ಆ್ಯಪ್ನಗರ

ಎಸಿಬಿ ಬಲೆಗೆ ಕೆಎಸ್‌ಆರ್‌ಟಿಸಿ ಅಧಿಕಾರಿ

ಬಾಕಿ ಅರಿಯರ್ಸ್‌ ಹಣದ ಚೆಕ್‌ ನೀಡಲು ಬಸ್‌ ಚಾಲಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಮೈಸೂರಿನ ಕೆಎಸ್‌ಆರ್‌ಟಿಸಿ ಗ್ರಾಮಾಂತರ ವಿಭಾಗದ ಡಿಪೋ ಅಕೌಂಟ್ಸ್‌ ಸೂಪರ್‌ವೈಸರ್‌ ಎಸಿಬಿ ಬಲೆಗೆ ಬಿದ್ದಿದ್ದಾರೆ.

Vijaya Karnataka 12 Jul 2019, 5:00 am
ಮೈಸೂರು: ಬಾಕಿ ಅರಿಯರ್ಸ್‌ ಹಣದ ಚೆಕ್‌ ನೀಡಲು ಬಸ್‌ ಚಾಲಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಮೈಸೂರಿನ ಕೆಎಸ್‌ಆರ್‌ಟಿಸಿ ಗ್ರಾಮಾಂತರ ವಿಭಾಗದ ಡಿಪೋ ಅಕೌಂಟ್ಸ್‌ ಸೂಪರ್‌ವೈಸರ್‌ ಎಸಿಬಿ ಬಲೆಗೆ ಬಿದ್ದಿದ್ದಾರೆ.
Vijaya Karnataka Web ksrtc officer of acb trap
ಎಸಿಬಿ ಬಲೆಗೆ ಕೆಎಸ್‌ಆರ್‌ಟಿಸಿ ಅಧಿಕಾರಿ


ಮೈಸೂರಿನ ಬನ್ನಿಮಂಟಪದಲ್ಲಿರುವ ಕೆಎಸ್‌ಆರ್‌ಟಿಸಿ ಗ್ರಾಮಾಂತರ ವಿಭಾಗದ ಡಿಪೋ ಅಕೌಂಟ್ಸ್‌ ಸೂಪರ್‌ವೈಸರ್‌ ಮಂಜುನಾಥ್‌ ಎಸಿಬಿ ಬಲೆಗೆ ಬಿದ್ದವರು. ಕೆಎಸ್‌ಆರ್‌ಟಿಸಿ ಚಾಲಕ ಬಸವರಾಜು ಅವರಿಂದ 10,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ರಶ್ಮಿ ನೇತೃತ್ವದ ಅಧಿಕಾರಿಗಳು ಮಂಜುನಾಥ್‌ ಅವರನ್ನು ಹಣದ ಸಮೇತ ಬಂಧಿಸಿದರು.

ಬಸವರಾಜು ಅವರಿಗೆ ಬರಬೇಕಾಗಿದ್ದ 1,03,617 ರೂ. ಬಾಕಿ ಅರಿಯರ್ಸ್‌ ಹಣದ ಚೆಕ್‌ ನೀಡಲು ಮಂಜುನಾಥ್‌ ಅವರು 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬಸವರಾಜು ಅವರು ಮೈಸೂರು ಎಸಿಬಿ ಎಸ್ಪಿ ಕಚೇರಿಗೆ ದೂರು ನೀಡಿದ್ದರು. ದೂರಿನನ್ವಯ ಭ್ರಷ್ಟಾಚಾರ ನಿಗ್ರಹ ಕಾಯಿದೆ 1988ರ ಸೆಕ್ಷನ್‌ 7ರಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಡಿಪೋದ ವಿಭಾಗೀಯ ನಿಯಂತ್ರಕರ ಕಚೇರಿಯಲ್ಲಿ 10,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಹಣದ ಸಮೇತ ಮಂಜುನಾಥ್‌ರನ್ನು ಬಂಧಿಸಿದರು. ರಾತ್ರಿ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ನ್ಯಾಯಾಧೀಶರ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಸಿಬಿ ಇನ್ಸ್‌ಪೆಕ್ಟರ್‌ ಶೇಖರ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ