ಮೈಸೂರು: ರಮೇಶ್ ಜಾರಕಿಹೊಳಿ ಅವರಪ್ರಕರಣದ ಹಿನ್ನೆಲೆ ಏನು ಎಂಬುದನ್ನು ತಿಳಿಯಬೇಕು. ಅಲ್ಲದೇ ಸತ್ಯಾಸತ್ಯತೆ ಹೊರಗೆ ಬರಲಾಗದೆ ಏನನ್ನೂ ಹೇಳಲಾಗುವುದಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶ್ರೀ ಶಾಖಾ ಮಠಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ರಮೇಶ್ ಜಾರಕಿಹೊಳಿಯಿಂದ ನಾನು ತಪ್ಪಿತಸ್ಥನಲ್ಲ ಎಂಬ ಹೇಳಿಕೆ ಬಂದಿದೆ. ಈಗ ಈ ಪ್ರಕರಣದ ವಿಚಾರಣೆ ಆಗಬೇಕಿದೆ. ಆ ನಂತರ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ಇನ್ನು, ಬುಧವಾರ ಮಧ್ಯಾಹ್ನ ಕ್ಯಾಬಿನೆಟ್ ಮೀಟಿಂಗ್ ಇದೆ. ಅವರು ಬರ್ತಾರಾ..? ಸಿಎಂ ಭೇಟಿ ಮಾಡಲಿದ್ದಾರಾ ಎಂಬುದನ್ನು ಕಾದು ನೋಡೋಣ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶ್ರೀ ಶಾಖಾ ಮಠಕ್ಕೆ ಬುಧವಾರ ಬೆಳಗ್ಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಜೊತೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದರು. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶೃತಿ ಕೃಷ್ಣ ಸಚಿವರಿಗೆ ಸಾಥ್ ನೀಡಿದ್ದು, ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಎಲ್ಲರೂ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದು ಆರೋಗ್ಯವನ್ನು ವಿಚಾರಿಸಿದರು.
ಇನ್ನು, ಬುಧವಾರ ಮಧ್ಯಾಹ್ನ ಕ್ಯಾಬಿನೆಟ್ ಮೀಟಿಂಗ್ ಇದೆ. ಅವರು ಬರ್ತಾರಾ..? ಸಿಎಂ ಭೇಟಿ ಮಾಡಲಿದ್ದಾರಾ ಎಂಬುದನ್ನು ಕಾದು ನೋಡೋಣ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶ್ರೀ ಶಾಖಾ ಮಠಕ್ಕೆ ಬುಧವಾರ ಬೆಳಗ್ಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಜೊತೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದರು. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶೃತಿ ಕೃಷ್ಣ ಸಚಿವರಿಗೆ ಸಾಥ್ ನೀಡಿದ್ದು, ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಎಲ್ಲರೂ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದು ಆರೋಗ್ಯವನ್ನು ವಿಚಾರಿಸಿದರು.