ಆ್ಯಪ್ನಗರ

ನಾನು ಎರಡು ಬಾರಿಯೂ ಆಕಸ್ಮಿಕ ಸಿಎಂ ಆಗಿದ್ದೇನೆ: ಎಚ್‌ ಡಿ ಕುಮಾರಸ್ವಾಮಿ

ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕವಾಗಿ. ಒಂದಲ್ಲ ಎರಡು ಬಾರಿ ಆಕಸ್ಮಿಕ ಸಿಎಂ ಆಗಿದ್ದೇನೆ ಎಂದು ಮೈಸೂರು ದಸರಾಗೆ ಉದ್ಘಾಟನೆ ನೀಡಿದ ಬಳಿಕ ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

Vijaya Karnataka Web 10 Oct 2018, 11:13 am
ಮೈಸೂರು: ನಾನು ಮುಖ್ಯಮಂತ್ರಿಯಾಗಿರಬಹುದು. ಆದರೆ, ಬೇರೆಯವರು ನೋಡುವಷ್ಟು ನಾನು ಖುಷಿಯಾಗಿಲ್ಲ. ನಾನು ಒಂದಲ್ಲ ಎರಡು ಬಾರಿ ಆಕಸ್ಮಿಕ ಸಿಎಂ ಆಗಿದ್ದೇನೆ ಎಂದು ಮೈಸೂರು ದಸರಾಗೆ ಚಾಲನೆ ನೀಡುವ ವೇಳೆ ಸಿಎಂ ಕುಮಾರಸ್ವಾಮಿ ಮತ್ತೆ ತಮ್ಮ ಮನದಾಳದ ಹೇಳಿಕೆಗಳನ್ನು ನೀಡಿದ್ದಾರೆ.
Vijaya Karnataka Web kumaraswamy..


ಅಲ್ಲದೆ, ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕವಾಗಿ. ಜನತೆಯ ಕಲ್ಯಾಣಕ್ಕಾಗಿ ನಾನು ದುಡಿಯಬೇಕಾಗಿದೆ. ಅದಕ್ಕೆ ನಿಮ್ಮೆಲ್ಲರ ಬೆಂಬಲ ಅಗತ್ಯವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ, ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿ ದಸರಾಗೆ ಚಾಲನೆ ನೀಡಿದ ಬಳಿಕ ಮತ್ತೆ ಈ ಮಾತುಗಳನ್ನಾಡಿರುವುದು ರಾಜಕೀಯ ವಲಯಗಳಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ