ಆ್ಯಪ್ನಗರ

ಡ್ರಗ್ಸ್‌ ಜಾಲದ ವಿರುದ್ಧ ಪೊಲೀಸ್‌ ಇಲಾಖೆ ಸಮರ: ಬಸವರಾಜ್‌ ಬೊಮ್ಮಾಯಿ

ಕರ್ನಾಟಕದಲ್ಲಿ ನೆಲೆಯೂರಿರುವ ಡ್ರಗ್ಸ್‌ ಮಾಫಿಯಾವನ್ನು ಕಿತ್ತೊಗೆಯಲು ರಾಜ್ಯ ಪೊಲೀಸ್‌ ಇಲಾಖೆ ಸಮರ ಸಾರಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ. ಅದಲ್ಲದೇ ಪೊಲೀಸ್‌ ಇಲಾಖೆಯನ್ನು ಸದೃಢಗೊಳಿಸಲು ಮುಂದಿನ 2 ವರ್ಷಗಳಲ್ಲಿ 16,000 ಪೊಲೀಸ್‌ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.

Vijaya Karnataka Web 24 Nov 2020, 11:32 pm
ಮೈಸೂರು: ರಾಜ್ಯದಲ್ಲಿ ಡ್ರಗ್ಸ್‌ ಜಾಲವನ್ನು ಬುಡ ಸಮೇತ ಕಿತ್ತೊಗೆಯಲು ಪೊಲೀಸ್‌ ಇಲಾಖೆ ಸಮರ ಸಾರಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ 10 ವರ್ಷದಲ್ಲಿ ಸಿಗುತ್ತಿದ್ದ ಮಾದಕ ವಸ್ತುಗಳನ್ನು ಕೇವಲ ಆರು ತಿಂಗಳಲ್ಲಿಯೇ ವಶಪಡಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದರು.
Vijaya Karnataka Web Basavaraj Bommai


ಮೈಸೂರಿನ ನಜರ್‌ಬಾದ್‌ನಲ್ಲಿ ನಿರ್ಮಿಸಲಾಗಿರುವ ನಗರ ಪೊಲೀಸ್‌ ಆಯುಕ್ತರ ನೂತನ ಕಚೇರಿ ಕಟ್ಟಡ, ಪೊಲೀಸ್‌ ಗೃಹ-2020 ಯೋಜನೆಯಡಿ ನಿರ್ಮಿಸಿರುವ 108 ವಸತಿಗೃಹಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸಿಂಥೆಟಿಕ್‌ ಡ್ರಗ್‌ ಮಾಫಿಯಾ ತಡೆಗಟ್ಟುವಲ್ಲಿಯೂ ಪೊಲೀಸ್ ಇಲಾಖೆ ಪ್ರಮುಖ ಪಾತ್ರವಹಿಸಿದೆ. ಇತ್ತೀಚೆಗೆ ಸೈಬರ್‌ ಕ್ರೈಮ್‌, ಬ್ಯಾಂಕ್‌ ಫ್ರಾಡ್‌ಗಳು ಹೆಚ್ಚಾಗುತ್ತಿವೆ. ಇವನ್ನು ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲಿಯೂ ಸೈಬರ್‌ ಪೊಲೀಸ್‌ ಠಾಣೆ ತೆರೆಯಲಾಗಿದೆ. ಹೀಗಾಗಿ ಒಂದೂವರೆ ವರ್ಷದಲ್ಲಿರಾಜ್ಯದಲ್ಲಿಅಪರಾಧ ಸಂಖ್ಯೆ ಕಡಿಮೆಯಾಗಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನೀಡಿದ ಆರ್ಥಿಕ ಸಹಕಾರದಿಂದಾಗಿ ರಾಜ್ಯದ ಪೊಲೀಸ್‌ ಇಲಾಖೆಯ ನಾನಾ ಬೇಡಿಕೆ ಈಡೇರಿವೆ. ಇದೀಗ ಸಿಬ್ಬಂದಿ ಕೊರತೆ ನೀಗಿಸಲು ಎರಡು ವರ್ಷಗಳಲ್ಲಿ ನಾನಾ ಹಂತಗಳಲ್ಲಿ ಒಟ್ಟು 16,000 ಪೊಲೀಸ್‌ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು. ಇದಲ್ಲದೆ ಖಾಲಿ ಇರುವ ಪಿಎಸ್‌ಐ, ಸಿಬಿಐ ಸಿಬ್ಬಂದಿ ನೇಮಕಾತಿಯೂ ನಡೆಯಲಿದೆ ಎಂದು ತಿಳಿಸಿದರು.

ವೃತ್ತಿಪರ ಆಡಳಿತ ನೀಡಲು ಪೊಲೀಸರಿಗೆ ಸಿಎಂ ಸಲಹೆ | ಮೈಸೂರು ಆಯುಕ್ತರ ನೂತನ ಕಚೇರಿ ಉದ್ಘಾಟನೆ

11,000 ಗೃಹ ನಿರ್ಮಾಣ
ನೂತನ ನಗರ ಪೊಲೀಸ್‌ ಆಯುಕ್ತರ ಕಚೇರಿ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ವಸತಿ ಸಮುಚ್ಚಯ ನಿರ್ಮಾಣಕ್ಕೆ 20.31 ಕೋಟಿ ರೂ. ವ್ಯಯಿಸಲಾಗಿದೆ. ಇದೇ ಯೋಜನೆಯಡಿ ಪ್ರತಿ ವರ್ಷ 2,000 ದಂತೆ ಮುಂದಿನ 5 ವರ್ಷದಲ್ಲಿ 11,000 ಮನೆಗಳನ್ನು ಕಟ್ಟುವ ಗುರಿ ಇದೆ. ಇದರಿಂದ ವಸತಿ ಸಮಸ್ಯೆಗೆ ಸ್ವಲ್ಪ ಪ್ರಮಾಣದ ಮುಕ್ತಿ ಸಿಗಲಿದೆ ಎಂದರು.

ಮೈಸೂರು ಪೊಲೀಸ್‌ ಆಯುಕ್ತರ ಕಚೇರಿ ಉದ್ಘಾಟನೆಗೆ ಕೊನೆಗೂ ಕೂಡಿ ಬಂದ ಮುಹೂರ್ತ..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ