ಮೈಸೂರು: ಗಗನಚುಕ್ಕಿ ಪ್ರವಾಸಿ ತಾಣದಲ್ಲಿ ಕುಡಿಯುವ ನೀರು ಹಾಗೂ ಟಾಯ್ಲೆಟ್ ಸಮಸ್ಯೆ ಬಗ್ಗೆ ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಬುಧವಾರ ಸ್ಥಳಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಲಿದ್ದಾರೆ.
ಗಗನಚುಕ್ಕಿ ಪ್ರವಾಸಿ ತಾಣದ ಸಮಸ್ಯೆಗಳ ಬಗ್ಗೆ 'ವಿಜಯ ಕರ್ನಾಟಕ' ಸೋಮವಾರದ ಸಂಚಿಕೆಯಲ್ಲಿ ಪ್ರಕಟಿಸಿರುವ ವರದಿಗೆ ಸಚಿವ ಮಹೇಶ್ ಸ್ಪಂದಿಸಿ ಈ ಕೂಡಲೇ ಅಗತ್ಯವಾದ ತುರ್ತು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
''ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳೊಂದಿಗೆ ಬುಧವಾರ ಗಗನಚುಕ್ಕಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಪ್ರವಾಸಿಗರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುತ್ತೇನೆ,'' ಎಂದು ಸಚಿವ ಮಹೇಶ್ 'ವಿಜಯ ಕರ್ನಾಟಕ'ಕ್ಕೆ ಕರೆ ಮಾಡಿ ತಿಳಿಸಿದರು.
ಗಗನಚುಕ್ಕಿ ಪ್ರವಾಸಿ ತಾಣದ ಸಮಸ್ಯೆಗಳ ಬಗ್ಗೆ 'ವಿಜಯ ಕರ್ನಾಟಕ' ಸೋಮವಾರದ ಸಂಚಿಕೆಯಲ್ಲಿ ಪ್ರಕಟಿಸಿರುವ ವರದಿಗೆ ಸಚಿವ ಮಹೇಶ್ ಸ್ಪಂದಿಸಿ ಈ ಕೂಡಲೇ ಅಗತ್ಯವಾದ ತುರ್ತು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
''ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳೊಂದಿಗೆ ಬುಧವಾರ ಗಗನಚುಕ್ಕಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಪ್ರವಾಸಿಗರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುತ್ತೇನೆ,'' ಎಂದು ಸಚಿವ ಮಹೇಶ್ 'ವಿಜಯ ಕರ್ನಾಟಕ'ಕ್ಕೆ ಕರೆ ಮಾಡಿ ತಿಳಿಸಿದರು.