ಮೈಸೂರು: ವಿನಾಯಕ ದಾಮೋದರ ಸಾವರ್ಕರ್ಗೆ 'ಭಾರತ ರತ್ನ' ನೀಡುವ ಕೇಂದ್ರ ಸರಕಾರದ ಚಿಂತನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಮುಂದುವರಿಸಿದ್ದು, ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು
ಹಿಂದುತ್ವ ಪ್ರತಿಪಾದಕರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಸಾವರ್ಕರ್ಗೆ ಭಾರತ ರತ್ನ ನೀಡುವ ಕುರಿತಾದ ತನ್ನ ವಿರೋಧವನ್ನು ಸಮರ್ಥಿಸಿಕೊಂಡರು.
ಗಾಂಧಿಯನ್ನು ಕೊಂದ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೆ ಎಂದ ಸಿದ್ದರಾಮಯ್ಯ, ಸಚಿವ ಸಿಟಿ ರವಿ ವಿರುದ್ಧವೂ ಕೆಂಡಾಮಂಡಲರಾದರು. ಸಿ.ಟಿ.ರವಿ ಒಬ್ಬ ಯಕಶ್ಚಿತ್ ರಾಜಕಾರಣಿ. ನಾನು ಹಿಂದೂಗಳಿಗೆ ಭಾರತ ರತ್ನ ಕೊಡಬೇಡಿ ಎಂದು ಹೇಳಿಲ್ಲ. ನಾನು ಕೂಡು ಒಬ್ಬ ಹಿಂದೂ ಎಂದ ಸಿದ್ದರಾಮಯ್ಯ, ಹಿಂದುತ್ವದ ಮೂಲಕ ಕೋಮುವಾದ ಬಿತ್ತುವವರಿಗೆ, ಧರ್ಮದ ಹೆಸರಿನಲ್ಲಿ ಬೆಂಕಿ ಹಚ್ಚುವವರಿಗೆ ಈ ಗೌರವ ನೀಡುವುದು ಬೇಡ ಎಂದರು.
ಗಾಂಧಿ ಹತ್ಯೆ ಮಾಡಿದ ಗೋಡ್ಸೆಗೂ ಭಾರತ ರತ್ನ ಕೊಡಲಿ ಎಂದ ಸಿದ್ದರಾಮಯ್ಯ !
ಸಾವರ್ಕರ್ ಅವರಿಗೆ ಭಾರತ ರತ್ನ ಕುರಿತಾದ ಕೇಂದ್ರ ಸರಕಾರ ನಿಲುವಿಗೆ ವಿರೋಧ ವ್ಯಕ್ತಪಡಿಸಿ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಾವರ್ಕರ್ ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ ಆರೋಪವಿದೆ. ಆದರೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಆರೋಪಿಯಾಗಿ ಗುರುತಿಸಲಾಗಲಿಲ್ಲ. ಇಂತಹ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಸರಕಾರ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೊತ್ತಿದ ಸಾವರ್ಕರ್ ಕಿಡಿ- ಸಿದ್ದು ಮಾತು ಹಿಂಪಡೆಯಲಿ ಎಂದ ಶ್ರೀನಿವಾಸ್ ಪೂಜಾರಿ
ಸಿದ್ದರಾಮಯ್ಯ ಈ ಹೇಳಿಕೆ ವಿವಾದವನ್ನು ಸೃಷ್ಟಿಮಾಡಿತ್ತು. ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಸಚಿವ ಸಿಟಿ ರವಿ ಹಾಗೂ ಸಿದ್ದರಾಮಯ್ಯ ನಡುವೆ ಟ್ವಿಟ್ಟರ್ನಲ್ಲಿ ಜಟಾಪಟಿ ನಡೆದಿತ್ತು.
ಅವಕಾಶ ಸಿಕ್ಕರೆ ಮತ್ತೊಮ್ಮೆ ಸಿಎಂ
ಅವಕಾಶ ಸಿಕ್ಕರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಕನಸು ಕಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜನರ ಆಶೀರ್ವಾದ ಇದ್ದರೆ ನೋಡೋಣ. ರಾಜಕಾರಣ ಹೇಗೆ ಬರುತ್ತೆ ಅಂತ ಹೇಳೋಕೆ ಆಗಲ್ಲ. ಅವಕಾಶ ಸಿಕ್ಕರೆ ಮತ್ತೊಮ್ಮೆ ಸಿಎಂ ಆಗುತ್ತೇನೆ, ತಪ್ಪೇನಿದೆ ? ಎಂದು ಪ್ರಶ್ನಿಸಿದರು.
ಇದೇ ವೇಳೆ ಜನಗಣತಿ ಜಾರಿ ವಿಚಾರ ಕುರಿತಾಗಿ ರಾಜ್ಯ ಸರಕಾರವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದು , ಜಾತಿಗಣತಿ ಜಾರಿಗೆ ತರಲು ರಾಜ್ಯ ಸರಕಾರಕ್ಕೆ ಆಸಕ್ತಿ ಇಲ್ಲ ಎಂದಿದ್ದಾರೆ. ಜಾತಿಗಣತಿ ವರದಿ ಸಿದ್ಧಪಡಿಸಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಸರಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು. ಈಗ ಅವರು ಕರ್ತವ್ಯದಲ್ಲಿ ಇಲ್ಲ. ಸ್ವಾತಂತ್ರ್ಯ ಬಂದ ನಂತರ ಆಯಾ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಏನು ಅಂತ ಅರ್ಥ ಮಾಡಿಕೊಳ್ಳಬೇಕಿತ್ತು. ಅದಕ್ಕಾಗಿಯೇ ಜಾತಿಗಣತಿ ಮಾಡಿಸಿದೆ. ಆ ವರದಿಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕೆ ಇಲ್ಲ.
ಒಂದು ವೇಳೆ ಜಾತಿಗಣತಿ ವರದಿ ಜಾರಿ ಮಾಡದೇ ಇದ್ದರೆ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಆದರೆ,. ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಕಮಿಟ್ಮೆಂಟ್ ಇಲ್ಲ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ನರನ್ನು ಹತ್ತಿರಕ್ಕೆ ಸೇರಿಸುವುದಿಲ್ಲ. ದಲಿತರು, ಹಿಂದುಳಿದವರ ಅಭಿವೃದ್ಧಿ ಬೇಕಾಗಿಲ್ಲ ಎಂದು ಆರೋಪಿಸಿದರು.
ಪ್ರವಾಹ ಪರಿಹಾರ ವಿಳಂಬಕ್ಕೆ ಸಿದ್ದು ಕಿಡಿ
ಪ್ರವಾಹ ಬಂದು 60 ದಿನಗಳ ನಂತರ ಕೇಂದ್ರ ಪರಿಹಾರ ಬಿಡುಗಡೆ ಮಾಡಿರುವುದು ಬಹಳ ಕನಿಷ್ಠ ಹಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಇನ್ನೂ ಬೆಳೆ ಪರಿಹಾರ ಕೂಡ ಕೊಟ್ಟಿಲ್ಲ. ಮನೆಗಳಿಗೆ ಪರಿಹಾರ ಕೊಟ್ಟಿಲ್ಲ.10 ಸಾವಿರ ಹಣ 2 ಲಕ್ಷ ಮನೆಗಳಿಗೆ ಕೊಟ್ಟಿರೋದು ಬಿಟ್ಟರೆ ಪರಿಹಾರವೇ ಕೊಟ್ಟಿಲ್ಲ. ಕೇಂದ ಸರಕಾರ ಹಣ ಕೊಟ್ಟಿಲ್ಲ ರಾಜ್ಯ ಸರಕಾರವು ಖರ್ಚು ಮಾಡುತ್ತಿಲ್ಲ ಎಂದರು.
ರಾಜ್ಯ ಸರ್ಕಾರ ನೀಡಿರುವ ವರದಿ ಭೋಗಸ್ ಆಗಿದ್ರೆ ತನಿಖೆ ಮಾಡಲಿ.ಯಡಿಯೂರಪ್ಪ ಅವರೇ ಹಣಕಾಸು ಮಂತ್ರಿ ಆಗಿರೋದ್ರಿಂದ ರಾಜ್ಯದ ಹಣಕಾಸಿ ಪರಿಸ್ಥಿತಿ ಅವರೊಬ್ಬರಿಗೇ ಗೊತ್ತಿರಬಹುದು. ನಾನು ಕೇಳಿದಾಗ ಯಡಿಯೂರಪ್ಪ ನಾವು ಕಷ್ಟದಲ್ಲಿ ಇಲ್ಲ ಅಂತ ಹೇಳಿದ್ದಾರೆ ಎಂದ ಅವರು ಸದನದಿಂದ ಮಾಧ್ಯಮಗಳಿಗೆ ನಿರ್ಬಂಧ ಹಾಕಿರುವ ಸ್ಪೀಕರ್ ನಡೆಗೂ ವಿರೋಧ ವ್ಯಕ್ತಪಡಿಸಿದರು.
ಹಿಂದುತ್ವ ಪ್ರತಿಪಾದಕರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಸಾವರ್ಕರ್ಗೆ ಭಾರತ ರತ್ನ ನೀಡುವ ಕುರಿತಾದ ತನ್ನ ವಿರೋಧವನ್ನು ಸಮರ್ಥಿಸಿಕೊಂಡರು.
ಗಾಂಧಿಯನ್ನು ಕೊಂದ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೆ ಎಂದ ಸಿದ್ದರಾಮಯ್ಯ, ಸಚಿವ ಸಿಟಿ ರವಿ ವಿರುದ್ಧವೂ ಕೆಂಡಾಮಂಡಲರಾದರು. ಸಿ.ಟಿ.ರವಿ ಒಬ್ಬ ಯಕಶ್ಚಿತ್ ರಾಜಕಾರಣಿ. ನಾನು ಹಿಂದೂಗಳಿಗೆ ಭಾರತ ರತ್ನ ಕೊಡಬೇಡಿ ಎಂದು ಹೇಳಿಲ್ಲ. ನಾನು ಕೂಡು ಒಬ್ಬ ಹಿಂದೂ ಎಂದ ಸಿದ್ದರಾಮಯ್ಯ, ಹಿಂದುತ್ವದ ಮೂಲಕ ಕೋಮುವಾದ ಬಿತ್ತುವವರಿಗೆ, ಧರ್ಮದ ಹೆಸರಿನಲ್ಲಿ ಬೆಂಕಿ ಹಚ್ಚುವವರಿಗೆ ಈ ಗೌರವ ನೀಡುವುದು ಬೇಡ ಎಂದರು.
ಗಾಂಧಿ ಹತ್ಯೆ ಮಾಡಿದ ಗೋಡ್ಸೆಗೂ ಭಾರತ ರತ್ನ ಕೊಡಲಿ ಎಂದ ಸಿದ್ದರಾಮಯ್ಯ !
ಸಾವರ್ಕರ್ ಅವರಿಗೆ ಭಾರತ ರತ್ನ ಕುರಿತಾದ ಕೇಂದ್ರ ಸರಕಾರ ನಿಲುವಿಗೆ ವಿರೋಧ ವ್ಯಕ್ತಪಡಿಸಿ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಾವರ್ಕರ್ ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ ಆರೋಪವಿದೆ. ಆದರೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಆರೋಪಿಯಾಗಿ ಗುರುತಿಸಲಾಗಲಿಲ್ಲ. ಇಂತಹ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಸರಕಾರ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೊತ್ತಿದ ಸಾವರ್ಕರ್ ಕಿಡಿ- ಸಿದ್ದು ಮಾತು ಹಿಂಪಡೆಯಲಿ ಎಂದ ಶ್ರೀನಿವಾಸ್ ಪೂಜಾರಿ
ಸಿದ್ದರಾಮಯ್ಯ ಈ ಹೇಳಿಕೆ ವಿವಾದವನ್ನು ಸೃಷ್ಟಿಮಾಡಿತ್ತು. ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಸಚಿವ ಸಿಟಿ ರವಿ ಹಾಗೂ ಸಿದ್ದರಾಮಯ್ಯ ನಡುವೆ ಟ್ವಿಟ್ಟರ್ನಲ್ಲಿ ಜಟಾಪಟಿ ನಡೆದಿತ್ತು.
ಅವಕಾಶ ಸಿಕ್ಕರೆ ಮತ್ತೊಮ್ಮೆ ಸಿಎಂ
ಅವಕಾಶ ಸಿಕ್ಕರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಕನಸು ಕಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜನರ ಆಶೀರ್ವಾದ ಇದ್ದರೆ ನೋಡೋಣ. ರಾಜಕಾರಣ ಹೇಗೆ ಬರುತ್ತೆ ಅಂತ ಹೇಳೋಕೆ ಆಗಲ್ಲ. ಅವಕಾಶ ಸಿಕ್ಕರೆ ಮತ್ತೊಮ್ಮೆ ಸಿಎಂ ಆಗುತ್ತೇನೆ, ತಪ್ಪೇನಿದೆ ? ಎಂದು ಪ್ರಶ್ನಿಸಿದರು.
ಇದೇ ವೇಳೆ ಜನಗಣತಿ ಜಾರಿ ವಿಚಾರ ಕುರಿತಾಗಿ ರಾಜ್ಯ ಸರಕಾರವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದು , ಜಾತಿಗಣತಿ ಜಾರಿಗೆ ತರಲು ರಾಜ್ಯ ಸರಕಾರಕ್ಕೆ ಆಸಕ್ತಿ ಇಲ್ಲ ಎಂದಿದ್ದಾರೆ. ಜಾತಿಗಣತಿ ವರದಿ ಸಿದ್ಧಪಡಿಸಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಸರಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು. ಈಗ ಅವರು ಕರ್ತವ್ಯದಲ್ಲಿ ಇಲ್ಲ. ಸ್ವಾತಂತ್ರ್ಯ ಬಂದ ನಂತರ ಆಯಾ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಏನು ಅಂತ ಅರ್ಥ ಮಾಡಿಕೊಳ್ಳಬೇಕಿತ್ತು. ಅದಕ್ಕಾಗಿಯೇ ಜಾತಿಗಣತಿ ಮಾಡಿಸಿದೆ. ಆ ವರದಿಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕೆ ಇಲ್ಲ.
ಒಂದು ವೇಳೆ ಜಾತಿಗಣತಿ ವರದಿ ಜಾರಿ ಮಾಡದೇ ಇದ್ದರೆ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಆದರೆ,. ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಕಮಿಟ್ಮೆಂಟ್ ಇಲ್ಲ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ನರನ್ನು ಹತ್ತಿರಕ್ಕೆ ಸೇರಿಸುವುದಿಲ್ಲ. ದಲಿತರು, ಹಿಂದುಳಿದವರ ಅಭಿವೃದ್ಧಿ ಬೇಕಾಗಿಲ್ಲ ಎಂದು ಆರೋಪಿಸಿದರು.
ಪ್ರವಾಹ ಪರಿಹಾರ ವಿಳಂಬಕ್ಕೆ ಸಿದ್ದು ಕಿಡಿ
ಪ್ರವಾಹ ಬಂದು 60 ದಿನಗಳ ನಂತರ ಕೇಂದ್ರ ಪರಿಹಾರ ಬಿಡುಗಡೆ ಮಾಡಿರುವುದು ಬಹಳ ಕನಿಷ್ಠ ಹಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಇನ್ನೂ ಬೆಳೆ ಪರಿಹಾರ ಕೂಡ ಕೊಟ್ಟಿಲ್ಲ. ಮನೆಗಳಿಗೆ ಪರಿಹಾರ ಕೊಟ್ಟಿಲ್ಲ.10 ಸಾವಿರ ಹಣ 2 ಲಕ್ಷ ಮನೆಗಳಿಗೆ ಕೊಟ್ಟಿರೋದು ಬಿಟ್ಟರೆ ಪರಿಹಾರವೇ ಕೊಟ್ಟಿಲ್ಲ. ಕೇಂದ ಸರಕಾರ ಹಣ ಕೊಟ್ಟಿಲ್ಲ ರಾಜ್ಯ ಸರಕಾರವು ಖರ್ಚು ಮಾಡುತ್ತಿಲ್ಲ ಎಂದರು.
ರಾಜ್ಯ ಸರ್ಕಾರ ನೀಡಿರುವ ವರದಿ ಭೋಗಸ್ ಆಗಿದ್ರೆ ತನಿಖೆ ಮಾಡಲಿ.ಯಡಿಯೂರಪ್ಪ ಅವರೇ ಹಣಕಾಸು ಮಂತ್ರಿ ಆಗಿರೋದ್ರಿಂದ ರಾಜ್ಯದ ಹಣಕಾಸಿ ಪರಿಸ್ಥಿತಿ ಅವರೊಬ್ಬರಿಗೇ ಗೊತ್ತಿರಬಹುದು. ನಾನು ಕೇಳಿದಾಗ ಯಡಿಯೂರಪ್ಪ ನಾವು ಕಷ್ಟದಲ್ಲಿ ಇಲ್ಲ ಅಂತ ಹೇಳಿದ್ದಾರೆ ಎಂದ ಅವರು ಸದನದಿಂದ ಮಾಧ್ಯಮಗಳಿಗೆ ನಿರ್ಬಂಧ ಹಾಕಿರುವ ಸ್ಪೀಕರ್ ನಡೆಗೂ ವಿರೋಧ ವ್ಯಕ್ತಪಡಿಸಿದರು.