ಆ್ಯಪ್ನಗರ

ಆಡಿಯೋದಲ್ಲಿರುವುದು ಬಿಎಸ್‌ವೈ ಧ್ವನಿ ಎಂದು ಹೇಳಿಲ್ಲ: ಸಿಎಂ ಕುಮಾರಸ್ವಾಮಿ

ಬಿಡುಗಡೆಯಾಗಿರುವ ಆಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಮಾತು. ಈ ಕುರಿತು ಸಮಗ್ರ ತನಿಖೆಗೆ ಆದೇಶ ಮಾಡುತ್ತೇನೆಂದು ಅವರು ಹೇಳಿದರು.

Vijaya Karnataka Web 9 Feb 2019, 1:43 pm
ಮಂಗಳೂರು: ಆಪರೇಷನ್ ಕಮಲ ಸಂಬಂಧ ಬಿಡುಗಡೆ ಮಾಡಿರುವ ಆಡಿಯೋದಲ್ಲಿರುವ ಧ್ವನಿ ಬಿ.ಎಸ್.ಯಡಿಯೂರಪ್ಪ ಅವರದ್ದೆ ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು..
Vijaya Karnataka Web hdk


ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಡುಗಡೆಯಾಗಿರುವ ಆಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಮಾತು. ಈ ಕುರಿತು ಸಮಗ್ರ ತನಿಖೆಗೆ ಆದೇಶ ಮಾಡುತ್ತೇನೆಂದು ಅವರು ಹೇಳಿದರು.

'ಆಪರೇಷನ್‌ ಕಮಲ'ದ ಆಡಿಯೋ ರೆಕಾರ್ಡ್‌ ಮಾಡಿಸಿದ್ದು ನಾನೇ, ಸಿಎಂ ಕುಮಾರಸ್ವಾಮಿ

ಆಡಿಯೋ ಸಂಬಂಧ ಪ್ರಧಾನಿಯವರು ತನಿಖೆಗೆ ತೀರ್ಮಾನಿಸಿ ಸಹಕಾರ ಕೊಡಬೇಕು. ಅವರು ಸಹಕಾರ ಕೊಟ್ಟರೆ, ಅವರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡುತ್ತೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಆಡಿಯೋವನ್ನು ಮಿಮಿಕ್ರಿ ಎಂದು ಹೇಳಿದ್ದಾರೆ. ಆದರೆ, ಈ ಕುರಿತು ಸತ್ಯಾಸತ್ಯತೆ ಹೊರ ಬರಬೇಕಾಗಿದೆ. ಹೀಗಾಗಿ ತನಿಖೆ ಮಾಡಬೇಕು ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾದ ಅವಶ್ಯಕತೆ ಇದೆ ಎಂದು ಸಿಎಂ ಹೇಳಿದರು.

ರಾಜ್ಯ ಬಜೆಟ್‌ 2019ರ ಮಂಡನೆಗೂ ಮೊದಲು ಗೃಹ ಕಚೇರಿ ಕೃಷ್ಣಯಲ್ಲಿ ಸಿಎಂ ಕುಮಾರಸ್ವಾಮಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ 'ಆಪರೇಷನ್‌ ಕಮಲ'ದ ಆಡಿಯೋ ಬಿಡುಗಡೆ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದರು.

ಗುರುಮಠಕಲ್‌ ಕ್ಷೇತ್ರದ ಜೆಡಿಎಸ್‌ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರಿಗೆ ಬಿಎಸ್‌ ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎನ್ನಲಾದ ಆಡಿಯೋವನ್ನು ಬಿಡುಗಡೆ ಮಾಡಿ, ಈ ಆಡಿಯೋ ರೆಕಾರ್ಡ್‌ ಮಾಡಿಸಿದ್ದು ನಾನೇ ಎಂದಿದ್ದರು. ಅಪರೇಷನ್‌ ಕಮಲ ಜೀವಂತವಾಗಿದೆ. ಸಮ್ಮಿಶ್ರ ಸರಕಾರ ಕೆಡವಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದನ್ನು ಆಡಿಯೋ ಮೂಲಕ ಮನವರಿಕೆ ಮಾಡಲು ಪ್ರಯತ್ನಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ