ಆ್ಯಪ್ನಗರ

ನಾನು ಪಕ್ಷ ಬಿಡಲಿ ಎಂದು ಜೆಡಿಎಸ್‌ ವರಿಷ್ಠರು ಕಾಯುತ್ತಿದ್ದಾರೆ: ಎಚ್‌ಡಿಕೆ ವಿರುದ್ಧ ಗುಡುಗಿದ ಜಿಟಿ ದೇವೇಗೌಡ

ನನ್ನ ಕ್ಷೇತ್ರದ ಅಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಮತದಾರರ ಸಂಕಷ್ಟಗಳಿಗೆ ಸ್ಪಂದಿಸುವುದೇ ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾನು ಸದಾ ದುಡಿಯುತ್ತೇನೆ ಎಂದು ಜಿಟಿ ದೇವೇಗೌಡ ಹೇಳಿದರು.

Vijaya Karnataka Web 12 Sep 2019, 8:47 pm
ಮೈಸೂರು: ‘ಜೆಡಿಎಸ್ ಪಕ್ಷ ಬಿಡುವ ಉದ್ದೇಶ ನನಗಿಲ್ಲ. ಆದರೆ, ಜೆಡಿಎಸ್ ನಾಯಕತ್ವ ನಾನು ಪಕ್ಷ ತೊರೆಯಲಿ ಅಂತ ಕಾಯುತ್ತಿದೆ’’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.
Vijaya Karnataka Web ಜಿಟಿ ದೇವೇಗೌಡ
ಜಿಟಿ ದೇವೇಗೌಡ


ಮೈಸೂರಿನಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಜೆಡಿಎಸ್ ಸಭೆಗೆ ಗೈರು ಹಾಜರಾದ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಜಿ.ಟಿ.ದೇವೇಗೌಡ, ‘‘ಈ ಸಭೆಗೆ ನನಗೆ ಆಹ್ವಾನ ಇರಲಿಲ್ಲ. ಈ ಸಭೆಯನ್ನು ಸಂಘಟಿಸುವಂತೆಯೂ ನನಗೆ ಹೇಳಿರಲಿಲ್ಲ. ಪಕ್ಷದಲ್ಲಿ ಕುಮಾರಸ್ವಾಮಿ ನನ್ನನ್ನು ನಡೆಸಿಕೊಂಡಿರುವ ರೀತಿಯಿಂದ ತುಂಬಾ ನೋವಾಗಿದೆ’’ ಎಂದರು.

ಜಿಟಿ ದೇವೇಗೌಡ ಮತ್ತೆ ನಮ್ಮತ್ರನೇ ಬರ್ತಾರೆ: ಎಚ್‌ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಸರಕಾರದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದರೂ ಯಾವುದೇ ಕೆಲಸ ಆಗಬೇಕಾಗಿದ್ದರೂ ಆಗ ಸಚಿವರಾಗಿದ್ದ ಸಾ.ರಾ. ಮಹೇಶ್‌ಗೆ ಹೇಳಬೇಕಿತ್ತು. ಕುಮಾರಸ್ವಾಮಿ ನನಗೆ ಉನ್ನತ ಶಿಕ್ಷಣ ಖಾತೆ ಕೊಟ್ಟಿದ್ದರ ಉದ್ದೇಶ ನಿಭಾಯಿಸಲು ಸಾಧ್ಯವಾಗದೇ ವಾಪಸ್ ಹೋಗಲಿ ಎಂಬುದೇ ಆಗಿತ್ತು. ನಾನು ಹೀಗೆ ವಾಪಸ್ ಹೋಗಿದ್ದರೆ ಸಾ.ರಾ.ಮಹೇಶ್‌ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಹೊಣೆಗಾರಿಕೆ ಒಪ್ಪಿಸುವ ಉದ್ದೇಶ ಕುಮಾರಸ್ವಾಮಿ ಅವರಿಗಿತ್ತು. ಆದರೆ, ಈ ವಿಚಾರ ಗೊತ್ತಾಗಿ ಉನ್ನತ ಶಿಕ್ಷಣ ಸಚಿವ ಸ್ಥಾನವನ್ನು ಉತ್ತಮವಾಗಿ ನಿಭಾಯಿಸಿದೆ ಎಂದು ಜಿ.ಟಿ.ದೇವೇಗೌಡ ಹೇಳಿದರು.

ನನಗೆ ರಾಜಕೀಯ ಗುರುಗಳು ಯಾರೂ ಇಲ್ಲ. ಸ್ವಂತ ಶಕ್ತಿಯಿಂದ ರಾಜಕೀಯದಲ್ಲಿ ಬೆಳೆದವನು. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದ ನಾಯಕರೂ ನನಗೆ ಬೆಂಬಲ ಕೊಟ್ಟಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಬಗ್ಗೆ ಅಪಾರ ಗೌರವವಿದೆ. ಮುಂದೆಯೂ ಅಪಾರವಾದ ಗೌರವವಿರುತ್ತದೆ ಎಂದರು

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಈ ಹಿಂದೆ ರಾಜಕೀಯವಾಗಿ ದುಡಿದಿದ್ದೇನೆ. ಸಿದ್ದರಾಮಯ್ಯ ಅವರೂ ನನಗೆ ರಾಜಕೀಯವಾಗಿ ಸಹಾಯ ಮಾಡಿದ್ದಾರೆ. ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ನಾನು ಸಿದ್ದರಾಮಯ್ಯ ರಾಜಕೀಯ ವಿರೋಧಿಗಳಾಗಿದ್ದೇವು. ಆದರೆ, ಯಾವತ್ತೂ ಸಿದ್ದರಾಮಯ್ಯ ಅವರನ್ನು ದ್ವೇಷ ಮಾಡಿಲ್ಲ. ಸಿದ್ದರಾಮಯ್ಯ ಪ್ರಬುದ್ಧ ನಾಯಕರು. ಅವರು ಮುಖ್ಯಮಂತ್ರಿ ಅಗಲಿ ಎಂದು ಮೈತ್ರಿ ಸರಕಾರದಲ್ಲೂ ಪ್ರತಿಪಾದಿಸಿದ್ದೆ ಎಂದು ಜಿಟಿ ದೇವೇಗೌಡ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ