ಆ್ಯಪ್ನಗರ

ರಾಮದಾಸ್‌ಗೆ ತಪ್ಪಿದ ಸಚಿವ ಸ್ಥಾನ: ಅಪಸ್ವರ ಎತ್ತದಂತೆ ನಿರ್ಣಯ

ಶಾಸಕ ಎಸ್‌.ಎ.ರಾಮದಾಸ್‌ ಅವರಿಗೆ ಸಚಿವ ಸ್ಥಾನ ತಪ್ಪಿದ್ದರೂ ಯಾವುದೇ ಸಂದರ್ಭದಲ್ಲಿಯೂ ಪಕ್ಷ, ರಾಜ್ಯ ಮತ್ತು ದೇಶಕ್ಕೆ ಮುಜುಗರವಾಗದಂತೆ ನಡೆದುಕೊಳ್ಳವ ನಿರ್ಣಯವನ್ನು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಕಾರ‍್ಯಕರ್ತರು ಕೈಗೊಂಡಿದ್ದಾರೆ.

Vijaya Karnataka 22 Aug 2019, 5:00 am
ಮೈಸೂರು: ಶಾಸಕ ಎಸ್‌.ಎ.ರಾಮದಾಸ್‌ ಅವರಿಗೆ ಸಚಿವ ಸ್ಥಾನ ತಪ್ಪಿದ್ದರೂ ಯಾವುದೇ ಸಂದರ್ಭದಲ್ಲಿಯೂ ಪಕ್ಷ, ರಾಜ್ಯ ಮತ್ತು ದೇಶಕ್ಕೆ ಮುಜುಗರವಾಗದಂತೆ ನಡೆದುಕೊಳ್ಳವ ನಿರ್ಣಯವನ್ನು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಕಾರ‍್ಯಕರ್ತರು ಕೈಗೊಂಡಿದ್ದಾರೆ.
Vijaya Karnataka Web missing ministerial position for ramadas determination of epilepsy
ರಾಮದಾಸ್‌ಗೆ ತಪ್ಪಿದ ಸಚಿವ ಸ್ಥಾನ: ಅಪಸ್ವರ ಎತ್ತದಂತೆ ನಿರ್ಣಯ


ನಗರದ ಗನ್‌ಹೌಸ್‌ ವೃತ್ತದಲ್ಲಿರುವ ಶ್ರೀ ವಿದ್ಯಾಶಂಕರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕೆ.ಆರ್‌.ಕ್ಷೇತ್ರದ ಅಧ್ಯಕ್ಷ ಬಿ.ವಿ.ಮಂಜುನಾಥ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

''ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ದೇಶಕ್ಕೆ ನೀಡಿದ ಸಂದೇಶದಂತೆ ಭ್ರಷ್ಟಾಚಾರ ರಹಿತ ದೇಶ, ಪ್ಲಾಸ್ಟಿಕ್‌ ಮುಕ್ತ ದೇಶ, ಜನಸಂಖ್ಯೆ ನಿಯಂತ್ರಣ ಹಾಗೂ ಜಲ ಮತ್ತು ಪರಿಸರ ಸಂರಕ್ಷಣೆಗಾಗಿ ನಾವೆಲ್ಲರೂ ಪಣತೊಟ್ಟು ಪ್ರಧಾನಿಗಳ ಕೈ ಬಲಪಡಿಸುತ್ತೇವೆ'' ಎಂದು ಪ್ರತಿಜ್ಞೆ ಮಾಡಿದರು.

ಶಾಸಕ ರಾಮದಾಸ್‌ ಮಾತನಾಡಿ, ''ರಾಜಕಾರಣದಲ್ಲಿ ಹಲವಾರು ಏಳುಬೀಳುಗಳನ್ನು ಕಂಡಿದ್ದೇನೆ. ಯಾವುದೇ ಸಂದರ್ಭದಲ್ಲೂ ವಿಚಲಿತನಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಉತ್ತಮ ಆಡಳಿತವನ್ನು ನೀಡುತ್ತಿರುವ ಸಂದರ್ಭದಲ್ಲಿ ನಮ್ಮ ನಡವಳಿಕೆಗಳು ಮತ್ತು ಹೇಳಿಕೆಗಳು ಹೇಗಿರಬೇಕು ಎಂದು ಅರ್ಥೈಸಿಕೊಳ್ಳಬೇಕಿದೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ