ಆ್ಯಪ್ನಗರ

ಬೆಕ್ಯದಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಪಿರಿಯಾಪಟ್ಟಣ ತಾಲೂಕಿನ ಬೆಕ್ಯ ಮತ್ತು ಜವನೀಕುಪ್ಪೆ ಗ್ರಾಮದ ಸುತ್ತಮುತ್ತ ಚಿರತೆ ಪ್ರತ್ಯಕ್ಷ ಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

Vijaya Karnataka 3 Jun 2019, 5:00 am
ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲೂಕಿನ ಬೆಕ್ಯ ಮತ್ತು ಜವನೀಕುಪ್ಪೆ ಗ್ರಾಮದ ಸುತ್ತಮುತ್ತ ಚಿರತೆ ಪ್ರತ್ಯಕ್ಷ ಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
Vijaya Karnataka Web leopard appeared
ಬೆಕ್ಯದಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ


ಬೆಕ್ಯ ಗ್ರಾಮದ ನಿವಾಸಿ ದೇವೇಗೌಡ ಎಂಬುವರಿಗೆ ಸೇರಿದ ಮನೆಯ ಹಜಾರದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಶನಿವಾರ ತಡ ರಾತ್ರಿ 1 ಗಂಟೆ ಸಮಯದಲ್ಲಿ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ.

ನಾಯಿಯ ಚೀರಾಟದ ಸದ್ದು ಕೇಳಿ ಹೊರಬಂದ ದೇವೇಗೌಡರು ನಾಯಿಯೆಡೆಗೆ ಟಾರ್ಚ್‌ಲೈಟ್‌ ಬೆಳಕು ಬಿಟ್ಟಾಗ ಚಿರತೆ ಪಲಾಯನ ಮಾಡಿದೆ. ನಾಯಿಯ ಕತ್ತಿನ ಭಾಗಕ್ಕೆ ಕಚ್ಚಿದ್ದರಿಂದ ಗಾಯವಾಗಿದೆ. ಮನೆ ಮುಂಭಾಗ ರಾತ್ರಿ ಮಳೆಯಾಗಿದ್ದರಿಂದ ಚಿರತೆ ಹೆಜ್ಜೆ ಗುರುತು ಕಂಡುಬಂದಿದೆ. ಇದರಿಂದ ಆತಂಕಗೊಂಡ ಗ್ರಾಮಸ್ಥರು ರೈತರಿಗೆ ಕೃಷಿ ಚಟುವಟಿಕೆಗೆ ಮಳೆ ಬಿದ್ದಿರುವುದರಿಂದ ಜಮೀನು ಹದಗೊಂಡಿದ್ದು , ಇದೀಗ ಚಿರತೆ ಪ್ರತ್ಯಕ್ಷವಾಗಿರುವುದರಿಂದ ಕೃಷಿ ಚಟುವಟಿಕೆ ನಡೆಸಲು ಭಯಪಡುವಂತಾಗಿದೆ. ಜಮೀನಿನಲ್ಲಿ ಕೆಲಸ ಮಾಡಲು ಯಾವುದೇ ಕೆಲಸಗಾರರು ಹಿಂದೇಟು ಹಾಕುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.

ಈ ಕುರಿತು ಪಟ್ಟಣದ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದ್ದು , ಕೂಡಲೇ ಅಧಿಕಾರಿಗಳು ಕಾರ್ಯ ಪೃವೃತ್ತರಾಗಿ ಚಿರತೆಯನ್ನು ಸೆರೆಹಿಡಿಯಬೇಕೆಂದು ಮನವಿ ಮಾಡಿದ್ದಾರೆ.

ಚಿರತೆ ದಾಳಿಗೆ ಕರು ಬಲಿ: ಜವನೀಕುಪ್ಪೆ ಗ್ರಾಮದಲ್ಲಿ ಭಾನುವಾರ ಚಂದ್ರ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಕಟ್ಟಿ ಹಾಕಿದ ಕರುವೊಂದನ್ನು ಚಿರತೆ ತಿಂದು ಹಾಕಿದೆ. ಸ್ಥಳಕ್ಕೆ ಪಶುಪಾಲನಾ ಇಲಾಖೆ ಪಶುವೈದ್ಯಾಧಿಕಾರಿ ಡಾ. ಮಧುಸೂಧನ್‌ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ