ್ರಕಾರ ಮಾ. 22, 23ರಂದು ಮೀಟಿಂಗ್ ನಡೆಯಬಹುದು. ಆ ನಂತರ ಅಭ್ಯರ್ಥಿಗಳ ಫೈನಲ್ ಲಿಸ್ಟ್ ಬಿಡುಗಡೆ ಮಾಡಲಿದ್ದೇವೆ,''ಎಂದರು.
ತುಮಕೂರು ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿ, ''ನಾನು ಕೂಡ ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ನಲ್ಲಿಯೆ ಉಳಿಸಿಕೊಳ್ಳಲು ಸಲಹೆ ನೀಡಿದ್ದೆ. ಜೆಡಿಎಸ್ನವರೂ ಅಲ್ಲಿ ಟಿಕೆಟ್ ಕೇಳಿದ್ದಾರೆ. ಅಂತಿಮವಾಗಿ ನಿರ್ಧಾರ ಏನಾಗುತ್ತದೆ ನೋಡೋಣ,''ಎಂದರು.
ಮೈಸೂರು: ನಾವು ಪರಸ್ಪರ ನಂಬಿಕೆಯಿಂದಲೇ ಮೈತ್ರಿ ಮಾಡಿ ಮಾಡಿಕೊಂಡಿದ್ದೇವೆ. ಎಲ್ಲದಕ್ಕೂ ನಂಬಿಕೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ಗೆ ಬೆಂಬಲಿಸದಿದ್ದರೆ, ಮೈಸೂರಿನಲ್ಲಿ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲಿಸುವುದಿಲ್ಲ ಎಂಬ ಸಚಿವ ಸಾ.ರಾ.ಮಹೇಶ್ ಹೇಳಿಕೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ''ಸಚಿವ ಸಾ.ರಾ.ಮಹೇಶ್ ಅವರು ತಪ್ಪು ಹೇಳಿಕೆ ನೀಡಿದ್ದಾರೆ. ಈ ರೀತಿಯ ಹೇಳಿಕೆಗಳಿಂದಲೇ ನಂಬಿಕೆ ದೂರವಾಗುತ್ತದೆ. ಅಷ್ಟಕ್ಕೂ ನಾವು ಎಲ್ಲಿಯೂ ಒಟ್ಟಾಗಿ ಕೆಲಸ ಮಾಡೋಲ್ಲ ಎಂದು ಹೇಳಿಲ್ಲ. ಹೀಗಾಗಿ ಈ ರೀತಿ ಊಹೆ ಮಾಡಿಕೊಳ್ಳುವುದೇ ತಪ್ಪು,''ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೇರೆಯವರ ಮಾತಿಗೆ ಕಿವಿಕೊಡುವುದಿಲ್ಲ: ''ಜೆಡಿಎಸ್-ಕಾಂಗ್ರೆಸ್ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ನಂಬಿಕೆ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಾಗಲಿ, ಮುಖ್ಯಮಂತ್ರಿ ಕುಮಾರಸ್ವಾಮಿಯಾಗಲಿ ಎಲ್ಲಿಯೂ ಮಾತನಾಡಿಲ್ಲ. ಹಾಗಾಗಿ ಅವರಿಗೆ ಆ ರೀತಿಯ ಅನುಮಾನಗಳಿಲ್ಲ. ಹೀಗಿರುವಾಗ ಬೇರೆಯವರ ಮಾತಿಗೆಲ್ಲ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಷ್ಟಕ್ಕೂ ನಾವಿನ್ನೂ ಪ್ರಚಾರವನ್ನೇ ಆರಂಭಿಸಿಲ್ಲ. ಹೀಗಿರುವಾಗ ಕೂಸು ಹುಟ್ಟೋಕು ಮುಂಚೆ ಕುಲಾವಿ ಬಗ್ಗೆ ಯಾಕೆ ಮಾತು?,'' ಎಂದರು.
ದೇವೇಗೌಡರ ಮಾತು ನಂಬುತ್ತೇನೆ: ದೇವೇಗೌಡರು ಮುಂದಿನ ಪ್ರಧಾನಿ ಅಭ್ಯರ್ಥಿ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ''ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಅಂತ ಮಾಜಿ ಪ್ರಧಾನಿ ದೇವೇಗೌಡರೇ ಹೇಳಿದ್ದಾರೆ. ಹಾಗಾಗಿ ನಾನು ದೇವೇಗೌಡರ ಮಾತನ್ನು ನಂಬುತ್ತೇನೆ. ಬೇರೆ ಯಾರೋ ನಾಯಕರು ಹೇಳಿದ್ದನ್ನು ನಾನು ನಂಬುವುದಿಲ್ಲ. ಹಾಗಾಗಿ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರೇ,'' ಎಂದು ಹೇಳಿದರು.
ರಾಹುಲ್ ಕರ್ನಾಟಕದಿಂದಲೇ ಸ್ಪರ್ಧಿಸಲಿ
ರಾಹುಲ್ಗಾಂಧಿ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ''ಮೋದಿ ಬೇರೆ ರಾಜ್ಯದಲ್ಲಿ ಚುನಾವಣೆಗೆ ನಿಲ್ಲಬಹುದಾರೆ, ರಾಹುಲ್ ಗಾಂಧಿ ಏಕೆ ನಿಲ್ಲಬಾರದು ? ಹಾಗಾಗಿ ನಾವು ರಾಹುಲ್ ಗಾಂಧಿಯವರನ್ನು ನಮ್ಮ ರಾಜ್ಯದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದೇವೆ. ಆದರೆ ಅವರು ಇನ್ನೂ ತೀರ್ಮಾನ ಮಾಡಿಲ್ಲ. ರಾಹುಲ್ ಅವರ ಅಜ್ಜಿ, ಅಮ್ಮ ಎಲ್ಲ ಕರ್ನಾಟಕದಿಂದ ಸ್ಪರ್ಧಿಸಿದ್ದಾರೆ. ಹಾಗಾಗಿ ರಾಹುಲ್ಗಾಂಧಿ ಅವರು ನಿಲ್ಲಲಿ ಎಂಬುದು ನಮ್ಮ ಆಸೆಯಾಗಿದೆ,''ಎಂದರು.
-------------
ಮೋದಿ ಮುಖವೇ ಬಿಜೆಪಿಗೆ ಬಂಡವಾಳ: ಟೀಕೆ
ಬಿಜೆಪಿ ನಾಯಕರಿಗೆ ಮೋದಿ ಮುಖವೇ ಬಂಡವಾಳವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ ಬಿಟ್ಟು ಬೇರೆ ನಾಯಕರೆ ಕಾಣುವುದಿಲ್ಲ. ಹಾಗಾದರೆ ಇಲ್ಲಿಯ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ವರ್ಚಸ್ಸು ಇಲ್ಲವೇ,''ಎಂದು ಪ್ರಶ್ನಿಸಿದರು.
''ಸ್ಥಳೀಯ ನಾಯಕರು ಮೋದಿ ಜಪ ಮಾಡುತ್ತಿದ್ದಾರೆ. ಆದರೆ ಮೋದಿ ಏನು ಅಭಿವೃದ್ಧಿ ಮಾಡಿದ್ದಾರೆ? 10 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಯುವ ಸಮೂಹವನ್ನು ವಂಚಿಸಿದ್ದಾರೆ. ನರೇಂದ್ರ ಮೋದಿ ಅವರಿಗೂ ಯಾವುದೇ ವರ್ಚಸ್ಸು ಇರಲಿಲ್ಲ. ಸರ್ಜಿಕಲ್ ಸ್ಟ್ರೈಕ್ ಮಾಡಿರೋದನ್ನು ಮುಂದಿಟ್ಟುಕೊಂಡು ತಮ್ಮ ವರ್ಚಸ್ಸು ಸೃಷ್ಟಿಸಿಕೊಂಡಿದ್ದಾರೆ. ಹಾಗೆ ನೋಡಿದರೆ ಕಾಂಗ್ರೆಸ್ ಕಾಲದಲ್ಲೂ 10-12 ಸರ್ಜಿಕಲ್ ಸ್ಟ್ರೈಕ್ ನಡೆದಿದೆ. ಆದರೆ ನಾವು ಅದನ್ನು ಹೇಳಿಕೊಂಡಿಲ್ಲ,'' ಎಂದರು.
-------------
ಮಾ.23ರ ನಂತರ ಕೈ ಅಭ್ಯರ್ಥಿಗಳ ಪಟ್ಟಿ?
ಕಾಂಗ್ರೆಸ್ನ ರಾಷ್ಟ್ರಮಟ್ಟದ ಸಮಿತಿ ಸಭೆ ನಡೆದ ಬಳಿಕ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿ, ''ಕಾಂಗ್ರೆಸ್ನ ರಾಷ್ಟ್ರಮಟ್ಟ ಸಮಿತಿ ಸಭೆ ಮಾ. 19ಕ್ಕೆ ನಡೆಯಬೇಕಿತ್ತು. ಆದರೆ ನನಗೆ ಬಂದಿರುವ ಮಾಹಿತಿ ಪ್ರಕಾರ ಮಾ. 22, 23ರಂದು ಮೀಟಿಂಗ್ ನಡೆಯಬಹುದು. ಆ ನಂತರ ಅಭ್ಯರ್ಥಿಗಳ ಫೈನಲ್ ಲಿಸ್ಟ್ ಬಿಡುಗಡೆ ಮಾಡಲಿದ್ದೇವೆ,''ಎಂದರು.
ತುಮಕೂರು ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿ, ''ನಾನು ಕೂಡ ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ನಲ್ಲಿಯೆ ಉಳಿಸಿಕೊಳ್ಳಲು ಸಲಹೆ ನೀಡಿದ್ದೆ. ಜೆಡಿಎಸ್ನವರೂ ಅಲ್ಲಿ ಟಿಕೆಟ್ ಕೇಳಿದ್ದಾರೆ. ಅಂತಿಮವಾಗಿ ನಿರ್ಧಾರ ಏನಾಗುತ್ತದೆ ನೋಡೋಣ,''ಎಂದರು.