ಆ್ಯಪ್ನಗರ

ಹೊಸ ಮತದಾರರಿಗೆ ಮನೆ ಮನೆಗೆ ತೆರಳಿ ಗುರುತಿನ ಚೀಟಿ ವಿತರಣೆ

ಹೊಸ ಮತದಾರರಿಗೆ ಮನೆ ಮನೆಗೆ ತೆರಳಿ ಗುರುತಿನ ಚೀಟಿ ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ.

Vijaya Karnataka 19 Mar 2019, 5:00 am
ಮೈಸೂರು : ಹೊಸ ಮತದಾರರಿಗೆ ಮನೆ ಮನೆಗೆ ತೆರಳಿ ಗುರುತಿನ ಚೀಟಿ ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ.
Vijaya Karnataka Web identity card distribution
ಹೊಸ ಮತದಾರರಿಗೆ ಮನೆ ಮನೆಗೆ ತೆರಳಿ ಗುರುತಿನ ಚೀಟಿ ವಿತರಣೆ


ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಪ್ರದೇಶದ ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದವರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವ ಯುವ ಮತದಾರರ ಮನೆ ಮನೆಗೆ ತೆರಳಿ ನಗರದ ಎಲ್ಲಾ ವಾರ್ಡ್‌ಗಳಲ್ಲಿ ಚುನಾವಣಾ ಗುರುತಿನ ಕಾರ್ಡ್‌ ವಿತರಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ದೊರೆಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಶಿವಾನಂದ ಮೂರ್ತಿ, ''ಏಪ್ರಿಲ್‌ 18 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ಹೊಸ ಯುವ ಮತದಾರರಿಗೆ ಅರಿವು ಮೂಡಿಸಲಾಗುತ್ತಿದೆ. ಕೃಷ್ಣರಾಜ ಕ್ಷೇತ್ರದಲ್ಲಿ 2400, ಚಾಮರಾಜ ಕ್ಷೇತ್ರದಲ್ಲಿ 1700 ಹಾಗೂ ನರಸಿಂಹ ರಾಜ ಕ್ಷೇತ್ರದಲ್ಲಿ 2468 ಹೊಸ ಯುವ ಮತದಾರರು ಚುನಾವಣಾ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹೊಸ ಸೇರ್ಪಡೆಯಾಗಿರುವವರು ಪ್ರಥಮ ಬಾರಿಗೆ ಮತದಾನ ಮಾಡಲು ಉತ್ಸುಕರಾಗಿದ್ದಾರೆ,'' ಎಂದು ತಿಳಿಸಿದರು.

''ಸೆಕ್ಟರ್‌ ಅಧಿಧಿಕಾರಿ, ರೆವಿನ್ಯೂ ಅಧಿಕಾರಿ ಹಾಗೂ ಬೂತ್‌ ಮಟ್ಟದ ಅಧಿಕಾರಿಗಳು ಚುನಾವಣಾ ಗುರುತಿನ ಕಾಡ್‌ಗಳನ್ನು ವಿತರಿಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಈ ಪ್ರಕ್ರಿಯೆ ಹೊಸ ಯುವ ಮತದಾರರಿಗೆ ಕಾರ್ಡ್‌ ತಲುಪಿಸುವ ವರೆವಿಗೂ ನಡೆಯಲಿದೆ.

ಯುವ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಪ್ರಜಾಪ್ರಭುತ್ವ ಸರಕಾರ ಅಸ್ಥಿತ್ವಕ್ಕೆ ಬರಲು ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಚುನಾವಣಾ ಆಯೋಗವು ಮತ್ತು ಚುನಾವಣಾ ಅಧಿಧಿಕಾರಿಗಳು ಯುವ ಮತದಾರರನ್ನು ಮತದಾನ ಕಡೆ ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿಯೂ ಜಾಗೃತಿ ಮೂಡಿಸಲಾಗುತ್ತಿದೆ,'' ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ