ಆ್ಯಪ್ನಗರ

ಡಿಕೆಶಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಎಸ್‌ ಟಿ ಸೋಮಶೇಖರ್‌ ವಾಗ್ದಾಳಿ

ಡಿಕೆ ಶಿವಕುಮಾರ್‌ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಭಾನುವಾರ ಮಾತನಾಡಿದ ಅವರು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಲು ಕಾರಣವೇನು?

Vijaya Karnataka Web 25 Oct 2020, 2:36 pm
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸಚಿವ ಎಸ್‌ಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಡಿಕೆಶಿ ಮಾತನ್ನು ಸ್ವತಃ ಸಿದ್ದರಾಮಯ್ಯ ಅವರೇ ಕೇಳುವುದಿಲ್ಲ, ಹಾಗಾಗಿ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ ಎಂದರು.
Vijaya Karnataka Web st somashekar


ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ತಾಯಿಗೆ ದ್ರೋಹ ಮಾಡಿದವರಿಗೆ ಮತ ಹಾಕಬೇಡಿ ಎಂದು ಮುನಿರತ್ನ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಎಸ್‌ಟಿ ಸೋಮಶೇಖರ್ ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದರು.

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಚುನಾವಣೆಯೂ ಬಂದಿಲ್ಲ! ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಸಿದ್ದು ಉತ್ತರ

ನಾನು, ಮುನಿರತ್ನ ಹಾಗೂ ಬೈರತಿ ಬಸವರಾಜು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದೆವು. ಅಂದು ನಾವು ಪಕ್ಷ ತೊರೆಯುವಾಗ ಇವರೆಲ್ಲಾ ಎಲ್ಲಿ ಹೋಗಿದ್ದರು? ಎಂದು ಪ್ರಶ್ನಿಸಿದರು. ಪಕ್ಷ ತೊರೆಯಲು ಕಾರಣ ಏನು ಎಂಬ ವಿಚಾರವನ್ನು ನಾವು ಇವರಿಗೆ ತಿಳಿಸಿರಲಿಲ್ವ? ಎಂದು ಕಿಡಿಕಾರಿದರು.

ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರಿಲ್ಲ. ಎಲ್ಲಾ ಕಾರ್ಯಕರ್ತರೂ ಮುನಿರತ್ನ ಅವರ ಹಿಂದೆ ಬಂದಿದ್ದಾರೆ. ಕಾಂಗ್ರೆಸ್ ಮುಖಂಡರು ಹೊರಗಿನಿಂದ ಜನರನ್ನು ಕರೆತಂದು ಭಿತ್ತಿ ಪತ್ರ ಹಂಚುತ್ತಿದ್ದಾರೆ. ಇದನ್ನೇ ಮುನಿರತ್ನ ಅವರು ಕ್ಷೇತ್ರದಲ್ಲಿ ಭಯದ ವಾತಾವರಣ ಎಂದು ಹೇಳಿರುವುದು ಎಂದರು.

ಮುನಿರತ್ನ ಕಳೆದ 6 ವರ್ಷದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅಭಿವೃದ್ಧಿ ವಿಚಾರ ಇಟ್ಟುಕೊಂಡು ಮತ ಕೇಳುತ್ತಿದ್ದೇವೆ. ಹೀಗಾಗಿ ನಮ್ಮ ಅಭ್ಯರ್ಥಿ ಈ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂದು ಎಸ್.ಟಿ. ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ