ಆ್ಯಪ್ನಗರ

ದೇವೇಗೌಡರ ಫೋಟೋ ಇಟ್ಟು ಪೂಜೆ ಮಾಡ್ತೀನಿ: ವಿಶ್ವನಾಥ್

ಶಾಸಕ ಸ್ಥಾನಕ್ಕೆ ರಾಜೀನಾಮೆ ಇತ್ತಿದ್ದಕ್ಕೆ ವಿಶ್ವನಾಥ್ ಜೆಡಿಎಸ್ ವರಿಷ್ಠ ದೇವೇಗೌಡರ ಕ್ಷಮೆ ಕೇಳಿದ್ದಾರೆ.

Vijaya Karnataka Web 4 Aug 2019, 3:14 pm
ಮೈಸೂರು: ‘ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಫೋಟೋವನ್ನು ದೇವರ ಮನೆಯಲ್ಲಿಟ್ಟು ಪೂಜೆ ಮಾಡ್ತೀನಿ...’ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಅಡಗೂರು ಎಚ್.ವಿಶ್ವನಾಥ್ ‘ಭಾವಾರ ಪತ್ರಿಕಾಗೋಷ್ಠಿಯಲ್ಲಿ ಹೀಗೆ ಹೇಳಿದರು.
Vijaya Karnataka Web H Vishwanath 23


ದೇವೇಗೌಡರು ನನಗೆ ಶಾಸಕನಾಗಲು ಅವಕಾಶ ಮಾಡಿಕೊಟ್ಟರು. ಅವರ ಬಗ್ಗೆ ಏನೂ ಮಾತಾಡಲಾರೆ. ಸನ್ನಿವೇಶ, ಒತ್ತಡ, ಅವಮಾನ, ತಿರಸ್ಕಾರದಿಂದಾಗಿ ಮೊದಲು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ. ಅನಂತರ ಶಾಸಕ ಸ್ಥಾನವನ್ನೂ ತ್ಯಜಿಸಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಕ್ಕಾಗಿ ಎಚ್.ಡಿ.ದೇವೇಗೌಡರ ಕ್ಷಮೆ ಯಾಚಿಸುತ್ತೇನೆ ಎಂದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕಾಗಿ ಹುಣಸೂರಿನ ಜನತೆಯ ಕ್ಷಮೆಯನ್ನೂ ವಿಶ್ವನಾಥ್ ಕೋರಿದರು.

ಪೊಲೀಸ್ ಬಿಗಿ ‘ಭದ್ರತೆಯಲ್ಲಿ ಪತ್ರಿಕಾಗೋಷ್ಠಿ

ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಅಡಗೂರು ಎಚ್.ವಿಶ್ವನಾಥ್ ಭಾನುವಾರ ಇಲ್ಲಿ ಬಿಗಿ ಪೊಲೀಸ್ ‘ದ್ರತೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಇಲ್ಲಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ವಿಶ್ವನಾಥ್ ಪತ್ರಿಕಾಗೋಷ್ಠಿ ನಡೆಯಿತು. ಹೊರಗಡೆ ಒಂದು ಪೊಲೀಸ್ ವ್ಯಾನ್, ಎರಡು ಜೀಪುಗಳಲ್ಲಿದ್ದ ಪೊಲೀಸರು ಭದ್ರತೆ ಒದಗಿಸಿದ್ದರು. ಪತ್ರಿಕಾಗೋಷ್ಠಿಯ ಸ್ಥಳದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸುವ ಸಾಧ್ಯತೆ ಇದ್ದ ಕಾರಣ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ವಿಶ್ವನಾಥ್ ಪತ್ರಿಕಾಗೋಷ್ಠಿ ಮುಗಿಸಿ ಹೊರ ಬಂದಾಗ ಅವರ ಬೆಂಬಲಿಗರು ವಿಶ್ವನಾಥ್ ಪರ ಜೈಕಾರ ಕೂಗಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ