ಆ್ಯಪ್ನಗರ

VK ಇಂಪ್ಯಾಕ್ಟ್: ನಾಳೆ ಗಗನಚುಕ್ಕಿಗೆ ಸಚಿವ ಸಾರಾ ಮಹೇಶ್‌ ಭೇಟಿ

ಗಗನಚುಕ್ಕಿ ಪ್ರವಾಸಿ ತಾಣದಲ್ಲಿ ಕುಡಿಯುವ ನೀರು ಹಾಗೂ ಟಾಯ್ಲೆಟ್‌ ಸಮಸ್ಯೆ ಬಗ್ಗೆ ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಬುಧವಾರ ಸ್ಥಳಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಲಿದ್ದಾರೆ.

Vijaya Karnataka 24 Jul 2018, 7:48 am
ಮೈಸೂರು: ಗಗನಚುಕ್ಕಿ ಪ್ರವಾಸಿ ತಾಣದಲ್ಲಿ ಕುಡಿಯುವ ನೀರು ಹಾಗೂ ಟಾಯ್ಲೆಟ್‌ ಸಮಸ್ಯೆ ಬಗ್ಗೆ ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಬುಧವಾರ ಸ್ಥಳಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಲಿದ್ದಾರೆ.
Vijaya Karnataka Web sa ra mahesh


ಗಗನಚುಕ್ಕಿ ಪ್ರವಾಸಿ ತಾಣದ ಸಮಸ್ಯೆಗಳ ಬಗ್ಗೆ 'ವಿಜಯ ಕರ್ನಾಟಕ' ಸೋಮವಾರದ ಸಂಚಿಕೆಯಲ್ಲಿ ಪ್ರಕಟಿಸಿರುವ ವರದಿಗೆ ಸಚಿವ ಮಹೇಶ್‌ ಸ್ಪಂದಿಸಿ ಈ ಕೂಡಲೇ ಅಗತ್ಯವಾದ ತುರ್ತು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

''ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳೊಂದಿಗೆ ಬುಧವಾರ ಗಗನಚುಕ್ಕಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಪ್ರವಾಸಿಗರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುತ್ತೇನೆ,'' ಎಂದು ಸಚಿವ ಮಹೇಶ್‌ 'ವಿಜಯ ಕರ್ನಾಟಕ'ಕ್ಕೆ ಕರೆ ಮಾಡಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ