ಆ್ಯಪ್ನಗರ

ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ತೀರ್ಮಾನ

ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡಪರ ಸಂಘಟನೆಗಳು ಮತ್ತು ತಾಲೂಕಿನ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗ ದೊಂದಿಗೆ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಯಿತು.

Vijaya Karnataka 25 Oct 2017, 5:15 am
ಪಿರಿಯಾಪಟ್ಟಣ: ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡಪರ ಸಂಘಟನೆಗಳು ಮತ್ತು ತಾಲೂಕಿನ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗ ದೊಂದಿಗೆ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಯಿತು.
Vijaya Karnataka Web kannada rajyotsava concludes a grand celebration
ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ತೀರ್ಮಾನ


ತಾಲೂಕು ಆಡಳಿತ ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಶಿರಸ್ಥೇದಾರ್ ಪ್ರಕಾಶ್ ಮಾತನಾಡಿ, ತಾಲೂಕಿನ ಸರಕಾರಿ ಇಲಾಖೆ, ವಿವಿಧ ಕನ್ನಡಪರ ಸಂಘಟನೆಗಳ ಜತೆಗೂಡಿ ವಿವಿಧ ಸ್ತಬ್ಧಚಿತ್ರಗಳು, ಕಲಾತಂಡಗಳೊಂದಿಗೆ ಭುವನೇಶ್ವರಿ ದೇವಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು. ಸಾರ್ವಜನಿಕರು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಖಾಸಗಿ ವಾಹನ ಚಾಲಕರ ಸಂಘದವರು, ಶಿಕ್ಷಣ ಇಲಾಖೆಯವರು ಭಾಗವಹಿಸಿ ಕಾರ‌್ಯಕ್ರಮ ಯಶಸ್ವಿಗೊಳಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಂಘ ಸಂಸ್ಥೆಗಳಿಂದ ಮನವಿ: ತಾಲೂಕು ಕಸಾಪ ಜತೆಗೂಡಿ ವಿವಿಧ ಕನ್ನಡಪರ ಸಂಘಗಳು, ತಹಸೀಲ್ದಾರ್‌ರವರಿಗೆ ಈ ಬಾರಿಯ ರಾಜ್ಯೋತ್ಸವದಲ್ಲಿ ನಾಡಿನ ವೈಭೋಗ ಬಿಂಬಿಸುವ ಸ್ತಬ್ಧಚಿತ್ರಗಳನ್ನು ತಾಲೂಕು ಆಡಳಿತ ತಯಾರು ಮಾಡುವಂತೆ ಹಾಗೂ ತಾಲೂಕಿನ ಕಲಾತಂಡಗಳು ಭಾಗವಹಿಸಲು ಅವಕಾಶ ಕಲ್ಪಿಸಿ ಅದ್ಧೂರಿಯಾಗಿ ಆಚರಿಸುವಂತೆ ಮನವಿ ಮಾಡಿದರು.

ಕಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಮೇ ಗೌಡ, ತಾ.ಪಂ. ನಿರ್ದೇಶಕ ಬಾಬು, ಪುರಸಭೆಯ ಮುಖ್ಯಾಧಿಕಾರಿ ಕಷ್ಣ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಶಿವರಾಜು, ಅರಣ್ಯ ಇಲಾಖೆಯ ರಾಮಣ್ಣ, ತಾ.ಕಸಾಪ ಅಧ್ಯಕ್ಷರಾದ ಬಿ.ಎಂ.ಶಿವಸ್ವಾಮಿ, ಎಪಿಎಂಸಿ ಸಹಾಯಕ ಕಾರ್ಯದರ್ಶಿ ಚೆಲುವರಾಯಿ, ತಾ.ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಲಕ್ಷ್ಮಿನಾರಾಯಣ, ಕಾರ್ಯದರ್ಶಿ ಬೆಕ್ಕರೆಸತೀಶ್‌ಆರಾಧ್ಯ, ಸ್ಫೂರ್ತಿ ಸ್ವಾವಲಂಬಿ ಸಂಸ್ಥೆ ಅಧ್ಯಕ್ಷೆ ಆಶಾ, ಆಟೋ ಚಾಲಕರ ಸಂಘದ ಕಪಾಲಿ ನಾಗರಾಜ್ ಸೇರಿದಂತೆ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ