ಆ್ಯಪ್ನಗರ

ಮಳೆಯಿಂದ ಸಂಕಷ್ಟದಲ್ಲಿರೋ ಜನರಿಗೆ ಮೊದಲು ಪರಿಹಾರ ಕೊಡಿ: ಕುಮಾರಸ್ವಾಮಿ

ನಾವೆಂದೂ ಕೂಡ ಪಕ್ಷದ ಕಾರ್ಯಕರ್ತರನ್ನು ಸೋಲಿಗೆ ಹೊಣೆ ಮಾಡಿಲ್ಲ. ಕಾರ್ಯಕರ್ತರನ್ನ ಸೋಲಿಸಿದ್ದೀರಿ ಎಂದು ರೇಗಾಡಿಲ್ಲ. ನಮ್ಮ ಕೆಲವು ತಪ್ಪುಗಳಿಂದ ಸೋಲುಂಟಾಗುತ್ತದೆ. ಕಾರ್ಯಕರ್ತರನ್ನ ದೂರುವುದು ಸರಿಯಲ್ಲ

Lipi 22 Nov 2021, 6:30 pm
ಮೈಸೂರು: ರಾಜ್ಯದಲ್ಲಿ ವಿಪರೀತ ಮಳೆಯಾಗಿದೆ. ಜನರ ಪರಿಸ್ಥಿತಿ ಶೋಚನೀಯವಾಗಿದೆ. ರಾಜ್ಯದಲ್ಲಿ 5 ರಿಂದ 6 ಲಕ್ಷ ಎಕ್ಟೆರ್ ಬೆಳೆ ನಷ್ಟ ಆಗಿದೆ. ಸರಕಾರದ ಪರಿಹಾರದ‌ ಗೈಡಲೈನ್‌ನಿಂದ ಜನರ ಸಮಸ್ಯೆ ಸರಿಪಡಿಸಲಾಗದು. ಗೈಡ್ ಲೈನ್ ವರದಿ ಇಟ್ಟುಕೊಂಡು ಪರಿಹಾರ ಕೊಡೋದು ಸರಿಯಲ್ಲ. ಮೊದಲು ಅದನ್ನ ಬದಿಗೊತ್ತಿ ನಷ್ಟವಾಗಿರುವ ಬಗ್ಗೆ ಪರಿಹಾರ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದರು.
Vijaya Karnataka Web kumaraswamy urges govt to release compensation after heavy rains
ಮಳೆಯಿಂದ ಸಂಕಷ್ಟದಲ್ಲಿರೋ ಜನರಿಗೆ ಮೊದಲು ಪರಿಹಾರ ಕೊಡಿ: ಕುಮಾರಸ್ವಾಮಿ


ಮೈಸೂರಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ , ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ರಸ್ತೆಗಳು ಬ್ರಿಡ್ಜ್ ಹಾಳಾಗಿದೆ. 20ಕ್ಕೂ ಹೆಚ್ಚು ಜನರು ಸತ್ತಿದ್ದಾರೆ. ಸರಕಾರದಲ್ಲಿರುವ ಮಂತ್ರಿಗಳು ಕಾಟಾಚಾರಕ್ಕೆ ಸರ್ವೆ ಮಾಡಬಾರದು. ಈಗಾಗಲೇ ಸಚಿವರು ಹೋಗಿ ಸರ್ವೆ ಮುಗಿಸಬೇಕಿತ್ತು. ಆದರೆ ಈವರೆಗೂ ಸರಕಾರ ಆ ಕೆಲಸ ಮಾಡಿಲ್ಲ. ಜನರ ಹಿತದೃಷ್ಟಿಗೆ ಸರಕಾರ ಕೆಲಸ ಮಾಡಬೇಕು ಎಂದು ತಿಳಿಸಿದರು.

ಅಕಾಲಿಕ ಮಳೆ: ಮೈಸೂರು ಪ್ರವಾಸೋದ್ಯಮಕ್ಕಿಲ್ಲ ಕಳೆ, ಟೂರಿಸ್ಟ್ ಸ್ಪಾಟ್ ಖಾಲಿ ಖಾಲಿ

ಸಿದ್ದರಾಮಯ್ಯಗೆ ಟಾಂಗ್

ಮೈಸೂರಿನಲ್ಲಿ ಪರಿಷತ್ ಟಿಕೆಟ್ ಕೇಳಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಚುನಾವಣೆಯಲ್ಲಿ ಸೋಲಿಸಿದವರನ್ನ ಅಪ್ಪಿಕೊಳ್ತಾರೆ. ಜಿಟಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳುತ್ತಾರೆ. ವೇದಿಕೆ ಮೇಲೆ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್ ಕಾರ್ಯಕರ್ತರನ್ನ ರೇಗುತ್ತಾರೆ. ಇದು ನನಗೆ ನಿಜಕ್ಕು ಸೋಜಿಗವೆನಿಸಿತು ಎಂದು ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು.

ನಾನು ಎಚ್ ಡಿ ದೇವೇಗೌಡರಾದಿಯಾಗಿ ಹಲವು ಬಾರಿ ಚುನಾವಣೆಯಲ್ಲಿ ಸೋತಿದ್ದೇವೆ. ನಾವೆಂದೂ ಕೂಡ ಪಕ್ಷದ ಕಾರ್ಯಕರ್ತರನ್ನು ಸೋಲಿಗೆ ಹೊಣೆ ಮಾಡಿಲ್ಲ. ಕಾರ್ಯಕರ್ತರನ್ನ ಸೋಲಿಸಿದ್ದೀರಿ ಎಂದು ರೇಗಾಡಿಲ್ಲ. ನಮ್ಮ ಕೆಲವು ತಪ್ಪುಗಳಿಂದ ಸೋಲುಂಟಾಗುತ್ತದೆ. ಅದಕ್ಕೆ ಕಾರ್ಯಕರ್ತರನ್ನ ದೂರುವುದು ಸರಿಯಲ್ಲ ಎಂದು ತಿಳಿಸಿದರು.

ನಂಜನಗೂಡಲ್ಲಿ ಶ್ರೀಕಂಠೇಶ್ವರನಿಗೆ ಮಾಜಿ ಸಚಿವ ರೇವಣ್ಣ ಪೂಜೆ : ಪುತ್ರನ ಗೆಲುವಿಗಾಗಿ ಪ್ರಾರ್ಥನೆ

ಜಿಟಿ ದೇವಗೌಡ ಪಕ್ಷ ತೊರೆಯುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಚ್‌ಡಿಕೆ ಈ ಕ್ಷಣದವರೆಗೂ ಜಿಟಿ ದೇವೆಗೌಡರ ನಿಲುವು ಏನು ಎಂಬುದು ಗೊತ್ತಿಲ್ಲ. ಚುನಾವಣೆ ಇನ್ನೂ ಒಂದು ವರ್ಷ ಇದೆ. ಅಲ್ಲಿಯವರೆಗೂ ನಾನು ಜಿಡಿಎಸ್ ಶಾಸಕ ಅಂತ ಹೇಳಿದ್ದಾರೆ. ರಾಜಕೀಯದಲ್ಲಿ ಏನುಬೇಕಾದರೂ ಆಗಬಹುದು. ನಾನೇನು ಅವರನ್ನು ಸಂಪರ್ಕ ಮಾಡಿಲ್ಲ ಎಂದರು.

ಸಂದೇಶ್ ನಾಗರಾಜ್ ಗೆ ಜೆಡಿಎಸ್‌ನಲ್ಲಿ ಬಾಗಿಲು ಕ್ಲೋಸ್..!

ಸಂದೇಶ ನಾಗರಾಜ್‌ ಗೆ ಜೆಡಿಎಸ್ ಬಾಗಿಲು ಕ್ಲೋಸ್ ಆಗಿದೆ. ಅವರು ಪಕ್ಷ ಬಿಟ್ಟು ಈಗಾಗಲೇ ಮೂರು ವರ್ಷ ಕಳೆದಿದೆ. ನನ್ನನ್ನು ಅವರು ಸಂಪರ್ಕ ಮಾಡಿಲ್ಲ, ನಾನು ಮಾಡಲ್ಲ. ಇಂದು ಸಂಜೆ ಜೆಡಿಎಸ್ ಸಭೆ ಇದೆ. ಅಲ್ಲಿ ಅಭ್ಯರ್ಥಿ ತೀರ್ಮಾನ ಆಗುತ್ತೆ. ಸಂದೇಶ ನಾಗರಾಜ್ ಬೇರೆ ಯಾರ ಜೊತೆ ಸಂಪರ್ಕ ಇದ್ದಾರೆ ಗೊತ್ತಿಲ್ಲ. ಅವರು ಯಾರನ್ನೆ ಸಂಪರ್ಕ ಮಾಡಿದರು ಅದು ನನಗೆ ಗೊತ್ತಿಲ್ಲ ಎಂದು ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ