ಆ್ಯಪ್ನಗರ

ಎಸ್ಸೆಸ್ಸೆಲ್ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ, ಆರೋಪಿ ಬಂಧನ

Vijaya Karnataka Web 25 Mar 2019, 2:51 pm
Vijaya Karnataka Web Exam
ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋಮವಾರ ವಾಟ್ಸ್‌ಆ್ಯಪ್‌ನಲ್ಲಿ ಸೋರಿಕೆಯಾಗಿದ್ದು, ಗೊಂದಲ ಮೂಡಿಸಿತ್ತು.

ಸೋಮವಾರ ಬೆಳಗ್ಗೆ ಗಣಿತ ಪ್ರಶ್ನೆ ಆರಂಭವಾಗುತ್ತಿದ್ದಂತೆ ಖಾಸಗಿ ಅಭ್ಯರ್ಥಿಯೊಬ್ಬ ಪ್ರಶ್ನೆ ಪತ್ರಿಕೆಯ ಚಿತ್ರಗಳನ್ನು ಸೆರೆ ಹಿಡಿದು ವಾಟ್ಸ್‌ಆ್ಯಪ್‌ ಮೂಲಕ ರವಾನೆ ಮಾಡಿದ್ದಾನೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಅಭ್ಯರ್ಥಿಯನ್ನು ಮುಜಾಹಿದ್‌ ಪಾಶಾ ಎಂದು ಗುರುತಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಮೈಸೂರು ಡಿಡಿಪಿಐ ಪಾಂಡುರಂಗ ದೃಢ ಪಡಿಸಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಮಹಿಳಾ ಶಿಕ್ಷಕಿ ಮೇಲ್ವಾಚಾರಕಿ ಆಗಿರುವುದನ್ನು ಗಮನಿಸಿದ ಆರೋಪಿ ಒಳವಸ್ತ್ರದೊಳಗೆ ಸ್ಮಾಟ್‌ಫೋನ್‌ ಇಟ್ಟುಕೊಂಡು ಆಗಮಿಸಿದ್ದ ಎನ್ನಲಾಗಿದೆ.

ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ತೆಗೆದುಕೊಂಡು ಆತನ ಸ್ನೇಹಿತರಿಗೆ ಕಳುಹಿಸಿದ್ದಾನೆ. ಆತನ ಸ್ನೇಹಿತರಿಗೆ ಉತ್ತರ ಕಳುಹಿಸಿಕೊಡುವಂತೆ ಸಂದೇಶ ಕಳುಹಿಸಿದ್ದಾನೆ. ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ