ಆ್ಯಪ್ನಗರ

ಮೈಸೂರು ಬಾರ್ ಅಸೋಸಿಯೇಷನ್‌ ನಿಷೇಧಿಸಿದ್ದ 'ನಳಿನಿ' ಪರ ವಕಾಲತ್ತಿಗೆ ಮುಂದೆ ಬಂದ ವಕೀಲರು!

ಜೆಎನ್‌ಯು ದಾಳಿ ಖಂಡಿಸಿ ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ವಿವಾದಾತ್ಮಕ ನಾಮಫಲಕ ಪ್ರದರ್ಶಿಸಿದ ಆರೋಪ ಹೊತ್ತಿರುವ ನಳಿನಿ ಬಾಲಕುಮಾರ್‌ ಪರ ವಕಾಲತ್ತು ವಹಿಸಲು ಹಲವಾರು ವಕೀಲರು ಮುಂದೆ ಬಂದಿದ್ದಾರೆ.

Vijaya Karnataka Web 17 Jan 2020, 7:35 pm
ಮೈಸೂರು: ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ವಿವಾದಾತ್ಮಕ ನಾಮಫಲಕ ಪ್ರದರ್ಶಿಸಿದ ಆರೋಪ ಹೊತ್ತಿರುವ ನಳಿನಿ ಬಾಲಕುಮಾರ್‌ ಪರ ವಕಾಲತ್ತು ವಹಿಸಲು ಹಲವಾರು ವಕೀಲರು ಮುಂದೆ ಬಂದಿದ್ದಾರೆ.
Vijaya Karnataka Web Nalini Balakumar


ಆರೋಪಿತ ಸ್ಥಾನದಲ್ಲಿರು ಮೈಸೂರು ವಿವಿ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿಕೊಳ್ಳಲು ತಾವು ಸಿದ್ದರಿರುವುದಾಗಿ ಚಿಂತಕ, ವಕೀಲ ಸಿ.ಎಸ್.ದ್ವಾರಕನಾಥ್ ಸೇರಿದಂತೆ ಕೆಲವು ಹಿರಿಯ ವಕೀಲರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಬಿ.ನಳಿನಿ ಎಂಬ ದಲಿತ ವಿದ್ಯಾರ್ಥಿನಿ ಸೇರಿದಂತೆ ಉಳಿದ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ತಮ್ಮ ನಿರ್ದೋಷಿತನವನ್ನು ಸಾಬೀತುಪಡಿಸಿಕೊಳ್ಳುವ ಸಂಪೂರ್ಣ ಸಾಂವಿಧಾನಿಕ ಹಕ್ಕನ್ನು ಹೊಂದಿದ್ದಾರೆ. ಆರೋಪಿಗಳ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಲು ಅವರಿಗೆ ಸೂಕ್ತ ಕಾನೂನು ನೆರವು ನೀಡಲು ನಾವು ಬದ್ಧರಾಗಿದ್ದೇವೆ. ಯಾವುದೇ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಅವರ ಶೈಕ್ಷಣಿಕ ಅಧ್ಯಯನ ಮುಂದುವರಿಸಬೇಕೆಂದು ಈ ವಕೀಲರು ಶುಕ್ರವಾರ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳು ಓದಿನತ್ತ ಗಮನ ಹರಿಸಬೇಕು, ಪ್ರತಿಭಟನೆ ಮಾಡಿದರೆ ಪ್ರಯೋಜನವಿಲ್ಲ: ಎಸ್‌ಎಲ್‌ ಭೈರಪ್ಪ

ವಕೀಲರಾದ ಎಸ್.ಶಂಕರಪ್ಪ, ಕೆ.ಎನ್.ಜಗದೀಶ್ ಮಹದೇವು, ಬಿ.ಟಿ.ವೆಂಕಟೇಶ್, ಜೆ.ಡಿ.ಕಾಶೀನಾಥ್, ಶ್ರೀನಿವಾಸಕುಮಾರ್, ಆರ್.ಜಗನ್ನಾಥ್ ಈ ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ. ದೇಶದ್ರೋಹದ ಆರೋಪ ಹೊತ್ತ ನಳಿನಿ ಹಾಗೂ ಇತರ ಕೆಲವು ವಿದ್ಯಾರ್ಥಿಗಳ ಪರ ಯಾವುದೇ ವಕೀಲರು ವಕಾಲತ್ತು ವಹಿಸಬಾರದೆಂದು ಮೈಸೂರು ವಕೀಲರ ಸಂಘ ನಿರ್ಣಯ ಅಂಗೀಕರಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಕಾಶ್ಮೀರ ಕೂಗಿಗೆ ಎಚ್ಚೆತ್ತ ಮೈಸೂರು ವಿವಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ