ಮೈಸೂರು: ಶೈಕ್ಷಣಿಕ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೈಸೂರು ವಿವಿಯಲ್ಲಿ ವಿವಿಧ ಸಂಘಟನೆಗಳು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಅಂತ್ಯಗೊಂಡಿದೆ.
ಎರಡು ದಿನದಿಂದ ಕ್ರಾಫರ್ಡ್ ಭವನದ ಗೇಟ್ ಮುಂದೆ ಹಲವು ಸಂಘಟನೆಗಳು ಧರಣಿ ನಡೆಸುತ್ತಿದ್ದವು. ಶನಿವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದ್ದ ಜಿ.ಟಿ. ದೇವೇಗೌಡ, ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಆಯಿಷಾ ಎಂ. ಶರೀಫ್ ಸೇರಿದಂತೆ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿ, ನಿಮ್ಮ ಬೇಡಿಕೆಗಳನ್ನು ಶೀಘ್ರ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಕುಲಸಚಿವ ರಾಜಣ್ಣ ಅವರ ಕುರಿತು ಸರಕಾರ ತೀರ್ಮಾನ ಕೈಗೊಳ್ಳುತ್ತದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರವೇ ಕ್ರಮಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳ ಮೇಲೆ ಕೇಸ್ ದಾಖಲಿಸಿರುವುದು ಸರಿಯಲ್ಲ. ವಿವಿಯಲ್ಲಿ ಕ್ರಿಮಿನಲ್ಗಳು ಇಲ್ಲ. ಹಾಗಿದ್ದ ಮೇಲೆ ಅಲ್ಲಿಗೆ ಪೊಲೀಸ್ ಪ್ರವೇಶವು ಅಗತ್ಯವಿಲ್ಲ. ವಿದ್ಯಾರ್ಥಿಗಳ ಮೇಲಿನ ಕೇಸ್ಗಳನ್ನು ಹಿಂಪಡೆದು, ಅವರಿಗೆ ಸೂಕ್ತ ಮೂಲ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.
ದಲಿತ ಸಂಘರ್ಷ ಸಮಿತಿ ಸಂಚಾಲಕ ಚೋರ್ನಹಳ್ಳಿ ಶಿವಣ್ಣ ಮಾತನಾಡಿ, ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಎನ್.ಮಹೇಶ್ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಕೈಬಿಟ್ಟಿದ್ದೇವೆ. ಶೀಘ್ರವೇ ವಿದ್ಯಾರ್ಥಿಗಳ ಮೇಲಿನ ಕೇಸ್ಗಳನ್ನು ಹಿಂಪಡೆದು ಅವರಿಗೆ ಮೂಲಖ ಸೌಕರ್ಯಗಳನ್ನು ಒದಗಿಸಿಕೊಡಲಿ ಎಂದು ತಿಳಿಸಿದರು.
ಸಂಶೋಧಕರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಸೋಸಲೆ ಮಹೇಶ್,ಗೋಪಾಲ್ ಸೇರಿದಂತೆ ಅನೇಕರು ಹಾಜರಿದ್ದರು.
ಎರಡು ದಿನದಿಂದ ಕ್ರಾಫರ್ಡ್ ಭವನದ ಗೇಟ್ ಮುಂದೆ ಹಲವು ಸಂಘಟನೆಗಳು ಧರಣಿ ನಡೆಸುತ್ತಿದ್ದವು. ಶನಿವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದ್ದ ಜಿ.ಟಿ. ದೇವೇಗೌಡ, ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಆಯಿಷಾ ಎಂ. ಶರೀಫ್ ಸೇರಿದಂತೆ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿ, ನಿಮ್ಮ ಬೇಡಿಕೆಗಳನ್ನು ಶೀಘ್ರ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಕುಲಸಚಿವ ರಾಜಣ್ಣ ಅವರ ಕುರಿತು ಸರಕಾರ ತೀರ್ಮಾನ ಕೈಗೊಳ್ಳುತ್ತದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರವೇ ಕ್ರಮಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳ ಮೇಲೆ ಕೇಸ್ ದಾಖಲಿಸಿರುವುದು ಸರಿಯಲ್ಲ. ವಿವಿಯಲ್ಲಿ ಕ್ರಿಮಿನಲ್ಗಳು ಇಲ್ಲ. ಹಾಗಿದ್ದ ಮೇಲೆ ಅಲ್ಲಿಗೆ ಪೊಲೀಸ್ ಪ್ರವೇಶವು ಅಗತ್ಯವಿಲ್ಲ. ವಿದ್ಯಾರ್ಥಿಗಳ ಮೇಲಿನ ಕೇಸ್ಗಳನ್ನು ಹಿಂಪಡೆದು, ಅವರಿಗೆ ಸೂಕ್ತ ಮೂಲ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.
ದಲಿತ ಸಂಘರ್ಷ ಸಮಿತಿ ಸಂಚಾಲಕ ಚೋರ್ನಹಳ್ಳಿ ಶಿವಣ್ಣ ಮಾತನಾಡಿ, ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಎನ್.ಮಹೇಶ್ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಕೈಬಿಟ್ಟಿದ್ದೇವೆ. ಶೀಘ್ರವೇ ವಿದ್ಯಾರ್ಥಿಗಳ ಮೇಲಿನ ಕೇಸ್ಗಳನ್ನು ಹಿಂಪಡೆದು ಅವರಿಗೆ ಮೂಲಖ ಸೌಕರ್ಯಗಳನ್ನು ಒದಗಿಸಿಕೊಡಲಿ ಎಂದು ತಿಳಿಸಿದರು.
ಸಂಶೋಧಕರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಸೋಸಲೆ ಮಹೇಶ್,ಗೋಪಾಲ್ ಸೇರಿದಂತೆ ಅನೇಕರು ಹಾಜರಿದ್ದರು.