ಆ್ಯಪ್ನಗರ

ಅಂತರ್‌ ರಾಜ್ಯ ಬೈಕ್‌ ಕಳ್ಳರ ಬಂಧನ

ಶೋಕಿಗಾಗಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಅಂತರ್‌ರಾಜ್ಯ ಬೈಕ್‌ ಕಳ್ಳರನ್ನು ಬಂಧಿಸಿರುವ ಎನ್‌.ಆರ್‌. ಠಾಣೆ ಪೊಲೀಸರು ಆರೋಪಿಗಳಿಂದ 8 ಲಕ್ಷ ರೂ. ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Vijaya Karnataka 20 Jul 2018, 5:00 am
ಮೈಸೂರು: ಶೋಕಿಗಾಗಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಅಂತರ್‌ರಾಜ್ಯ ಬೈಕ್‌ ಕಳ್ಳರನ್ನು ಬಂಧಿಸಿರುವ ಎನ್‌.ಆರ್‌. ಠಾಣೆ ಪೊಲೀಸರು ಆರೋಪಿಗಳಿಂದ 8 ಲಕ್ಷ ರೂ. ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
Vijaya Karnataka Web inter state bike robbers arrested
ಅಂತರ್‌ ರಾಜ್ಯ ಬೈಕ್‌ ಕಳ್ಳರ ಬಂಧನ


ಕೇರಳದ ವೈನಾಡು ಜಿಲ್ಲೆಯ ತನಿಯಲ್‌ ಗ್ರಾಮದ ವಿಷ್ಣು(19), ಕಣಿಯರಮ್‌ ಗ್ರಾಮದ ಶರ್ಫುದ್ದಿನ್‌(19) ಬಂಧಿತರು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜು.5 ರಂದು ರಿಂಗ್‌ ರಸ್ತೆ ಪುಷ್ಪಾಶ್ರಮ ಜಂಕ್ಷನ್‌ ಬಳಿ ರಸ್ತೆಯಲ್ಲಿ ನೋಂದಣಿ ಸಂಖ್ಯೆ ಇಲ್ಲದ ಎರಡು ಬೈಕ್‌ಗಳನ್ನು ಇವರಿಬ್ಬರು ಕಡಿಮೆ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ತಮ್ಮ ಶೋಕಿಗಳಿಗೆ ಜೀವನಕ್ಕಾಗಿ ಬೈಕ್‌ಗಳ ಲಾಕ್‌ಗಳನ್ನು ಮುರಿದು ಕಳ್ಳತನ ಮಾಡಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.

ಈ ಪತ್ತೆ ಕಾರ್ಯದಲ್ಲಿ ಎನ್‌.ಆರ್‌. ಠಾಣೆಯ ಇನ್ಸ್‌ಪೆಕ್ಟರ್‌ ಅಶೋಕ್‌ಕುಮಾರ್‌ ಟಿ., ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಮೋಹನ್‌ ಎನ್‌., ಸಿಬ್ಬಂದಿಗಳಾದ ರಮೇಶ, ಮಂಜುನಾಥ, ಮಹದೇವ, ಕೃಷ್ಣ, ರಮೇಶ, ಮಹೇಶ ಇದ್ದರು.

---------------------

ಗಾಂಜಾ ಮಾರಾಟ: ಇಬ್ಬರ ಬಂಧನ

ಮೈಸೂರು:
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಆಲನಹಳ್ಳಿ ಠಾಣೆ ಪೊಲೀಸರು, 700 ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನ ಪ್ರವೀಣ್‌ ಪೂಜಾರಿ(25), ಗಿರೀಶ್‌(19) ಬಂಧಿತರಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜು.18 ರಂದು ಆಲನಹಳ್ಳಿ ಠಾಣಾ ವ್ಯಾಪ್ತಿಯ ಲಲಿತಮಹಲ್‌ ಹೋಟೆಲ್‌ ಮೈದಾನದ ಕಡೆಗೆ ಇರುವ ಸ್ಥಳದಲ್ಲಿ ದಾಳಿ ಮಾಡಿ ಗಾಂಜಾ ಸೊಪ್ಪು ಹೊಂದಿದ್ದ ಇವರಿಬ್ಬರನ್ನು ಬಂಧಿಸಲಾಗಿದೆ.

ದಾಳಿಯಲ್ಲಿ ಆಲನಹಳ್ಳಿ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಮಂಜು. ಕೆ. ಎಂ, ಮತ್ತು ಸಿಬ್ಬಂದಿ ವರ್ಗ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ