ಆ್ಯಪ್ನಗರ

ತ್ರಿಶಂಕು ಸ್ಥಿತಿಯಲ್ಲಿ ನಾಡಹಬ್ಬ ದಸರಾ

ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಗೆ ನೀತಿ ಸಂಹಿತೆ ಜಾರಿಯಾಗಿದ್ದು, ನಾಡಹಬ್ಬ ದಸರಾಕ್ಕೆ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗವನ್ನು ಜಿಲ್ಲಾಡಳಿತ ಕೋರಿದೆ.

Vijaya Karnataka 22 Sep 2019, 5:00 am
ಜಿಲ್ಲೆಯಲ್ಲಿನೀತಿ ಸಂಹಿತೆ ಜಾರಿ ಹಿನ್ನೆಲೆ: ವಿನಾಯಿತಿ ನೀಡಲು ಆಯೋಗಕ್ಕೆ ಮನವಿ
Vijaya Karnataka Web in the state of thrishanku
ತ್ರಿಶಂಕು ಸ್ಥಿತಿಯಲ್ಲಿ ನಾಡಹಬ್ಬ ದಸರಾ


ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಗೆ ನೀತಿ ಸಂಹಿತೆ ಜಾರಿಯಾಗಿದ್ದು, ನಾಡಹಬ್ಬ ದಸರಾಕ್ಕೆ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗವನ್ನು ಜಿಲ್ಲಾಡಳಿತ ಕೋರಿದೆ.

ಚುನಾವಣಾ ಆಯೋಗದ ಪ್ರಕಾರ ಯಾವುದೇ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆಯಾದ ಕೂಡಲೇ ಇಡೀ ಜಿಲ್ಲೆಗೆ ನೀತಿ ಸಂಹಿತೆ ಜಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿವಿಶ್ವ ಖ್ಯಾತಿ ಪಡೆದಿರುವ ನಾಡಹಬ್ಬ ದಸರಾ ಸಂಭ್ರಮಕ್ಕೆ ತಡೆ ಬಿದ್ದಿದೆ. ಜಿಲ್ಲೆಯಲ್ಲಿ ನೀತಿ ಸಂಹಿತೆ ಇರುವುದರಿಂದ ಯಾವುದೇ ವೇದಿಕೆಯಲ್ಲಿ ಜನಪ್ರತಿನಿಧಿಗಳು ಭಾಗಿಯಾಗುವಂತಿಲ್ಲ. ದಸರಾ ಸಿದ್ಧತೆ ಕುರಿತು ಸಭೆ ನಡೆಸುವಂತಿಲ್ಲ. ಜಂಬೂಸವಾರಿ ಸಂದರ್ಭ ಮುಖ್ಯಮಂತ್ರಿ ಸೇರಿದಂತೆ ಯಾವುದೇ ಸಚಿವರು, ಶಾಸಕರು ಹಾಗೂ ಇನ್ನಿತರ ಜನಪ್ರತಿನಿಧಿಗಳು ಅಧಿಕೃತವಾಗಿ ಪಾಲ್ಗೊಳ್ಳುವಂತಿಲ್ಲ.

ನಾಡಹಬ್ಬ ದಸರಾ ಜನರ ಹಬ್ಬವಾಗಿದ್ದು, ಜನಪ್ರತಿನಿಧಿಗಳು ಇಲ್ಲದಿದ್ದಲ್ಲಿ ನೀರಸವಾಗಲಿದೆ. ಯಾವುದೇ ಪೋಸ್ಟರ್‌, ಬ್ಯಾನರ್‌, ವೆಬ್‌ಸೈಟ್‌ ಹಾಗೂ ಪ್ರಚಾರ ಸಾಮಗ್ರಿಗಳಲ್ಲಿಜನಪ್ರತಿನಿಧಿಗಳ ಭಾವಚಿತ್ರ ಬಳಸುವಂತಿಲ್ಲ. ಇವರು ಇರುವ ಜಾಹೀರಾತು ಪ್ರಕಟಿಸುವಂತಿಲ್ಲ. ಸಂಪೂರ್ಣವಾಗಿ ಅಧಿಕಾರಿಗಳ ದಸರಾವಾಗಿ ಪರಿವರ್ತನೆಯಾಗಲಿದೆ.

----------

ಸ್ಪಷ್ಟನೆ ಕೋರಿಕೆ

ನಾಡಹಬ್ಬ ದಸರಾಕ್ಕೆ ನೀತಿ ಸಂಹಿತೆಯಿಂದ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗವನ್ನು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಕೋರಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

''ಸದ್ಯಕ್ಕೆ ಉಪ ಸಮಿತಿ ಅಥವಾ ಇನಿತರ ಯಾವುದೇ ಸಭೆ ನಡೆಸದಂತೆ ಜನಪ್ರತಿನಿಧಿಗಳಿಗೆ ಸೂಚನೆ ನೀಡಲಾಗಿದೆ. ಈಗ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೀತಿಸಂಹಿತೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗಿದೆ. ಅಲ್ಲಿಎಲ್ಲಾ ಜನಪ್ರತಿನಿಧಿಗಳ ಭಾವಚಿತ್ರ, ಜಾಹೀರಾತುಗಳನ್ನು ತೆರವುಗೊಳಿಸಲಾಗುತ್ತಿದೆ,''ಎಂದರು.

''ಕಳೆದ ವರ್ಷ ಮಂಡ್ಯ ಲೋಕಸಭಾ ಉಪ ಚುನಾವಣೆ ಸಂದರ್ಭ ಇದೇ ಗೊಂದಲ ಇತ್ತು. ಈ ಕ್ಷೇತ್ರಕ್ಕೆ ಜಿಲ್ಲೆಯ ಕೆ.ಆರ್‌.ನಗರ ಸೇರ್ಪಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿದಸರಾಕ್ಕೆ ನೀತಿಸಂಹಿತೆಯಿಂದ ವಿನಾಯಿತಿ ನೀಡುವಂತೆ ಕೋರಲಾಗಿತ್ತು. ಇದನ್ನು ಆಯೋಗ ಪರಿಗಣಿಸಿತ್ತು. ದಸರಾ ಆಚರಣೆಗೆ ಯಾವುದೇ ತೊಂದರೆ ಆಗಲಿಲ್ಲ. ಇದೇ ರೀತಿ ಈ ಬಾರಿಯೂ ಕೋರಲಾಗುವುದು. ಅಲ್ಲಿಂದ ಸ್ಪಷ್ಟನೆ ಬರುವವರೆಗೆ ನೀತಿ ಸಂಹಿತೆ ದಸರಾಕ್ಕೂ ಅನ್ವಯವಾಗಲಿದೆ,'' ಎಂದು ಹೇಳಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ