ಆ್ಯಪ್ನಗರ

ಪ್ರೀತಿ ನಿರಾಕರಣೆ: ವಿದ್ಯಾರ್ಥಿನಿಗೆ ಚಾಕು ಇರಿತ

ಪ್ರೀತಿಯನ್ನು ನಿರಾಕರಣೆ ಮಾಡಿದ್ದಾಳೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಜತೆಗೆ ಅಧ್ಯಯನ ಮಾಡುವ ವಿದ್ಯಾರ್ಥಿನಿಗೆ ತರಗತಿಯಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

Vijaya Karnataka 16 Feb 2019, 5:00 am
ಮೈಸೂರು: ಪ್ರೀತಿಯನ್ನು ನಿರಾಕರಣೆ ಮಾಡಿದ್ದಾಳೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಜತೆಗೆ ಅಧ್ಯಯನ ಮಾಡುವ ವಿದ್ಯಾರ್ಥಿನಿಗೆ ತರಗತಿಯಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
Vijaya Karnataka Web love refusal stab the knife to the student
ಪ್ರೀತಿ ನಿರಾಕರಣೆ: ವಿದ್ಯಾರ್ಥಿನಿಗೆ ಚಾಕು ಇರಿತ


ಮೈಸೂರಿನ ಯುವರಾಜ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ಪದವಿ ವಿದ್ಯಾರ್ಥಿ ರೋಹಿತ್‌ ತಮ್ಮದೇ ಕಾಲೇಜಿನ ಹಾಗೂ ಕುವೆಂಪುನಗರ ನಿವಾಸಿಯಾಗಿರುವ ವಿದ್ಯಾರ್ಥಿನಿಯ ಮೇಲೆ ಈ ರೀತಿ ಕೃತ್ಯವೆಸಗಿರುವುದು.

''ಕೃತ್ಯವೆಸಗಿರುವಾತ ನಿತ್ಯವೂ ವಿದ್ಯಾರ್ಥಿನಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು. ಇದೇ ಕಾರಣಕ್ಕೆ ಶುಕ್ರವಾರ ಮಧ್ಯಾಹ್ನ ತರಗತಿಯಲ್ಲಿಯೆ ತಾನು ಪ್ರೀತಿಸುತ್ತಿದ್ದ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಎಲ್ಲಾ ವಿದ್ಯಾರ್ಥಿಗಳು ಗುಂಪುಗಟ್ಟಿ ಬಿಡಿಸಿದ್ದಾರೆ. ಇದರಿಂದ ವಿದ್ಯಾರ್ಥಿನಿಯ ಕೆನ್ನೆಗೆ ಗಾಯವಾಗಿದೆ. ಇದೇ ವೇಳೆ ರೋಹಿತ್‌ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡಿದ್ದಾನೆ. ನಂತರ ಇಬ್ಬರನ್ನೂ ಚಿಕಿತ್ಸೆಗಾಗಿ ಜೆಎಸ್‌ಎಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ಸಂದರ್ಭದಲ್ಲಿ ವೈದ್ಯರು ಗಾಯದ ಬಗ್ಗೆ ವಿಚಾರಿಸಿದಾಗ ರೋಹಿತ್‌ ಚಾಕುವಿನಿಂದ ಇರಿದಿರುವುದಾಗಿ ತಿಳಿಸಿದ್ದಾಳೆ. ನಂತರ ವೈದ್ಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಅಂತೆಯೆ ನಾವು ಸ್ಥಳಕ್ಕೆ ತೆರಳಿ ಇಬ್ಬರಿಂದಲೂ ಹೇಳಿಕೆ ಪಡೆದುಕೊಂಡು ರೋಹಿತ್‌ನನ್ನು ವಶಕ್ಕೆ ಪಡೆದಿದ್ದೇವೆ,'' ಎಂದು ಲಕ್ಷ್ಮೇಪುರಂ ಠಾಣೆ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ