ಆ್ಯಪ್ನಗರ

ಬಿಜೆಪಿಯ ಕಚ್ಚಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತ : ಮಾಜಿ ಸಚಿವ ಕೃಷ್ಣಭೈರೇಗೌಡ

ಬಿಜೆಪಿಯ ಒಳ ಜಗಳದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ.ಗಂಡಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎನ್ನುವ ಹಾಗೆ ಬಿಜೆಪಿ ಒಳಜಗಳದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದಿದ್ದಾರೆ.

Vijaya Karnataka Web 18 Jan 2020, 3:59 pm
ಮೈಸೂರು: ಬಿಜೆಪಿಯ ಒಳ ಜಗಳದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ.
Vijaya Karnataka Web krishna byre gowda


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಡಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎನ್ನುವ ಹಾಗೆ ಬಿಜೆಪಿ ಒಳಜಗಳದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಸದ್ಯ ಅಧಿಕಾರಕ್ಕೆ ಬಂದು 6 ತಿಂಗಳಾದರೂ ಬಿಜೆಪಿ ಸಂಪೂರ್ಣ ಸಂಪುಟ ರಚಿಸಲು ಮುಂದಾಗಿಲ್ಲ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಿಂತ ಸಚಿವ ಸಂಪುಟ ವಿಸ್ತರಣೆ ಮುಖ್ಯವಾದದ್ದ. ಅದೇ ನಡೆಯುತ್ತಿಲ್ಲ ಎಂದರು.

ಇನ್ನು ಮುಂದುವರೆದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ವಿಳಂಬವಾಗಿಲ್ಲ. ಕೆಪಿಸಿಸಿ ಆಗಲಿ, ಎಐಸಿಸಿ ಆಗಲಿ ತತ್‌ ಕ್ಷಣಕ್ಕೆ ಎಂದು ಅಧ್ಯಕ್ಷರ ಆಯ್ಕೆ ಮಾಡುತ್ತೇವೆಂದು ಎಲ್ಲಿಯೂ ಹೇಳಿರಲಿಲ್ಲ. ಅಧ್ಯಕ್ಷರ ಅವಧಿ ಇನ್ನು ಮೂರು ವರ್ಷ ಕಾಲಾವಧಿ ಇದೆ. ಅಷ್ಟರೊಳಗೆ ನಮ್ಮ ಪಕ್ಷಕ್ಕೆ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಆರು ತಿಂಗಳಾದರೂ ಬಿಜೆಪಿ ಸರ್ಕಾರ ಪೂರ್ಣ ಸಂಪುಟ ರಚಿಸಿಲ್ಲ. ನೆರೆ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಬಿಜೆಪಿಯವರು ಉತ್ತರ ಕೊಡಬೇಕಾಗಿದೆ ಎಂದರು.

ಬಿಜೆಪಿ ಪಕ್ಷದಲ್ಲಿ ಸಿಎಂ ನಿಂದ ಹಿಡಿದು ಎಲ್ಲರೂ ಒತ್ತಡದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಸಿಎಂ ಹಾಗೂ ವರಿಷ್ಠರ ನಡುವೆ ಸಮನ್ವಯತೆ ಇಲ್ಲ. ರಾಜ್ಯದಲ್ಲೂ ಸಿಎಂ ಹಾಗೂ ನಾಯಕರ ನಡುವೆ ಸಮನ್ವಯತೆ ಇಲ್ಲ. ಇವೆಲ್ಲದರ ಪರಿಣಾಮ ರಾಜ್ಯದ ಅಭಿವೃದ್ಧಿ ಮೇಲೆ ಬಿದ್ದಿದೆ. ರಾಜ್ಯದಲ್ಲಿ ಜನರ ಪರ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂದು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ