ಮೈಸೂರು: PFI ಕಾರ್ಯಕರ್ತರು ಪ್ರಧಾನ ಮಂತ್ರಿ ಹತ್ಯೆಗೆ ಸ್ಕೆಚ್ ಹಾಕಿದ್ರು ಅಂತ ಎಲ್ಲರಿಗೂ ಗೊತ್ತು. ರಾಜ್ಯದಲ್ಲಿ ಅಶಾಂತಿ ಸೃಷ್ಟಿ ಮಾಡುವುದು ಇವರ ಕೆಲಸ. ಅಂತವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ರಾಜ್ಯದ ಹಲವೆಡೆ PFI ಮುಖಂಡರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಆರೋಗ್ಯ ದಸರಾ ಉದ್ಘಾಟನೆ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಬಹಳ ಹಿಂದೆಯೇ ಪಿಎಫ್ಐ ವಿರುದ್ಧ ಕ್ರಮ ಆಗಬೇಕಿತ್ತು. ಅವರ ಮೇಲೆ ಆರೋಪಗಳಿದ್ರೂ ಕೂಡಾ ಕಾಂಗ್ರೆಸ್ ಸರ್ಕಾರ 2 ಸಾವಿರ ಜನರ ಮೇಲಿದ್ದ ಪ್ರಕರಣ ಕೈ ಬಿಟ್ಟು ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶ ದ್ರೋಹ ಮಾಡುವಂತಹ, ಅಶಾಂತಿ ಉಂಟು ಮಾಡುವ ಸಂಘ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳೋದು ನಮ್ಮ ಸರ್ಕಾರದ ಕರ್ತವ್ಯ. ಅದನ್ನ ಪಾಲಿಸಿಕೊಂಡು ನಾವು ಬರುತ್ತಿದ್ದೇವೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.
ಇತಿಹಾಸದ ಕಟು ಸತ್ಯಕ್ಕೆ ಸಿದ್ದರಾಮಯ್ಯ ಉತ್ತರ ಕೊಡಲಿ: ಸುಧಾಕರ್
ಈ ಹಿಂದೆ ಕಾಂಗ್ರೆಸ್ನಲ್ಲಿ 173 ಸ್ಥಾನ ಪಡೆದು ಸಿಎಂ ಆದ ವೀರೇಂದ್ರ ಪಾಟೀಲರನ್ನ ಸಕಾರಣ ಇಲ್ಲದೆ ಕೆಳಗಿಳಿಸಿದರು. ರಾಜಶೇಖರ ಮೂರ್ತಿ, ನಿಜಲಿಂಗಪ್ಪ ಅವರನ್ನು ಕೆಳಗಿಳಿಸಿದರು. ಉತ್ತಮ ಆಡಳಿತ ನೀಡಿದ ಎಸ್. ಎಂ. ಕೃಷ್ಣರನ್ನು ಕೇಂದ್ರ ಸರ್ಕಾರದಿಂದ ತೆಗೆದು ಮಹಾರಾಷ್ಟ್ರಕ್ಕೆ ಕಳುಹಿಸಿದ್ರು. ಇದೆಲ್ಲಾ ಇತಿಹಾಸದ ಕಟು ಸತ್ಯ. ಸಿದ್ದರಾಮಣ್ಣ ಅವರಿಗೆ ಅಪ್ರಿಯವಾದ ಸತ್ಯ ಇದು. ಇದಕ್ಕೆಲ್ಲಾ ಅವರು ಉತ್ತರ ಕೊಡಲಿ, ಆಮೇಲೆ ನಾನು ಮಾತನಾಡುತ್ತೇನೆ ಎಂದು ಹೇಳಿದ ಸಚಿವ ಸುಧಾಕರ್, ಎಸ್. ಎಂ. ಕೃಷ್ಣ ಅವರು ಚೆನ್ನಾಗಿದ್ದಾರೆ. ಇವತ್ತು ಬೆಳಿಗ್ಗೆ ಕೂಡ ಅಪ್ಡೇಟ್ ತೆಗೆದುಕೊಂಡಿದ್ದೀನಿ. ಇವತ್ತಿನಿಂದ ಸಹಜವಾಗಿಯೇ ಉಸಿರಾಡಲು ಸಾಧ್ಯ ಆಗುತ್ತೆ ಅಂತ ಹೇಳಿದ್ದಾರೆ. ಎರಡು ಮೂರು ದಿನದಲ್ಲಿ ವಾರ್ಡ್ಗೆ ಶಿಫ್ಟ್ ಆಗಿ ಗುಣಮುಖರಾಗುತ್ತಾರೆ ಎಂದು ಮಾಹಿತಿ ನೀಡಿದರು.
ಮೈಸೂರಲ್ಲಿ ಮತ್ತೆ 3 ಮಂದಿ ಬಂಧನ!
ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ, ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ, ವಿಚಾರಣೆ ವೇಳೆ ದೊರೆತ ಮಾಹಿತಿ ಆಧಾರದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮೈಸೂರಿನ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಪಿಎಫ್ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಹೊರ ಬಿದ್ದಿವೆ.
ಎನ್ಐಎ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಈ ಸಂಬಂಧ ಮಾಹಿತಿ ನೀಡಿದ್ದು, ಆ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷ ಬಿಲಾಲ್ ಷರೀಫ್ ಅವರನ್ನು ಕಲ್ಯಾಣ ಗಿರಿ ನಿವಾಸದಲ್ಲಿ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ. ಮತ್ತೊಬ್ಬ ಮೈಸೂರು ಜಿಲ್ಲಾ ಪಿಎಫ್ಐ ಮಾಜಿ ಕಾರ್ಯದರ್ಶಿ ಜಾಫರ್ ಷರೀಫ್ ಹಾಗೂ ಪಿಎಫ್ಐ ಸಕ್ರಿಯ ಕಾರ್ಯಕರ್ತ ಫೈರೋಜುಲ್ಲಾ ಷರೀಫ್ ಅವರನ್ನು ಅವರ ಮನೆಗಳಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ದೇಶ ದ್ರೋಹ ಮಾಡುವಂತಹ, ಅಶಾಂತಿ ಉಂಟು ಮಾಡುವ ಸಂಘ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳೋದು ನಮ್ಮ ಸರ್ಕಾರದ ಕರ್ತವ್ಯ. ಅದನ್ನ ಪಾಲಿಸಿಕೊಂಡು ನಾವು ಬರುತ್ತಿದ್ದೇವೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.
ಇತಿಹಾಸದ ಕಟು ಸತ್ಯಕ್ಕೆ ಸಿದ್ದರಾಮಯ್ಯ ಉತ್ತರ ಕೊಡಲಿ: ಸುಧಾಕರ್
ಈ ಹಿಂದೆ ಕಾಂಗ್ರೆಸ್ನಲ್ಲಿ 173 ಸ್ಥಾನ ಪಡೆದು ಸಿಎಂ ಆದ ವೀರೇಂದ್ರ ಪಾಟೀಲರನ್ನ ಸಕಾರಣ ಇಲ್ಲದೆ ಕೆಳಗಿಳಿಸಿದರು. ರಾಜಶೇಖರ ಮೂರ್ತಿ, ನಿಜಲಿಂಗಪ್ಪ ಅವರನ್ನು ಕೆಳಗಿಳಿಸಿದರು. ಉತ್ತಮ ಆಡಳಿತ ನೀಡಿದ ಎಸ್. ಎಂ. ಕೃಷ್ಣರನ್ನು ಕೇಂದ್ರ ಸರ್ಕಾರದಿಂದ ತೆಗೆದು ಮಹಾರಾಷ್ಟ್ರಕ್ಕೆ ಕಳುಹಿಸಿದ್ರು. ಇದೆಲ್ಲಾ ಇತಿಹಾಸದ ಕಟು ಸತ್ಯ. ಸಿದ್ದರಾಮಣ್ಣ ಅವರಿಗೆ ಅಪ್ರಿಯವಾದ ಸತ್ಯ ಇದು. ಇದಕ್ಕೆಲ್ಲಾ ಅವರು ಉತ್ತರ ಕೊಡಲಿ, ಆಮೇಲೆ ನಾನು ಮಾತನಾಡುತ್ತೇನೆ ಎಂದು ಹೇಳಿದ ಸಚಿವ ಸುಧಾಕರ್, ಎಸ್. ಎಂ. ಕೃಷ್ಣ ಅವರು ಚೆನ್ನಾಗಿದ್ದಾರೆ. ಇವತ್ತು ಬೆಳಿಗ್ಗೆ ಕೂಡ ಅಪ್ಡೇಟ್ ತೆಗೆದುಕೊಂಡಿದ್ದೀನಿ. ಇವತ್ತಿನಿಂದ ಸಹಜವಾಗಿಯೇ ಉಸಿರಾಡಲು ಸಾಧ್ಯ ಆಗುತ್ತೆ ಅಂತ ಹೇಳಿದ್ದಾರೆ. ಎರಡು ಮೂರು ದಿನದಲ್ಲಿ ವಾರ್ಡ್ಗೆ ಶಿಫ್ಟ್ ಆಗಿ ಗುಣಮುಖರಾಗುತ್ತಾರೆ ಎಂದು ಮಾಹಿತಿ ನೀಡಿದರು.
ಮೈಸೂರಲ್ಲಿ ಮತ್ತೆ 3 ಮಂದಿ ಬಂಧನ!
ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ, ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ, ವಿಚಾರಣೆ ವೇಳೆ ದೊರೆತ ಮಾಹಿತಿ ಆಧಾರದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮೈಸೂರಿನ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಪಿಎಫ್ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಹೊರ ಬಿದ್ದಿವೆ.
ಎನ್ಐಎ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಈ ಸಂಬಂಧ ಮಾಹಿತಿ ನೀಡಿದ್ದು, ಆ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷ ಬಿಲಾಲ್ ಷರೀಫ್ ಅವರನ್ನು ಕಲ್ಯಾಣ ಗಿರಿ ನಿವಾಸದಲ್ಲಿ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ. ಮತ್ತೊಬ್ಬ ಮೈಸೂರು ಜಿಲ್ಲಾ ಪಿಎಫ್ಐ ಮಾಜಿ ಕಾರ್ಯದರ್ಶಿ ಜಾಫರ್ ಷರೀಫ್ ಹಾಗೂ ಪಿಎಫ್ಐ ಸಕ್ರಿಯ ಕಾರ್ಯಕರ್ತ ಫೈರೋಜುಲ್ಲಾ ಷರೀಫ್ ಅವರನ್ನು ಅವರ ಮನೆಗಳಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.