ಆ್ಯಪ್ನಗರ

ರೈತರ ಬೃಹತ್‌ಪ್ರತಿಭಟನೆ

ಸರಕಾರಿ ಕಚೇರಿಗಳಲ್ಲಿ ರೈತರು ಮತ್ತು ಸಾರ್ವಜನಿಕರ ಕೆಲಸವನ್ನು ಮಾಡಿಕೊಡದೆ, ಮಾನಸಿಕ ಕಿರುಕುಳ ನೀಡುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯತೆ ಖಂಡಿಸಿ ಪಟ್ಟಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ನೇತತ್ವದಲ್ಲಿ ಬಹತ್ ಪ್ರತಿಭಟನೆ ನಡೆಸಿದರು.

Vijaya Karnataka 25 Jun 2019, 8:50 pm
ತಿ.ನರಸೀಪುರ: ಸರಕಾರಿ ಕಚೇರಿಗಳಲ್ಲಿ ರೈತರು ಮತ್ತು ಸಾರ್ವಜನಿಕರ ಕೆಲಸವನ್ನು ಮಾಡಿಕೊಡದೆ, ಮಾನಸಿಕ ಕಿರುಕುಳ ನೀಡುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯತೆ ಖಂಡಿಸಿ ಪಟ್ಟಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ನೇತತ್ವದಲ್ಲಿ ಬಹತ್ ಪ್ರತಿಭಟನೆ ನಡೆಸಿದರು.
Vijaya Karnataka Web MYR-MYS25TNP1


ಪಟ್ಟಣದ ಲೋಕೋಪಯೋಗಿ ಇಲಾಖೆ ಮುಂಭಾಗ ದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಬೇಜವಾಬ್ದಾರಿ ಯುತ ಅಧಿಕಾರಿಗಳ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ಬಸ್ ನಿಲ್ದಾಣ, ಕಾಲೇಜು ರಸ್ತೆ, ತಾಲೂಕು ಕಚೇರಿ ರಸ್ತೆವರಗೆ ಮೆರವಣಿಗೆ ನಡೆಸಿದರು.

ತಾಲೂಕು ಕಚೇರಿಗೆ ಧಾವಿಸಿದ ರೈತರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು ಪೊಲೀಸರು ವಿಲಗೊಳಿಸಿದರು. ಬಳಿಕ ತಹಸೀಲ್ದಾರ್ ನಾಗಪ್ರಶಾಂತ್ ಅವರು ಪ್ರತಿಭಟನಾಕಾರರ ಬಳಿಗೆ ಧಾವಿಸಿ ಸಮಾಧಾನಪಡಿಸಲು ಪ್ರಯತ್ನಿಸಿದರು. ತಹಸೀಲ್ದಾರರ ಸಮಾಧಾನದ ನಡುವೆಯೂ ರೈತರು ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ‘‘ತಾಲೂಕು ಕಚೇರಿ ಗಳಲ್ಲಿ ಅಧಿಕಾರಿಗಳು ರೈತರು ಮತ್ತು ಜನರ ಕೆಲಸವನ್ನು ಸರಿಯಾಗಿ ಮಾಡಿಕೊಡುತ್ತಿಲ್ಲ. ರೈತರಿಗೆ ಖಾತೆ ಮತ್ತು ಪೌತಿ ಖಾತೆ ಮಾಡಿಕೊಡಲು ವಿಳಂಬ ವಾಗುತ್ತಿರು ವುದನ್ನು ತಪ್ಪಿಸಬೇಕು. ಬಿಗಾಡಿಸುತ್ತಿರುವ ಆಧಾರ್ ನೋಂದಣಿ ಮತ್ತು ಪಡಿತರ ಕಾರ್ಡಿಗೆ ಅರ್ಜಿ ಸಲ್ಲಿಸಲಿಕ್ಕೆ ಹೆಚ್ಚುವರಿ ಕೌಂಟರ್ ತೆರೆಯಬೇಕು. ಉಪ ನೋಂದಣಿ ಕಚೇರಿಗಳಲ್ಲಿ ರೈತರಿಗಾಗುತ್ತಿರುವ ತೊಂದರೆ ಯನ್ನು ಸರಿಪಡಿಸಬೇಕು,’’ ಎಂದು ಒತ್ತಾಯಿಸಿದರು.

‘‘ಸಕಾಲಕ್ಕೆ ಉದ್ಯೋಗ ಖಾತರಿ ಯೋಜನೆಯಡಿ ಜಾಬ್ ಕಾರ್ಡ್ ಕೊಡಿಸಬೇಕು. ರಾಜ್ಯ ಸರಕಾರ ಕಾರ್ಖಾನೆ ಗಳಲ್ಲಿನ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡಿಸಿ, ಕಬ್ಬಿನ ಬಾಕಿ ಹಣ ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು. ಬ್ಯಾಂಕುಗಳಲ್ಲಿ ಕನ್ನಡ ಬಲ್ಲವರನ್ನು ವ್ಯವಸ್ಥಾಪಕರಾಗಿ ನಿಯೋಜಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾ ಗುವುದು,’’ ಎಂದು ಎಚ್ಚರಿಸಿದರು.

ತಹಸೀಲ್ದಾರ್ ನಾಗಪ್ರಶಾಂತ್ ಮಾತನಾಡಿ, ‘‘ತಾಲೂಕು ಕಚೇರಿ ಸೇರಿದಂತೆ ನಾಡಕಚೇರಿಗಳಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ರೈತರು ಮತ್ತು ಸಾರ್ವಜನಿಕರ ಕೆಲಸವನ್ನು ಸುಗಮಗೊಳಿಸುವ ಕೆಲಸ ವನ್ನು ಮಾಡುತ್ತಿದ್ದೇವೆ. ರೈತರ ಕುಂದು ಕೊರತೆಗಳನ್ನು ಆಲಿಸಿ, ಸಮಸ್ಯೆ ಪರಿಹರಿಸಲು ತಾಲೂಕು ಮಟ್ಟದ ರೈತ ಸಭೆಯನ್ನು ನಡೆಸಲಿಕ್ಕೆ ಸಿದ್ಧರಿದ್ದೇವೆ. ರೈತ ಮುಖಂಡರು ಹಾಗೂ ಪ್ರಗತಿಪರ ರೈತರ ಸಲಹೆಯಂತೆ ಸಭೆಯ ದಿನವನ್ನು ನಿಗದಿ ಮಾಡುತ್ತೇವೆ. ರೈತರ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಜರುಗಿಸುತ್ತೇವೆ,’’ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ಎಂ.ದೇವರಾಜು, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್, ಬಿ.ಪಿ.ಪರಶಿವಮೂರ್ತಿ, ಮುಖಂಡರಾದ ಬೀಸಿಹಳ್ಳಿ ರಾಜುಗೌಡ, ಹೆಗ್ಗೂರು ರಂಗರಾಜು, ಕೆ.ಎಂ.ಕುಮಾರ, ಅತ್ತಹಳ್ಳಿ ರಾಮಪ್ರಸಾದ್, ಚಿನ್ನಸ್ವಾಮಿ, ಸುರೇಶ, ಗಿರೀಶ್, ಪ್ರಸಾದ್ ನಾಯಕ, ರವಿಕುಮಾರ್, ಮಲ್ಲೇಶ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ