ಮೈಸೂರು: ಕಾವೇರಿ ಜಲ ವಿವಾದ ಹಾಗೂ ಮೇಕೆದಾಟು ಯೋಜನೆ ಅನುಷ್ಠಾನ ವಿಚಾರದಲ್ಲಿ ಕರ್ನಾಟಕದ ಪರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬ್ಯಾಟ್ ಬೀಸಿದ್ದಾರೆ. ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡಲು ಬಿಜೆಪಿ ಕಟಿಬದ್ದವಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ತಮಿಳುನಾಡಿಗೆ 30 ಟಿಎಂಸಿ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದುಕೊಂಡು ಗೌರವಿಸುತ್ತೇವೆ. ಕಾವೇರಿ ನೀರು ನಿರ್ಹಹಣಾ ಮಂಡಳಿ ನೀಡಿರುವ ಆದೇಶವನ್ನು ಪರಿಶೀಲಿಸಲಾಗುವುದು. ಈ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುತ್ತೇವೆ ಎಂದು ಹೇಳಿದರು.
ಇದೇ ವೇಳೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಬಿಜೆಪಿ ಘಟಕ ವಿರೋಧಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಕರ್ನಾಟಕದ ಪರ ಬ್ಯಾಟಿಂಗ್ ಮಾಡಿದ ಅರುಣ್ ಸಿಂಗ್, ಮೇಕೆದಾಟು ಯೋಜನೆ ವಿಚಾರದಲ್ಲೂ ರಾಜ್ಯ ಸರ್ಕಾರ ಮತ್ತು ಬಿಜೆಪಿ ಕರ್ನಾಟಕದ ರೈತರ ಹಿತ ಕಾಪಾಡಲಿದೆ ಎಂದು ಭರವಸೆ ನೀಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಬದಲಾಗಲಿದ್ದಾರೆಯೇ..? ಎಂಬ ಪ್ರಶ್ನೆಗೆ ಹಾಗಾದರೇ ನೀವೇ ಹೇಳಿ ಯಾರು ಬರುತ್ತಿದ್ದಾರೆ..? ಎಂದು ನಗುತ್ತಲೇ ಉತ್ತರಿಸಿದರು.
ಇದಕ್ಕೂ ಮುನ್ನ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು. ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠಕ್ಕೆ ಇದೇ ಮೊದಲ ಬಾರಿ ಭೇಟಿ ನೀಡಿದ ಅರುಣ್ ಸಿಂಗ್ ಅವರಿಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಈ ವೇಳೆ ಸುತ್ತೂರು ಶ್ರೀಗಳ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಅರುಣ್ ಸಿಂಗ್, ಬಳಿಕ ಶ್ರೀಗಳೊಂದಿಗೆ ಉಭಯ ಕುಶಲೋಪರಿ ಮಾತುಕತೆ ನಡೆಸಿದರು.
ಮಠಕ್ಕೆ ಭೇಟಿ ನೀಡಿದ ಅರುಣ್ ಸಿಂಗ್ ಅವರಿಗೆ ಸಂಸದ ಪ್ರತಾಪ್ ಸಿಂಹ, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಶ್ರೀವತ್ಸ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಅರುಣ್ ಸಿಂಗ್ ಸಾಥ್ ನೀಡಿದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಅಣ್ಣಾಮಲೈ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಯಾರಾದ್ರೂ ಉಪವಾಸ ಮಾಡಲಿ, ನಾವು ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುತ್ತೇವೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ತಮಿಳುನಾಡಿಗೆ 30 ಟಿಎಂಸಿ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದುಕೊಂಡು ಗೌರವಿಸುತ್ತೇವೆ. ಕಾವೇರಿ ನೀರು ನಿರ್ಹಹಣಾ ಮಂಡಳಿ ನೀಡಿರುವ ಆದೇಶವನ್ನು ಪರಿಶೀಲಿಸಲಾಗುವುದು. ಈ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುತ್ತೇವೆ ಎಂದು ಹೇಳಿದರು.
ಇದೇ ವೇಳೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಬಿಜೆಪಿ ಘಟಕ ವಿರೋಧಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಕರ್ನಾಟಕದ ಪರ ಬ್ಯಾಟಿಂಗ್ ಮಾಡಿದ ಅರುಣ್ ಸಿಂಗ್, ಮೇಕೆದಾಟು ಯೋಜನೆ ವಿಚಾರದಲ್ಲೂ ರಾಜ್ಯ ಸರ್ಕಾರ ಮತ್ತು ಬಿಜೆಪಿ ಕರ್ನಾಟಕದ ರೈತರ ಹಿತ ಕಾಪಾಡಲಿದೆ ಎಂದು ಭರವಸೆ ನೀಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಬದಲಾಗಲಿದ್ದಾರೆಯೇ..? ಎಂಬ ಪ್ರಶ್ನೆಗೆ ಹಾಗಾದರೇ ನೀವೇ ಹೇಳಿ ಯಾರು ಬರುತ್ತಿದ್ದಾರೆ..? ಎಂದು ನಗುತ್ತಲೇ ಉತ್ತರಿಸಿದರು.
ಇದಕ್ಕೂ ಮುನ್ನ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು. ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠಕ್ಕೆ ಇದೇ ಮೊದಲ ಬಾರಿ ಭೇಟಿ ನೀಡಿದ ಅರುಣ್ ಸಿಂಗ್ ಅವರಿಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಈ ವೇಳೆ ಸುತ್ತೂರು ಶ್ರೀಗಳ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಅರುಣ್ ಸಿಂಗ್, ಬಳಿಕ ಶ್ರೀಗಳೊಂದಿಗೆ ಉಭಯ ಕುಶಲೋಪರಿ ಮಾತುಕತೆ ನಡೆಸಿದರು.
ಮಠಕ್ಕೆ ಭೇಟಿ ನೀಡಿದ ಅರುಣ್ ಸಿಂಗ್ ಅವರಿಗೆ ಸಂಸದ ಪ್ರತಾಪ್ ಸಿಂಹ, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಶ್ರೀವತ್ಸ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಅರುಣ್ ಸಿಂಗ್ ಸಾಥ್ ನೀಡಿದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಅಣ್ಣಾಮಲೈ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಯಾರಾದ್ರೂ ಉಪವಾಸ ಮಾಡಲಿ, ನಾವು ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುತ್ತೇವೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.