ಆ್ಯಪ್ನಗರ

ಸಮ್ಮಿಶ್ರ ಸರಕಾರದಲ್ಲಿ ದೋಸ್ತಿ, ಮೈಸೂರಿನಲ್ಲಿ ಕಾಂಗ್ರೆಸ್‌ ಜೆಡಿಎಸ್‌ ಕುಸ್ತಿ

ಇದು ಇಂದಿನ ತೀರ್ಮಾನವಲ್ಲ. ಹಿಂದೆಯೇ ಮಾಡಿಕೊಂಡಿದ್ದ ತೀರ್ಮಾನ. ಜೆಡಿಎಸ್ ಸಭೆ ವೇಳೆ ಎಲ್ಲ ಸದಸ್ಯರು ಇದಕ್ಕೆ ಒಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು.

Vijaya Karnataka Web 22 Feb 2019, 6:08 pm
ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಶನಿವಾರ ನಡೆಯಲಿದ್ದು, ಬಿಜೆಪಿ ಜತೆ ಮೈತ್ರಿ ಮುಂದುವರಿಸಲು ಜೆಡಿಎಸ್ ಆಸಕ್ತಿ ತೋರಿದೆ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
Vijaya Karnataka Web ಜಿಟಿ ದೇವೇಗೌಡ
ಜಿಟಿ ದೇವೇಗೌಡ


ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಇಂದಿನ ತೀರ್ಮಾನವಲ್ಲ. ಹಿಂದೆಯೇ ಮಾಡಿಕೊಂಡಿದ್ದ ತೀರ್ಮಾನ. ಜೆಡಿಎಸ್ ಸಭೆ ವೇಳೆ ಎಲ್ಲ ಸದಸ್ಯರು ಇದಕ್ಕೆ ಒಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ, ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ಇದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನ ಸೋಲಿಸಬೇಕಿದೆ. ಅದಕ್ಕಾಗಿ ಎಲ್ಲಾ ಸಮಾನ ಪಕ್ಷಗಳು ಒಟ್ಟಾಗಲು ತೀರ್ಮಾನಿಸಿವೆ ಎಂದರು.

ಒಂದು ವೇಳೆ ಕಾಂಗ್ರೆಸ್ ಜತೆ ಮೈತ್ರಿ ಸಾಧ್ಯವಾಗದಿದ್ದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ. ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರೇಷ್ಮೆ ಸಚಿವ ಸಾ.ರಾ ಮಹೇಶ್, ಈ ವಿಷಯದ ಬಗ್ಗೆ ಬಿಜೆಪಿಯವರಿಗೆ ಮಾತು ಕೊಟ್ಟಿದ್ದು, ಈಗ ನಿರ್ಧಾರ ಬದಲಿಸಲು ಸಾಧ್ಯವಿಲ್ಲ ಈ ಕುರಿತು ಕಾಂಗ್ರೆಸ್ ನಾಯಕರ ಜತೆಯೂ ಮಾತನಾಡಲಾಗಿದೆ ಎಂದರು.

ದಿನೇಶ್ ಗುಂಡೂರಾವ್ ಜತೆ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಾರಾ ಮಹೇಶ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ